ಗ್ರಂಥಾಲಯಕ್ಕೂ ಕ್ರೀಡಾ ಸಾಮಗ್ರಿ ಪೂರೈಕೆ!

ಗ್ರಾಮೀಣ ಪ್ರದೇಶದ ಮಕ್ಕಳ ಬೌದ್ಧಿಕ ವಿಕಸನಕ್ಕಾಗಿ ಸಿಇಒ ಪ್ರಿಯಾಂಕಾ ಮಹತ್ವದ ಹೆಜ್ಜೆ

Team Udayavani, Jul 24, 2022, 5:34 PM IST

17

ಕಾರವಾರ: ಜಿಲ್ಲೆಯ ಗ್ರಾಮೀಣ ಭಾಗದ ಪ್ರತಿಯೊಬ್ಬ ಮಗುವಿನ ದೈಹಿಕ, ಮಾನಸಿಕ ಹಾಗೂ ಬೌದ್ಧಿಕ ವಿಕಸನಕ್ಕಾಗಿ ಜಿಲ್ಲೆಯ 229 ಗ್ರಾಪಂ ಗ್ರಂಥಾಲಯಗಳಿಗೆ ಗ್ರಾಪಂಗಳಿಂದ ಸಂಗ್ರಹಿಸಲಾಗುತ್ತಿರುವ ಶೇ.6 ರಷ್ಟು ಗ್ರಂಥಾಲಯ ಕರದಿಂದಲೇ ಒಳಾಂಗಣ ಕ್ರೀಡೆಗೆ ಸಂಬಂಧಿಸಿದ ಕ್ರೀಡಾ ಸಾಮಗ್ರಿ ಹಾಗೂ ಬೌದ್ಧಿಕ ವಿಕಸನಕ್ಕೆ ಪೂರಕವಾದ ಸಾಧನಗಳನ್ನು ಪೂರೈಸಲು ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ಮಾಧ್ಯಮಗಳಿಗಿಂದು ಈ ಸಂಬಂಧ ಮಾಹಿತಿ ನೀಡಿದ ಅವರು, ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗ್ರಾಪಂ ಗ್ರಂಥಾಲಯಗಳ ಡಿಜಿಟಲೀಕರಣ ಮಾಡಲಾಗಿದೆ. ಗ್ರಂಥಾಲಯ ಡಿಜಿಟಲೀಕರಣದಡಿ ಈಗಾಗಲೇ ಜಿಲ್ಲೆಯ ಎಲ್ಲಾ ಗ್ರಾಪಂ ಗ್ರಂಥಾಲಯಗಳನ್ನು ಡಿಜಿಟಲೀಕರಿಸಲಾಗುತ್ತಿದೆ. ಗ್ರಾಪಂ ಗ್ರಂಥಾಲಯಗಳಿಗೆ ಒಳಾಂಗಣ ಕ್ರೀಡೆಗೆ ಸಂಬಂಧಿಸಿದ ಕ್ರೀಡಾ ಸಾಮಗ್ರಿ ಹಾಗೂ ಬೌದ್ಧಿಕ ವಿಕಸನಕ್ಕೆ ಪೂರಕವಾದ ಒಗಟು ಬಿಡಿಸುವ ಆಟಿಕೆ, ರುಬಿಕ್‌ ಕ್ಯೂಬ್‌, ಕೇರಂ, ಚೆಸ್‌, ಹಾವು-ಏಣಿ ಬೋರ್ಡ್‌, ಎಣಿಸುವ ಮಣಿಗಳ ಸರ, ಅಬಾಕಸ್‌ ಸಾಧನಗಳನ್ನು ಗ್ರಾಪಂಗಳ ಗ್ರಂಥಾಲಯ ಕರ ಹಣದಲ್ಲಿ ಖರಿದಿಸಿ ಪೂರೈಸಲಾಗುತ್ತಿದೆ ಎಂದು ವಿವರಿಸಿದರು.

