ರಸ್ತೆ ಹೊಂಡಕ್ಕೆ ಮಣ್ಣು ಮುಚ್ಚಿ ಮುಷ್ಕರ


Team Udayavani, Nov 13, 2019, 3:05 PM IST

uk-tdy-2

ಸಿದ್ದಾಪುರ: ಸಂಚಾರಕ್ಕೆ ಕಂಟಕವಾಗಿರುವ ರಸ್ತೆಗಳ ಹೊಂಡ, ತಗ್ಗುಗಳಿಗೆ ಮಣ್ಣು ತುಂಬಿ ಸರಿಪಡಿಸುವ ಕಾರ್ಯಕ್ಕೆ ಮುಂದಾಗುವ ಮೂಲಕ ತಾಲೂಕಿನ ಟೆಂಪೋ ಮಾಲಕ, ಚಾಲಕರ ಸಂಘದ ಸದಸ್ಯರು ಮಂಗಳವಾರ ವಿನೂತನ ಪ್ರತಿಭಟನೆ ನಡೆಸಿದರು.

ತಮ್ಮ ಕಾರ್ಯದ ಮೂಲಕ ಮುಷ್ಕರ, ಪ್ರತಿಭಟನೆಗಳಿಗೆ ಹೊಸ ಮಾದರಿ ಕೊಟ್ಟರು. ದಿನ ನಿತ್ಯದ ಆದಾಯ, ವೇತನ ನಂಬಿಕೊಂಡ ಟೆಂಪೋ ಮಾಲಕ, ಚಾಲಕರು ಆ ಬಗ್ಗೆ ಚಿಂತಿಸದೇ ಇಡೀ ದಿನ ರಸ್ತೆ ದುರಸ್ತಿ ಮಾಡಿ ಸರಕಾರದ ಕಾರ್ಯವೈಖರಿಗೆ ಕನ್ನಡಿ ಹಿಡಿದಿದ್ದಾರೆ.

ಹೊಂಡಗಳಿಗೆ ಮಣ್ಣು ತುಂಬಿ ಸರಿಪಡಿಸಲು ಸುಮಾರು 30 ಸದಸ್ಯರಿರುವ ಸಂಘ ನಿತ್ಯದ ದುಡಿಮೆ ಪರಿಗಣಿಸದೇ ಮಂಗಳವಾರ ಬೆಳಗ್ಗೆ 9ರಿಂದ ಸಿದ್ದಾಪುರ- ಕುಮಟಾ ರಾಜ್ಯ ಹೆದ್ದಾರಿಯ ಕೆಇಬಿ ಗ್ರೀಡ್‌ ಬಳಿಯಿಂದ ಪಿಕಾಸಿ, ಗುದ್ದಲಿ, ಬುಟ್ಟಿ ಹಿಡಿದು ಕೆಲಸ ಆರಂಭಿಸಿದರು. ಲೋಕೋಪಯೋಗಿ ಇಲಾಖೆ ಮಾಡುವ ಕಾಟಾಚಾರದ ಕೆಲಸದ ಬದಲಾಗಿ ಸಮರ್ಪಕವಾಗಿ ಮಣ್ಣು ತುಂಬಿ ಸರಿಪಡಿಸಿದರು.

