ಬಸ್ಗಾಗಿ ವಿದ್ಯಾರ್ಥಿಗಳ ಪರದಾಟ
Team Udayavani, Jun 20, 2019, 12:08 PM IST
ಯಲ್ಲಾಪುರ: ವಿದ್ಯಾರ್ಥಿಗಳು ಬಸ್ ಏರುತ್ತಿರುವ ದೃಶ್ಯ.
ಯಲ್ಲಾಪುರ: ತಾಲೂಕಿನ ಕಿರವತ್ತಿ ಗ್ರಾಪಂ ವ್ಯಾಪ್ತಿಯ ಹೊಸಳ್ಳಿ ಸುತ್ತಮುತ್ತಲಿನ ಗ್ರಾಮದ ವಿದ್ಯಾರ್ಥಿಗಳು ಪ್ರತಿದಿನ ಶಾಲಾ-ಕಾಲೇಜುಗಳಿಗೆ ಹೋಗಿ ಬರುತ್ತಿದ್ದು, ಅವರಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ವಾಯುವ್ಯ ಸಾರಿಗೆ ಸಂಸ್ಥೆ ಅಧ್ಯಕ್ಷರ ಕ್ಷೇತ್ರದ ಸಮಸ್ಯೆಯಾಗಿದೆ.
ಹೊಸಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಾದ ಖಾರೇವಾಡ, ಬೈಲಂದೂರು, ದಾಂಡೇಲಿವಾಡ, ಹದ್ದಿನಸರ, ಬೈಲಂದೂರು (ಗೌಳಿವಾಡಾ), ಹೊಸಳ್ಳಿ (ಗೌಳಿವಾಡಾ) ಹಾಗೂ ಗಾಂವಠಾಣಾ ಮುಂತಾದ ಹಳ್ಳಿಗಳಿಂದ ವಿದ್ಯಾರ್ಥಿಗಳು ಯಲ್ಲಾಪುರ ಹಾಗೂ ಕಿರವತ್ತಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪಪೂ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ತೆರಳಲು ಬೆಳಗ್ಗೆ 8ರಿಂದ 9:30ರ ವರೆಗೆ ರಾಷ್ಟ್ರೀಯ ಹೆದ್ದಾರಿ ಅಂಚಿನ ಹೊಸಳ್ಳಿ ಗ್ರಾಮದ ಬಸ್ ತಂಗುದಾಣಕ್ಕೆ ಬರುತ್ತಾರೆ. ಪ್ರತಿದಿನ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೊಸಳ್ಳಿ ನಿಲ್ದಾಣದಲ್ಲಿ ಬಸ್ಸುಗಳಿಗಾಗಿ ಕಾಯುತ್ತಿರುತ್ತಾರೆ. ತರಗತಿ ಪ್ರಾರಂಭವಾಗುವ ಅವಧಿಯ ಪೂರ್ವ ತಲುಪಲು ಯಾವುದೇ ಬಸ್ ಸೌಕರ್ಯವಿಲ್ಲದೇ ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಗ್ರಾಮಗಳ ಹಿರಿಯರು ಹಾಗೂ ವಿದ್ಯಾರ್ಥಿಗಳು ಅನೇಕ ಬಾರಿ ಜನಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳು, ಸಂಬಂಧಿಸಿದ ಇಲಾಖೆಗಳಿಗೆ ಮನವಿ ನೀಡಿದರೂ ಬಸ್ ವ್ಯವಸ್ಥೆ ಆಗಿಲ್ಲ. ಕೆಲವೊಮ್ಮೆ ಕಲಘಟಗಿ ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಕಡೆಗೆ ಹೋಗುವ ಬಸ್ ಚಾಲಕರು ವಿದ್ಯಾರ್ಥಿಗಳ ದೊಡ್ಡ ಗುಂಪು ಕಂಡು ನಿಲ್ಲಿಸದೆ ಮುಂದೆ ಸಾಗುತ್ತಾರೆ. ಈ ಸಮಸ್ಯೆ ಕಳೆದ ಮೂರು ನಾಲ್ಕು ವರ್ಷದಿಂದ ಹಾಗೆಯೇ ಇದೆ. ಹೀಗಾಗಿ ಅತ್ಯಂತ ಹಿಂದುಳಿದ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸಂಬಂಧಿಸಿದವರು ಸಾರಿಗೆ ವ್ಯವಸ್ಥೆ ಕಲ್ಪಿಸಿಕೊಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