ಫೆ. 17 ರಂದು ರಾಜ್ಯ ಮಟ್ಟದ ಅರಣ್ಯ ಭೂಮಿ ಹಕ್ಕು ಚಿಂತನ ಕೂಟ ಕಾರ್ಯಕ್ರಮ
Team Udayavani, Feb 11, 2022, 5:17 PM IST
ಶಿರಸಿ: ಅರಣ್ಯವಾಸಿಗಳ 30 ವರ್ಷ ಹೋರಾಟದ ಸ್ಮರಣ ಸಂಚಿಕೆ ಬಿಡುಗಡೆ, ಸರಕಾರದೊಂದಿಗೆ ಸಂವಾದ ಹಾಗೂ ರಾಜ್ಯ ಮಟ್ಟದ ಅರಣ್ಯ ಭೂಮಿ ಹಕ್ಕು ಚಿಂತನ ಕೂಟ ಕಾರ್ಯಕ್ರಮವನ್ನು ಫೆ. 17 ಗುರುವಾರದಂದು ಬೆಂಗಳೂರಿನಲ್ಲಿ ಸಂಘಟಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಅವರು ಶಿರಸಿಯ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರ ವೇದಿಕೆ ಕಾರ್ಯಾಲಯದಲ್ಲಿ ಅರಣ್ಯ ಅತಿಕ್ರಮಣದಾರರನ್ನು ಉದ್ದೇಶಿಸಿ ಮಾತನಾಡಿದರು.
ಬೆಂಗಳೂರಿನ ಕಾರ್ಯಕ್ರಮದಲ್ಲಿ ಸರಕಾರದ ಮಟ್ಟದ ವಿವಿಧ ಸ್ತರದ ಗಣ್ಯರನ್ನು ಆಮಂತ್ರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಉತ್ತರ ಕನ್ನಡ ಜಿಲ್ಲೆ ಮತ್ತು ರಾಜ್ಯದ 16 ಜಿಲ್ಲೆಗಳಲ್ಲಿ ನಿರಂತರ 30 ವರ್ಷ ಸಂಘಟನೆ, ಹೋರಾಟ, ಆಂದೋಲನ ಜರುಗಿಸಿರುವ ವೇದಿಕೆಯ ಸಮಗ್ರ ಮಾಹಿತಿ ಲೇಖನ ಹೋರಾಟದ ಕಾನೂನು ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರದ ಅರಣ್ಯ ಭೂಮಿ ಹಕ್ಕಿಗೆ ಸಂಬಂಧಿಸಿದ ಆದೇಶವನ್ನು 106 ಪುಟಗಳ ಸಮಗ್ರ ದಾಖಲೆಗಳೊಂದಿಗೆ ಸ್ಮರಣ ಸಂಚಿಕೆಯು ಒಳಗೊಂಡಿರುತ್ತದೆ ಎಂದು ಅವರು ಹೇಳಿದರು.
ಸಭೆಯಲ್ಲಿ ತಾಲೂಕ ಅಧ್ಯಕ್ಷ ಲಕ್ಮಣ ಮಾಳ್ಳಕ್ಕನವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ರಾಜು ನೇತ್ರೇಕರ್, ರಾಜು ನರೇಬೈಲ್, ದೇವರಾಜ ಮರಾಠಿ, ಚಂದ್ರು ನಾಯ್ಕ, ಇಬ್ರಾಹಿಂ ಗೌಡಳ್ಳಿ, ನೆಹರೂ ನಾಯ್ಕ ಬಿಳೂರು, ನಾರಾಯಣ ಸರ್ವಾ ಗೌಡ, ಲಕ್ಷ್ಮಣ ನಾಯ್ಕ ದೊಡ್ನಳ್ಳಿ, ವಿದ್ಯಾಧರ ಶೆಟ್ಟಿ, ಗಣಪತಿ ನಾಯ್ಕ ಗೋಳಿ ಮುಂತಾದವರು ಉಪಸ್ಥಿತರಿದ್ದರು.
ವಿವಿಧ ರೈತ ಸಂಘಟನೆ, ನೀವೃತ್ತ ನ್ಯಾಯಮೂರ್ತಿಗಳು, ಕಾನೂನು ತಜ್ಞರು ವಿವಿಧ ಸಂಘಟನೆಗಳ ಧುರಿಣರು ಹಾಗೂ ರಾಜಕೀಯ ಧುರೀಣರೊಂದಿಗೆ ಭೂಮಿ ಹಕ್ಕು ಚಿಂತನ ಕೂಟವನ್ನು ಇದೇ ಸಂದರ್ಭದಲ್ಲಿ ಸಂಘಟಿಸಲಾಗಿದ್ದು, ಭೂಮಿ ಹಕ್ಕಿಗೆ ಕ್ರೀಯಾತ್ಮಕ ಹಾಗೂ ಕಾನೂನಾತ್ಮಕ ಮುಂದಿನ ಹೋರಾಟದ ರೂಪರೇಷೆಯನ್ನು ಚಿಂತನ ಕೂಟದಲ್ಲಿ ನಿರ್ಧರಿಸಲಾಗುವುದು ಎಂದು ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