ಜತೆಗೆ ಕಳೆದ ಸಾಲಿನಲ್ಲಿ ಡಿಜಿಟಲೀಕರಣಗೊಳಿಸಿದ ಗ್ರಾಪಂ ಗ್ರಂಥಾಲಯಗಳಲ್ಲಿನ ಗಣಕ ಯಂತ್ರಗಳ ಉತ್ತಮ ಕಾರ್ಯನಿರ್ವಹಣೆ, ಎಲ್ಲ ಗ್ರಾಪಂಗಳಿಗೆ 1 ರಿಂದ 10ನೇ ತರಗತಿವರೆಗಿನ (ಎನ್‌ಸಿಇಆರ್‌ಟಿ ಟೆಕ್ಸಟ್‌ ಬುಕ್‌ ಸೇರಿ) ಪಠ್ಯಪುಸ್ತಕ ಪೂರೈಸಲಾಗಿದೆ. ಗ್ರಂಥಾಲಯಗಳಿಗೆ ಮಕ್ಕಳ ನೋಂದಣಿ ಸಂಖ್ಯೆಯನ್ನು ಶೇ.100 ರಷ್ಟು ಪ್ರಗತಿ ಸಾಧನೆಗೆ ಪ್ರೋತ್ಸಾಹಿಸಲಾಗುತ್ತಿದೆ.

ಓದುವ ಬೆಳಕು ಕಾರ್ಯಕ್ರಮದಡಿ ಶಿಕ್ಷಣ ಇಲಾಖೆ ಶಾಲಾ ಮಕ್ಕಳನ್ನು ವಾರಕ್ಕೊಮ್ಮೆ ಗ್ರಂಥಾಲಯಕ್ಕೆ ಕರೆತರಲು, ಶಾಲೆ, ಸಮಯ, ದಿನಾಂಕ ನಿಗದಿ ಹಾಗೂ ಶಾಲೆಯಿಂದ ಒಬ್ಬ ಶಿಕ್ಷಕರು ಮಕ್ಕಳನ್ನು ನಿಗದಿತ ವೇಳಾಪಟ್ಟಿಯಂತೆ ಗ್ರಂಥಾಲಯಕ್ಕೆ ಕರೆತರುವ ಯೋಜನೆ ರೂಪಿಸಲಾಗಿದೆ.

ಈ ಯೋಜನೆ ಮಾಹಿತಿಯನ್ನು ಸುತ್ತೋಲೆ ಮೂಲಕ ಬಿಇಒಗಳಿಗೆ ಸೂಚಿಸಲಾಗಿದೆ. ಪ್ರತಿ ಶಾಲೆಯ ಶಿಕ್ಷಕರಲ್ಲಿ ಒಬ್ಬರು ನಿಯತವಾಗಿ ಮಕ್ಕಳನ್ನು ಶಾಲೆಗೆ ತರಬೇಕು. ಈ ಸಂಬಂಧ ಗ್ರಂಥಪಾಲಕರು ಹಾಗೂ ಶಾಲಾ ಮುಖ್ಯಸ್ಥರಿಗೆ ಗ್ರಾಪಂ ಗ್ರಂಥಾಲಯಗಳಿಗೆ ಶಿಕ್ಷಕರ ಜತೆ ಮಕ್ಕಳನ್ನು ಕಳಿಸಬೇಕೆಂಬ ಸೂಚನೆ ನೀಡಬೇಕು. ಈ ಹೊಣೆಗಾರಿಕೆ ಬಿಇಒರದ್ದು.

