ಶತಮಾನದ ಸಂಭ್ರಮಕ್ಕೆ ದಾಪುಗಾಲು


Team Udayavani, Sep 17, 2018, 5:26 PM IST

17-sepctember-23.jpg

ಶಿರಸಿ: ಗ್ರಾಮೀಣ ಪತ್ತಿನ ಸೇವಾ ಸಹಕಾರಿ ಸಂಘಗಳಲ್ಲಿ ಮುಂಚೂಣಿಯಲ್ಲಿರುವ ತಾಲೂಕಿನ ಹೆಗಡೆಕಟ್ಟಾದ ಗ್ರೂಪ್‌ ಗ್ರಾಮಗಳ ಸೇವಾ ಸಹಕಾರಿ ಸಂಘವು ಸಾಲ ವಸೂಲಿಯಲ್ಲೂ ಶೇ. 99ಕ್ಕಿಂತ ಅಧಿಕ ಸಾಧನೆ ಮಾಡಿದ್ದು, ಸೇವೆಯ ಜೊತೆ ಲಾಭದದಲ್ಲೂ ಹಿಂದೆ ಬೀಳದೇ 32 ಲಕ್ಷ ರೂ. ನಿವ್ವಳವಾಗಿ ಉಳಿಸಿಕೊಂಡಿದೆ.

ಸೊಸೈಟಿ ಅಧ್ಯಕ್ಷ ಎಂ.ಪಿ. ಹೆಗಡೆ ಹೊನ್ನೆಕಟ್ಟ ಸಂಘದ ಸಾಧನೆಯ ವಿಷಯ ತಿಳಿಸಿ, ಕಳೆದ ಆರ್ಥಿಕ ವರ್ಷಾಂತ್ಯಕ್ಕೆ 33,82,086.79 ರೂ. ನಿವ್ವಳ ಲಾಭ ಗಳಿಸಿದ್ದು, ಇದು ಕಳೆದ ಸಾಲಿಗಿಂತ 2,55,053.71 ರೂ. ರಷ್ಟು ಹೆಚ್ಚಾಗಿದೆ. ಸದಸ್ಯರ ಪಾಲುಧನದ ಮೇಲೆ ಶೇ. 12 ಲಾಭಾಂಶ ನೀಡಲು ಆಡಳಿತ ಸಮಿತಿ ತೀರ್ಮಾನಿಸಿದೆ ಎಂದು ವಿವರಿಸಿದ್ದಾರೆ.