ಅಲ್ಲಿಗೆ ಭೇಟಿ ನೀಡಿದ ಸುದ್ದಿಗಾರರೊಂದಿಗೆ ಸಂಘದ ಅಧ್ಯಕ್ಷ ಗಣೇಶ ಪಿ.ಭಟ್ಟ ಮಾತನಾಡಿ, ಕುಮಟಾ ರಸ್ತೆ ಮಾತ್ರವಲ್ಲದೇ ತಾಲೂಕಿನ ಬಹುತೇಕ ಎಲ್ಲ ರಸ್ತೆಗಳು ಹೊಂಡ ಬಿದ್ದು ಹಾಳಾಗಿವೆ. ವಾಹನ ಸಂಚಾರಕ್ಕೆ ಕಷ್ಟವಾಗಿದೆ. ಲೋಕೋಪಯೋಗಿ ಇಲಾಖೆ ರಸ್ತೆಗಳನ್ನು ಸರಿಪಡಿಸಬಹುದು ಎಂದು ಸಾಕಷ್ಟು ಕಾದರೂ ಅದಕ್ಕೆ ಇಲಾಖೆ ಮುಂದಾಗಲಿಲ್ಲ. ಸರಕಾರಕ್ಕೆ ಈ ಬಗ್ಗೆ ಹಲವು ಬಾರಿ ಬೇಡಿಕೆ ಸಲ್ಲಿಸಿದ್ದರೂ ಪ್ರಯೋಜನವಾಗಲಿಲ್ಲ. ಕೇವಲ ಮುಷ್ಕರ ಮಾಡುವ ಬದಲು ನಮ್ಮ ಶ್ರಮ ಸಾರ್ಥಕವಾಗಬೇಕು ಎನ್ನುವ ದೃಷ್ಟಿಯಿಂದ ಈ ರೀತಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದೇವೆ. ನಮ್ಮಲ್ಲಿ 16 ಟೆಂಪೋಗಳಿದ್ದು ನಮ್ಮ ವಾಹನಗಳ ಸಂಚಾರವನ್ನು ನಿಲ್ಲಿಸಿ ಇಡೀದಿನ ಎಷ್ಟು ಸಾಧ್ಯವೋ ಅಷ್ಟು ರಸ್ತೆಯ ಹೊಂಡಗಳನ್ನು ತುಂಬುತ್ತೇವೆ. ಸರಕಾರ ರಸ್ತೆಗಳ ದುರಸ್ತಿಗೆ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಇನ್ನಿತರ ರಸ್ತೆಗಳ ಹೊಂಡಗಳನ್ನ ಸರಿಪಡಿಸುವ ಉದ್ದೇಶವಿದೆ ಎಂದರು.

ಲೋಕೋಪಯೋಗಿ ಇಲಾಖೆ ನಿಷ್ಕಾಳಜಿ: ಹಲವು ತಿಂಗಳಿಂದ ತಾಲೂಕಿನ ಎಲ್ಲ ರಸ್ತೆಗಳು ಹಾಳಾಗಿ, ಸಂಚಾರಕ್ಕೆ ಸಮಸ್ಯೆಯಾಗಿದ್ದರೂ ಲೋಕೋಪಯೋಗಿ ಇಲಾಖೆ ಮಾತ್ರ ಕಣ್ಣುಮುಚ್ಚಿ ಕೂತಿದೆ ಎಂದು ಸಾರ್ವಜನಿಕರು ಸಾಕಷ್ಟು ಬಾರಿ ಹೇಳಿದ್ದರು. ಆಗ ಇಲಾಖೆ ಅಧಿಕಾರಿಗಳು ಕೆಲವೆಡೆ ಹೊಂಡ ತುಂಬಿ ಜನರ ಕಣ್ಣು ಕಟ್ಟುವ ಪ್ರಯತ್ನ ಮಾಡಿದ್ದರು.

ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಶೀಘ್ರವಾಗಿ ಕೆಲಸ ಆರಂಭಿಸುತ್ತೇವೆ ಎಂದುಹೇಳಿ ನುಣುಚಿಕೊಂಡಿದ್ದರೇ ಹೊರತು ಎಲ್ಲಿಯೂ ಕಾಮಗಾರಿ ಆರಂಭಿಸಿಲ್ಲ. ಇಲ್ಲಿಯ ಜನಪ್ರತಿನಿಧಿಗಳೂ ಅಧಿಕಾರಿಗಳ ಮಾತುಗಳನ್ನು ಕೇಳಿ ಸುಮ್ಮನುಳಿದರೇ ವಿನಃ ಕಾಮಗಾರಿ ಬಗ್ಗೆ ಗಮನ ಕೊಟ್ಟಿಲ್ಲ. ಈಗ ಟೆಂಪೋ ಸಂಘದವರು ಮಾಡಿದ ಕೆಲಸಕ್ಕೂ ಬಿಲ್‌ ಹಾಕಿ ಹಣ ಹೊಡೆಯುವ ಸಾಧ್ಯತೆಯೂ ಇದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.