ಪಂಪ್‌ಸೆಟ್ ನಿಲ್ಲಿಸಿ: ಕುಡಿವ ನೀರಿಗೆ ಸಹಕರಿಸಿ


Team Udayavani, May 12, 2019, 5:22 PM IST

nc-4

ಕಾರವಾರ: ಕುಡಿಯುವ ನೀರಿನ ಮೂಲವಾಗಿರುವ ನದಿಗಳಿಗೆ ಅಳವಡಿಸಿರುವ ಕೃಷಿ ಪಂಪ್‌ಸೆಟ್‌ಗಳನ್ನು ರೈತರು ಸ್ಥಗಿತಗೊಳಿಸಿ, ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ತಿಳಿಸಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತ ಈಗಾಗಲೇ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮಗಳಿಗೆ ಹಾಗೂ ಪಟ್ಟಣಗಳಿಗೆ ಗಂಗಾವಳಿ ಮತ್ತು ಅಘನಾಶಿನಿ ನದಿಗಳಿಂದ ನೀರಿನ ಸಂಪರ್ಕ ಪಡೆಯಲಾಗಿದೆ. ಗಂಗವಳಿ ಹಾಗೂ ಅಘನಾಶಿನಿ ನದಿಯಲ್ಲೂ ನೀರಿನ ಹರಿವು ಕಡಿಮೆಯಾಗುತ್ತಿದೆ. ಇಂಥ ಕಷ್ಟಕರ ಸನ್ನಿವೇಶದಲ್ಲಿ ನದಿ ನೀರನ್ನು ಕೃಷಿಗೆ, ತೋಟಗಳಿಗೆ ಬಳಸುವುದು ಸಮಂಜಸವಲ್ಲ. ಜನರ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಿರುವುದರಿಂದ ಗಂಗಾವಳಿ, ಅಘನಾಶಿನಿ ನದಿಗಳಿಗೆ ರೈತರು ಪಂಪ್‌ಸೆಟ್‌ಗಳನ್ನು ಅಳವಡಿಸಿಕೊಂಡಿದ್ದಲ್ಲಿ, ತಕ್ಷಣ ಸ್ಥಗಿತಗೊಳಿಸಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ರೈತರಲ್ಲಿ ಮನವಿ ಮಾಡಿದ್ದಾರೆ. ಈ ತಿಂಗಳ ಕೊನೆ ವಾರದೊಳಗೆ ಮಳೆಯಾಗುವ ಸಾಧ್ಯತೆಗಳಿದ್ದು ಕೃಷಿ ಪಂಪ್‌ಸೆಟ್‌ಗಳನ್ನು ಸ್ಥಗಿತಗೊಳಿ ಸುವುದರಿಂದ ಹೆಚ್ಚಿನ ಪ್ರಮಾಣದ ಹಾನಿ ಸಂಭವಿಸುವುದಿಲ್ಲ. ಅಲ್ಲದೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಿರುವುದರಿಂದ ಪಂಪ್‌ ಸೆಟ್‌ಗಳನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ. ಅದಕ್ಕೆ ರೈತರೂ ಜಿಲ್ಲಾಡಳಿತದೊಂದಿಗೆ ಕುಡಿಯುವ ನೀರನ್ನು ಜನತೆಗೆ ನೀಡುವ ಮಹತ್ತರ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ತಿಳಿಸಿದ್ದಾರೆ.

ಈಗಾಗಲೇ ನೀರಿನ ಸಮಸ್ಯೆಯಿರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ಸರಬರಾಜು ಮಾಡಲಾಗುತ್ತಿದೆ. ನೀರಿನ ಲಭ್ಯತೆ ಇರುವ ಕಡೆಗಳನ್ನು ಪೈಪ್‌ಲೈನ್‌ಗಳನ್ನು ಮಾಡುವ ಅಥವಾ ಕೊಳವೆ ಭಾವಿಗಳನ್ನು ಮತ್ತಷ್ಟು ಆಳಕ್ಕೆ ತೋಡುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನದಿ ಭಾಗದಲ್ಲಿ ಪಂಪ್‌ಸೆಟ್‌ಗಳನ್ನು ನಿಲ್ಲಿಸುವುದರಿಂದ ಆ ನದಿಗಳಿಂದ ಕೈಗೊಂಡಿರುವ ಕುಡಿಯುವ ನೀರು ಸರಬರಾಜು ಯೋಜನೆಗಳಿಗೆ ಅನುಕೂಲವಾಗುತ್ತವೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

