ಕಾರವಾರ: ಸೀಬರ್ಡ್‌ ನೌಕಾನೆಲೆಗೆ ನುಸುಳಿದ ಶಂಕಿತರು?


Team Udayavani, Jun 23, 2017, 9:46 AM IST

Sea-Bird-23-6.jpg

ಕಾರವಾರ: ಇಲ್ಲಿನ ಸೀಬರ್ಡ್‌ ನೌಕಾನೆಲೆ ಪ್ರದೇಶಕ್ಕೆ ಶಂಕಿತರು ನುಸುಳಿದ್ದಾರೆಂಬ ಸುದ್ದಿ ಗುರುವಾರ ಬೆಳಗ್ಗಿನಿಂದ ಹಬ್ಬಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ನೌಕಾನೆಲೆಯ ಮುಖ್ಯದ್ವಾರ ಸಮೀಪದ ಬಿಣಗಾ ಮತ್ತು ಅರಗಾ ಗ್ರಾಮಗಳ ಮಧ್ಯೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾರ್ಯ ನಡೆಯುತ್ತಿದ್ದು, ನೌಕಾನೆಲೆಯ ಆವರಣ ಗೋಡೆ ಹೆದ್ದಾರಿಗೆ ಹೊಂದಿಕೊಂಡಿದೆ. ಆವರಣದ ಗೋಡೆಯನ್ನು ಕೆಲವು ಕಡೆ ಕಲ್ಲಿನಿಂದ ನಿರ್ಮಿಸಲಾಗಿದೆ. ಆಳ ಮತ್ತು ತಗ್ಗು ಪ್ರದೇಶ ಇರುವಲ್ಲಿ, ಸಮುದ್ರಕ್ಕೆ ಹೊಂದಿಕೊಂಡ ಪ್ರದೇಶಕ್ಕೆ ತಗಡಿನ ಆವರಣ ಹಾಕಲಾಗಿದೆ. ಮಳೆ ನೀರು ಹರಿಯಲು ಕಲ್ಲಿನ ಗೋಡೆಗೆ ಅಲ್ಲಲ್ಲಿ ರಂಧ್ರ ಬಿಟ್ಟಿದ್ದು, ಇದೇ ರಂಧ್ರವೊಂದರ ಮೂಲಕ ಶಂಕಿತರು ನೌಕಾನೆಲೆ ಒಳಗೆ ನುಸುಳಿದ್ದಾರೆ. ಈ ದೃಶ್ಯ ಸಿಸಿ ಕೆಮರಾದಲ್ಲಿ  ಸೆರೆಯಾಗಿದೆ ಎನ್ನಲಾಗುತ್ತಿದೆ.


ಗುರುವಾರ ಮುಂಜಾನೆ ಕದಂಬ ನೌಕಾನೆಲೆಯೊಳಗೆ ಮೂವರು ಶಂಕಿತರು ಕಾಣಿಸಿ ಕೊಂಡಿರುವುದನ್ನು ನೌಕಾನೆಲೆಯ ಭದ್ರತಾ ಸಿಬಂದಿ ಖಚಿತಪಡಿಸಿದ್ದಾರೆ. ಕೂಡಲೆ, ಕಾರವಾರ ನಗರ ಪೊಲೀಸರಿಗೆ ತಿಳಿಸಿದ್ದು, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪೊಲೀಸರು ನಾಕಾಬಂದಿ ಮಾಡಿ ಗಸ್ತು ತಿರುಗುತ್ತಿದ್ದಾರೆ. ಇನ್ನೊಂದೆಡೆ ನೌಕಾನೆಲೆಯ ಆವರಣ ಗೋಡೆ ಕೊರೆದಿರುವುದು ಕಂಡು ಬಂದಿದ್ದು, ಈ ಕಿಂಡಿಯನ್ನು ತತ್‌ಕ್ಷಣ ಮುಚ್ಚಲು ಕ್ರಮ ತೆಗೆದುಕೊಳ್ಳಲಾಗಿದೆ. ನುಸುಳುಕೋರರು ಇದೇ ಕಿಂಡಿ ಮೂಲಕ ನೌಕಾನೆಲೆ ಪ್ರವೇಶಿಸಿರುವುದು ನೌಕಾನೆಲೆ ಸಿಬಂದಿಗೆ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ನೌಕಾನೆಲೆಯ ಸಿಬಂದಿ ಈ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ. ಇದರಿಂದಾಗಿ ಈ ಭಾಗದಲ್ಲಿ ಆತಂಕ ಸೃಷ್ಟಿಯಾಗಿದೆ. ನೌಕಾನೆಲೆ ಸಿಬಂದಿಯನ್ನು ಹೆಚ್ಚು ಜಾಗೃತ ಸ್ಥಿತಿಯಲ್ಲಿ ಇಡಲಾಗಿದ್ದು, ಕೋಸ್ಟ್‌ ಗಾರ್ಡ್‌ ಮತ್ತು ಕರಾವಳಿ ಕಾವಲು ಪಡೆಗಳು ಗಸ್ತು ಹೆಚ್ಚಿಸಿವೆ. ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ಹೆಚ್ಚಿಸಿದ್ದಾರೆ.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್‌ನಿಂದ 6, ಬಿಜೆಪಿಯಿಂದ 2 ಮಹಿಳೆಯರು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.