ಕ್ರೀಡಾಂಗಣ ಸಿಬ್ಬಂದಿ ವೇತನ ವಿಳಂಬ


Team Udayavani, Dec 13, 2019, 5:43 PM IST

uk-tdy-1

ಶಿರಸಿ: ಮೂಲ ಸೌಕರ್ಯ, ವಾರ್ಷಿಕ ಅಗತ್ಯ ಕಾಮಗಾರಿ, ಸೂಕ್ತ ಕ್ರೀಡಾಂಗಣ ಸಾಮಗ್ರಿ ಕೊರತೆ, ಸಿಬ್ಬಂದಿ ವೇತನ ವಿಳಂಬದ ನೀತಿ ಖಂಡಿಸಿ ಜ.1 ರಂದು ಇಲ್ಲಿನ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣಕ್ಕೆ ಬೀಗ ಹಾಕಿ ಪ್ರತಿಭಟಿಸಲಾಗುವುದು ಎಂದು ಸ್ಪಂದನ ನ್ಪೋರ್ಟ್ಸ್ ಅಕಾಡಮಿ ಅಧ್ಯಕ್ಷ ಎ.ರವೀಂದ್ರ ನಾಯ್ಕ ತಿಳಿಸಿದ್ದಾರೆ.

ಪದೇಪದೇ ಕ್ರೀಡಾಂಗಣದ ನಿರ್ವಹಣೆ ಕುರಿತು ಆಕ್ಷೇಪ, ಒತ್ತಾಯ, ಮನವಿ ನೀಡಿದ್ದಾಗ್ಯೂ ಕನಿಷ್ಠ ಮಟ್ಟದಕಾಮಗಾರಿ ಕೆಲಸ ಜರುಗಿಸದೇ ಸಂಪೂರ್ಣವಾಗಿ ಕ್ರೀಡಾಂಗಣದ ಅಭಿವೃದ್ಧಿಗೆ ಆಡಳಿತ ಮಂಡಳಿ ನಿರ್ಲಕ್ಷಿಸಿರುವುದರಿಂದ ಪ್ರತಿಭಟನೆ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.

ಕ್ರೀಡಾಂಗಣದಲ್ಲಿನ ನಿರ್ವಹಣೆ ಮತ್ತು ಕನಿಷ್ಠ ಮಟ್ಟದಲ್ಲಿ ವಾರ್ಷಿಕವಾಗಿ ನಿರಂತರವಾಗಿ ಸ್ವತ್ಛ ಮಾಡದೇ, ಗಿಡಗಂಟಿಗಳು ಓಟದ ಪಥದಲ್ಲಿ ಬೆಳೆದಿರುವುದಲ್ಲದೇ ಕ್ರೀಡಾಂಗಣದಲ್ಲಿ ಉಬ್ಬು ತಗ್ಗು ಸಮತಟ್ಟು ಮಾಡುವಲ್ಲಿ ಕಾಮಗಾರಿ ಜರುಗಿಸದೇ ಇರುವುದು. ಮಳೆಗಾಲದಲ್ಲಿ ಕೆಸರುಗದ್ದೆ ಆಗುವ ಓಟದ ಪಥದಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ದಶಕದಿಂದಲೂ ಸಾರ್ವಜನಿಕವಾಗಿ ಒತ್ತಾಯಿಸಿದಾಗ್ಯೂ ಕ್ರೀಡಾಂಗಣ ಬಗ್ಗೆ ನಿರ್ಲಕ್ಷಿಸಿರುವುದು ಖಂಡನಾರ್ಹ ಎಂದು ಹೇಳಿದ್ದಾರೆ.

ಬಂದಿರುವಂಥ ವಾರ್ಷಿಕ ಭಾಡಿಗೆಗೂ ಸಹಿತ ಕ್ರೀಡಾಂಗಣದ ಅಭಿವೃದ್ಧಿಗೆ ವಿನಿಯೋಗಿಸದೇ ಇರುವುದು ವಿಷಾದಕರ. ಜಿಲ್ಲಾ ಮಟ್ಟದ ಕ್ರೀಡಾಂಗಣ ಎಂದು ಗುರುತಿಸಲ್ಪಟ್ಟಂತ ಮಾರಿಕಾಂಬಾ ಕ್ರೀಡಾಂಗಣದಲ್ಲಿ ತರಬೇತುದಾರರಿಲ್ಲದೇ ಎರಡು ದಶಕಗಳಾಗಿದ್ದು ಯುವ ಪ್ರತಿಭೆಗಳು ಮಾರ್ಗದರ್ಶನ, ತರಬೇತಿ ಹಾಗೂ ಪ್ರೋತ್ಸಾಹದಿಂದ ವಂಚಿತರಾಗುತ್ತಿದ್ದು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದರೂ ಉತ್ತಮ ಮಾರ್ಗದರ್ಶಕರ ಕೊರತೆಯಿಂದ ಕ್ರೀಡಾಪಟುಗಳು ಪ್ರಶಸ್ತಿಗಾಗಿ ವಂಚಿತರಾಗುತ್ತಿರುವುದು ವಿಷಾದಕರ. ಅತ್ಯಾಧುನಿಕ ಕೌಶಲ್ಯ ಪೂರಿತ ಕ್ರೀಡಾಸಾಮಗ್ರಿ ಕೊರತೆ ಕ್ರೀಡಾಂಗಣದಲ್ಲಿ ಗೋಚರಿಸುತ್ತಿದ್ದು ಹೊಸ ತಂತ್ರಜ್ಞಾನದ ಕ್ರೀಡಾ ಸ್ಪರ್ಧೆಯ ಹೊಸನೀತಿ ಅಳತೆಯ ಕ್ರೀಡಾ ಸಾಮಗ್ರಿ ಕೊರತೆ ಇದ್ದು ಅದನ್ನು ಸರಿದೂಗಿಸುವ ಜವಾಬ್ದಾರಿ ಎದ್ದು ತೋರುತ್ತಿದೆ ಎಂದು ತಿಳಿಸಿದ್ದಾರೆ.

ಕ್ರೀಡಾಂಗಣದ ಸಂಪೂರ್ಣ ಜವಾಬ್ದಾರಿ ನಿರ್ವಹಣೆ ಮಾಡುತ್ತಿರುವ ಸಿಬ್ಬಂದಿಗೆ ಕಳೆದ 8 ತಿಂಗಳಿಂದ ವೇತನವನ್ನು ನೀಡದೇ ಜೀವನ ನಡೆಸುವುದು ಕಷ್ಟವಾಗಿದ್ದು ಎಂತಹವರನ್ನು ಮನಕುಲುಕಿಸುವಂತ ಸನ್ನಿವೇಶ ಎದುರಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.