34 ಮಜಿರೆಗಳಿಗೆ 11 ಟ್ಯಾಂಕರ್‌ನಲ್ಲಿ ನೀರು ಪೂರೈಕೆ ಆರಂಭ

ಕುಮಟಾ: ತಾಲೂಕಿನ ಎಲ್ಲೆಡೆ ನೀರಿನ ಬವಣೆ ಹೆಚ್ಚುತ್ತಲೇ ಇದ್ದು, ಟ್ಯಾಂಕರ್‌ ಮೂಲಕ ನೀರನ್ನು ಪೂರೈಸುವ ಕಾರ್ಯದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ.

ನೀರಿನ ಬರ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಜನ ನೀರಿಗಾಗಿ ಕಿ.ಮೀ.ಗಳಷ್ಟು ದೂರ ಸಾಗಿ ನೀರು ತರುವ ಪರಿಸ್ಥಿತಿಯೂ ಎದುರಾಗಿದೆ. ಹೀಗಾಗಿ ತಾಲೂಕಿನ ಬಹುತೇಕ ನೀರಿನ ಬರ ಇರುವ ಪ್ರದೇಶಕ್ಕೆ ನೀರನ್ನು ಪೂರೈಸುವುದು ಅನಿವಾರ್ಯವಾಗಿದೆ.

ತಾಲೂಕಿನ ಯಾವ ಪ್ರದೇಶಗಳಲ್ಲಿ ಹೆಚ್ಚು ನೀರಿನ ಸಮಸ್ಯೆ ಇದೆ ಎಂದು ಆಯಾ ಗ್ರಾಪಂ ಪಿಡಿಓಗಳ ಮುಖಾಂತರ ಮಾಹಿತಿ ಪಡೆದು ತಹಶೀಲ್ದಾರ್‌ ಪರಿಮಳ ದೇಶಪಾಂಡೆ ಹಾಗೂ ತಾಪಂ ಇಒ ಸಿ.ಟಿ. ನಾಯ್ಕ ಜಂಟಿಯಾಗಿ ಕೂಡಲೇ ಸ್ಥಳ ಪರಿಶೀಲಿಸಿ ನೀರು ಪೂರೈಕೆಗೆ ಮುಂದಾಗುತ್ತಿರುವುದು ಗ್ರಾಮದ ಜನತೆಯಲ್ಲಿ ಹರ್ಷ ಮೂಡಿಸಿದೆ.

ನೀರು ಪೂರೈಸಲು ಅಷ್ಟು ದೊಡ್ಡ ಜಲಮೂಲ ಇಲ್ಲದಿರುವುದು ಕೂಡ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆದರೂ ಖಾಸಗಿ ಜಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ಇರುವುದು ಪರಿಶೀಲನೆಯಿಂದ ತಿಳಿದು ಬಂದಿರುವುದರಿಂದ ಲಭ್ಯವಿರುವ ಕಡೆ ಸಂಪರ್ಕಿಸಿ ನೀರು ನೀಡುವಂತೆ ವಿನಂತಿಸಲಾಗಿದೆ.

ಈಗಾಗಲೇ 11 ಗ್ರಾಮ ಪಂಚಾಯತಗಳ 13 ಗ್ರಾಮಗಳಿಗೆ, 34 ಮಜರೆಗಳಿಗೆ 11 ಟ್ಯಾಂಕರ್‌ ಮೂಲಕ 28ಕ್ಕೂ ಹೆಚ್ಚು ಟ್ರಿಫ್‌ ನೀರು ಪ್ರತಿದಿನ ಸರಬರಾಜು ಮಾಡಲಾಗುತ್ತಿದೆ. ನೀರಿನ ಬರವಿರುವ ಎಲ್ಲಾ ಪ್ರದೇಶಕ್ಕೂ ಕುಡಿಯುವ ನೀರನ್ನು ಪೂರೈಸಲಾಗುವುದು.
• ಪರಿಮಳ ದೇಶಪಾಂಡೆ,ತಹಶೀಲ್ದಾರ

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.