ಸಂಘದಲ್ಲಿ 683 ಸದಸ್ಯರಿದ್ದು, ಶೇರು ಬಂಡವಾಳ 51,68,900 ರೂ. ಹೊಂದಿದ್ದು ಠೇವು 13,02,05,479.30 ರೂ. ಇದ್ದು ವರದಿ ವರ್ಷದಲ್ಲಿ 104887934 ರೂ. ಸಾಲ ವಿತರಿಸಿದೆ. ವರದಿ ವರ್ಷಾಂತ್ಯಕ್ಕೆ ಶೇ.99.66 ಸಾಲ ವಸೂಲಾತಿ ಆಗಿದ್ದು ಇರುತ್ತದೆ. ಸಂಘದ ಕಾಯ್ದಿಟ್ಟ ನಿಧಿಗಳು ರೂ. 19003913.42 ಇದೆ. ಸಂಘದ ದುಡಿಯುವ ಬಂಡವಾಳವು ಕಳೆದ ಸಾಲಿಗಿಂತ 36,06,141 ರೂ. ರಷ್ಟು ಹೆಚ್ಚಳವಾಗಿ ವರ್ಷಾಂತ್ಯಕ್ಕೆ 15,84,78,334 ರೂ. ಆಗಿದೆ. ಸದಸ್ಯರ ಮಹಸೂಲುಗಳನ್ನು ಮಾರ್ಕೆಟಿಂಗ್‌ ಸೊಸೈಟಿಗಳ ಮೂಲಕ 3,991 ಕ್ವಿಂ. ವಿಕ್ರಯಿಸಿದ್ದು ಅದರ ಮೌಲ್ಯ 10,37,47,027 ರೂ. ಆಗಿದೆ. ಇದರಿಂದ 4,87,074 ರೂ. ರಿಬೇಟನ್ನು ಕೂಡ ಸಂಘ ಪಡೆದಿದೆ. ಸಂಘದ ಕಿರಾಣಿ ವಿಭಾಗದಲ್ಲಿ 2.22 ಕೋ.ರೂ. ವಸ್ತುಗಳು ವಿಕ್ರಯಿಸಿ 1,17,916 ರೂ. ನಿಕ್ಕೀ ಲಾಭಗಳಿಸಿದೆ. ಸಂಘವು ಕಳೆದ ಹನ್ನೊಂದು ವರ್ಷಗಳಿಂದ ಸತತವಾಗಿ ಆಡಿಟ್‌ ವರ್ಗೀಕರಣದಲ್ಲಿ ‘ಅ’ ಶ್ರೇಣಿಯಲ್ಲಿ ಮುಂದುವರೆದಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಸಂಘವು ತನ್ನ ಸದಸ್ಯರಿಗೆ ತ್ವರಿತವಾಗಿ ವಿವಿಧ ರೀತಿಯ ಕೃಷಿ ಮತ್ತು ಕೃಷಿಯೇತರ ಸಾಲಗಳನ್ನು ನೀಡುತ್ತಿದೆ. ಸಂಘವು ಯಚಡಿ ಭಾಗದ ಗ್ರಾಮದ ಸದಸ್ಯರ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಯಚಡಿಯಲ್ಲಿ ತನ್ನ ಶಾಖೆಯನ್ನು ತೆರೆದಿದ್ದು, ಅತ್ಯಂತ ಸ್ಪರ್ಧಾತ್ಮಕ ದರದಲ್ಲಿ ವಸ್ತುಗಳನ್ನು ವಿಕ್ರಯಿಸುತ್ತಿದೆ. ಶಿಕ್ಷಣ ಹಾಗೂ ಸಾರ್ವಜನಿಕ ಸೇವಾ ಕಾರ್ಯದಲ್ಲಿಯೂ ಗುರುತಿಸಿಕೊಂಡಿರುವ ಹೆಗಡೆಕಟ್ಟಾ ಸೇವಾ ಸಹಕಾರಿ ಸಂಘವು, ತನ್ನ ಸದಸ್ಯರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಕಾರ್ಯ ರೂಪಕ್ಕೆ ತರುವಲ್ಲಿ ಶ್ರಮಿಸುತ್ತಿದೆ. ಕಾಲಕಾಲಕ್ಕೆ ಸಂಘದ ಸದಸ್ಯರಿಗೆ ದೊರೆಯಬೇಕಾದ ಸವಲತ್ತುಗಳನ್ನು ನೀಡಿ, ಸದಸ್ಯರ ಹಿತ ಕಾಪಾಡುವ ನಿಟ್ಟಿನಲ್ಲಿ ಮುಂಚೂಣಿಯಲ್ಲಿದೆ ಎಂಬುದು ಹೆಮ್ಮೆ ಎಂದಿರುವ ಅವರು, ಸಹಕಾರಿ ಕ್ಷೇತ್ರದ ಸೇವೆಯಲ್ಲಿ ಹೆಗಡೆಕಟ್ಟಾ ಸೊಸೈಟಿ ನಿರಂತರ 99ನೇ ವರ್ಷದಲ್ಲಿದ್ದು ಶತಮಾನದತ್ತ ದಾಪುಗಾಲು ಹಾಕುತ್ತಿದೆ.

ರೈತರು ಕೃಷಿಯತ್ತ ಒಲವುಗಳಿಸಲು ಸಲಹೆ ಹಾಗೂ ಸದಸ್ಯರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ರೂಪಿಸುತ್ತ ಬಂದಿದೆ. ಸಂಘದ ಸರ್ವ ಸಾಧಾರಣ ಸಭೆ ಸೆ.19 ರಂದು ಮಧ್ಯಾಹ್ನ 3:30ಕ್ಕೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದೆ ಎಂದೂ ವಿವರಿಸಿದ್ದಾರೆ.

ಟಾಪ್ ನ್ಯೂಸ್

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.