ಗ್ರಾಮದಲ್ಲಿನ ಸಂಪನ್ಮೂಲ ವ್ಯಕ್ತಿಗಳನ್ನು ಗುರುತಿಸಿ ಗ್ರಂಥಾಲಯಕ್ಕೆ ಮಕ್ಕಳು ಭೇಟಿ ನೀಡಿದ ಸಂದರ್ಶನದಲ್ಲಿ ಓದುವ ಹವ್ಯಾಸ, ಕ್ರೀಡೆ ಇವುಗಳ ಬಗ್ಗೆ ಉಚಿತ ಮಾರ್ಗದರ್ಶನ ಕೊಡಿಸಲು ಕಾರ್ಯಕ್ರಮ ರೂಪಿಸಬೇಕು. ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಗ್ರಾಪಂ ಗ್ರಂಥಾಲಯಕ್ಕೆ ಪುಸ್ತಕ ಖರೀದಿಸುವ ಸಂದರ್ಭದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಪುಸ್ತಕಗಳನ್ನು ಜಿಪಂ ಶಿಫಾರಸ್ಸು ಮಾಡಿದ ಪುಸ್ತಕಗಳನ್ನು ಮಾತ್ರ ಖರೀದಿಸಬೇಕು. ಎಲ್ಲಾ ಗ್ರಾಪಂ ಗ್ರಂಥಾಲಯಗಳಲ್ಲಿ ಈಗಾಗಲೇ ಪೂರೈಸಲಾದ ಕರಿಯರ್‌ ಗೈಡೆನ್ಸ್‌ ಚಾರ್ಟ್‌ನ್ನು ಉತ್ತಮ ಗುಣಮಟ್ಟದ ಪ್ರಿಂಟ್‌ ನಲ್ಲಿ ತೆಗೆದು ಗ್ರಂಥಾಲಯಗಳಲ್ಲಿ ಪ್ರಕಟಿಸಲು ಸೂಚಿಸಲಾಗಿದೆ ಎಂದಿದ್ದಾರೆ.

ಇದೊಂದು ವಿನೂತನ ಕಾರ್ಯಕ್ರಮವಾಗಿದ್ದು, ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು ಪ್ರಯತ್ನ ಮಾಡಲಾಗುತ್ತಿದೆ. ಮಕ್ಕಳು ಮಾನಸಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಇದೊಂದು ಹೆಜ್ಜೆ. ಗ್ರಾಮೀಣ ಮಕ್ಕಳು ಸದೃಢರಾಗಲಿ ಎಂಬ ಉದ್ದೇಶದಿಂದ ಕ್ರೀಡಾ ಸಾಮಗ್ರಿ ಹಾಗೂ ಆಟಿಕೆ ಸಾಧನಗಳ ಪೂರೈಕೆಗೆ ಯೋಜನೆ ಸಿದ್ಧಪಡಿಸಿ ಕಾರ್ಯ ರೂಪಕ್ಕೆ ತರಲಾಗುತ್ತಿದೆ.  -ಪ್ರಿಯಾಂಕಾ ಎಂ., ಜಿಪಂ ಸಿಇಒ, ಉತ್ತರ ಕನ್ನಡ.

ಗ್ರಾಪಂ ಗ್ರಂಥಾಲಯಗಳ ಡಿಜಿಟಲೀಕರಣ ಹಾಗೂ ಮಕ್ಕಳ ಸವಾಂìಗೀಣ ಅಭಿವೃದ್ಧಿಗೆ ಪೂರಕವಾಗುವಂತೆ ಜಿಪಂ ಗ್ರಂಥಾಲಯಗಳಿಗೆ ಸ್ಪರ್ಧಾತ್ಮಕ ಪುಸ್ತಕ, ಆಟಿಕೆ ಸಾಧನ ಪೂರೈಸುವ ಕಾರ್ಯ ಮಹತ್ವದ್ದಾಗಿದೆ. ಇದರಿಂದ ಮಕ್ಕಳು ಮೊಬೈಲ್‌ ಫೋನ್‌ ವ್ಯಸನ ಕಡಿಮೆಯಾಗಬಹುದು.  -ಗಣಪತಿ ಆಗೇರ, ಮುಖ್ಯಾಧ್ಯಾಪಕರು, ಕೆಪಿಎಸ್‌ ಸ.ಮಾ.ಹಿ.ಪ್ರಾ. ಶಾಲೆ, ಅಮದಳ್ಳಿ

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.