ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿ: ಪೋಷಕರಿಗೆ ಧೈರ್ಯ ತುಂಬಿದ ತಹಶೀಲ್ದಾರ್
Team Udayavani, Feb 27, 2022, 7:14 PM IST
ಶಿರಸಿ: ಯುದ್ದ ಪೀಡಿತ ಉಕ್ರೇನ್ ದೇಶದಲ್ಲಿ ಸಿಲುಕಿಕೊಂಡಿರುವ ಇಲ್ಲಿನ ಹೊಸಪೇಟೆ ರಸ್ತೆಯ ನಿವಾಸಿ ಇಮ್ರಾನ್ ನಜೀರ್ ಅಲ್ತಾಫ್ ಚೌದರಿ ಎಂಬ ವಿದ್ಯಾರ್ಥಿಯ ಮನೆಗೆ ಭಾನುವಾರ ತಹಶೀಲ್ದಾರ್ ಎಂ.ಆರ್ ಕುಲಕರ್ಣಿ ಭೇಟಿ ನೀಡಿ ಪೋಷಕರಿಗೆ ಧೈರ್ಯ ತುಂಬಿದರು.
ಯುದ್ದ ಪೀಡಿತ ಉಕ್ರೇನ್ ದೇಶದಲ್ಲಿರುವ ರಾಜ್ಯದ ವಿದ್ಯಾರ್ಥಿಗಳನ್ನು ಕರೆತರಲು ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು. ನೀವು ಧೈರ್ಯವಾಗಿರಿ ಎಂದು ವಿದ್ಯಾರ್ಥಿ ಇಮ್ರಾನ್ ಚೌದರಿ ಅವರ ತಂದೆ ಬನವಾಸಿಯ ಗ್ರಾಮ ಪಂಚಾಯತಿಯ ಸದಸ್ಯ ಅಲ್ತಾಫ್ ಚೌದರಿ ಅವರಿಗೆ ಧೈರ್ಯ ತುಂಬಿದರು. ಕಲಿಯುವ ಸಂದರ್ಭದಲ್ಲಿ ಬಡತನವಿದ್ದ ಕಾರಣ ಶಿಕ್ಷಣ ಪಡೆಯಲು ಸಾಧ್ಯವಾಗಲಿಲ್ಲ. ಕಷ್ಟ ಪಟ್ಟು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂದು ಕಲಿಸುತ್ತಿರುವ ಸಂದರ್ಭದಲ್ಲಿ ಎಂದು ನೋವು ತೋಡಿಕೊಂಡರು.
ನಿನ್ನೆಯವರೆಗೆ ಕರೆ ಮಾಡಿ ನಮಗೆ ಧೈರ್ಯವಾಗಿರಿ ನಾನು ಚೆನ್ನಾಗಿದ್ದೆನೆ ಯಾವ ತೊಂದರೆ ಇಲ್ಲ ಎಂದಿದ್ದ. ಸಂಜೆಯ ನಂತರ ದೂರವಾಣಿ ಸಂಪರ್ಕ ಸಿಗುತ್ತಿರಲಿಲ್ಲ ಎಂದೂ ಹೇಳಿದರು.
ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ನಾಗರಾಜ ಬೊರಕರ್, ಕಂದಾಯ ನಿರೀಕ್ಷಕಿ ಮಂಜುಳ ನಾಯ್ಕ್, ಗ್ರಾಪಂ ಅಧ್ಯಕ್ಷೆ ತುಳಸಿ ಆರೇರ, ಸದಸ್ಯೆ ಗೀತಾ ಚನ್ನಯ್ಯ, ಅಂಗನವಾಡಿ ಮೇಲ್ವಿಚಾರಕಿ ನಿರ್ಮಲಾ, ಹಬೀಬ್ ರಹಮಾನ್ ಚೌದರಿ, ಇಜಾಜ್ ಅಹಮದ್ ಚೌದರಿ, ಅಸ್ಪಕ್ ಅಹಮದ್ ಚೌದರಿ, ಇಕ್ಬಾಲ್ ಅಹಮದ್ ಚೌದರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