ವರ್ಷದಿಂದ ನಿಂತೇ ಇರುವ ತಹಶೀಲ್ದಾರ್‌ ವಾಹನ


Team Udayavani, Jul 22, 2019, 11:38 AM IST

uk-tdy-1

ಜೋಯಿಡಾ: ತಾಲೂಕಿನ ದಂಡಾಧಿಕಾರಿಗಳಿಗೆ ಕರ್ತವ್ಯ ಪಾಲನೆಗಾಗಿ ಹಾಗೂ ತಾಲೂಕಿನ ಜನರ ಸಮಸ್ಯೆಗೆ ಶೀಘ್ರ ಸ್ಪಂದನೆಗಾಗಿ ಓಡಾಡಲು ಸರಕಾರ ನೀಡಿರುವ ವಾಹನ ಕಳೆದ ಒಂದು ವರ್ಷದಿಂದ ಕೆಟ್ಟು ನಿಂತಿದೆ. ಇದರಿಂದಾಗಿ ತಾಲೂಕಿನಾದ್ಯಂತ ಓಡಾಟಕ್ಕೆ ತೊಂದರೆ ಉಂಟಾಗಿದೆ.

ವರ್ಷದಿಂದ ರಿಪೇರಿ ಎಂದು ಸರಿಪಪಡಿಸಲು ಏಷ್ಟೇ ಪ್ರಯತ್ನಿಸಿದರೂ ಸರಿಯಾಗುತ್ತಿಲ್ಲ. ಇದನ್ನು ಕಳೆದ ಹಲವಾರು ವರ್ಷಗಳಿಂದ ರಿಪೇರಿ ಮಾಡಿ ಓಡಿಸುತ್ತಲೇ ಬರಲಾಗಿತ್ತು. ಆದರೆ ಹಲವು ಬಾರಿ ರಿಪೇರಿ ಮಾಡಿ ದೂರದ ಹಳ್ಳಿಗಳಿಗೆ ಹೋದಾಗ ದಾರಿ ಮಧ್ಯೆ ಕೈಕೊಟ್ಟು, ಬೇರೆ ವಾಹನಗಳಲ್ಲಿ ತಹಶೀಲ್ದಾರರು ಕಚೇರಿ ತಲುಪಿದ ಘಟನೆ ಕೆಲಬಾರಿ ನಡೆದಿದೆ.

ಜೋಯಿಡಾ ತಾಲೂಕು ವಿಸ್ತಿರ್ಣದಲ್ಲಿ ಅತ್ಯಂತ ದೊಡ್ಡದು. ಯಾವುದೇ ಆಡಳಿತಾತ್ಮಕ ಕಾರ್ಯದಲ್ಲಿ ಒಂದು ತುದಿಯಿಂದ ಇನ್ನೊಂದು ತುದಿಗಳಿಗೆ ಹೋಗಲು ಸುಮಾರು 50ರಿಂದ 100 ಕಿ.ಮೀ. ಹೋಗಬೇಕಾಗುತ್ತಿದೆ. ಕೊಡಸಳ್ಳಿಯಂತ ದೂರದ ಪ್ರದೇಶಕ್ಕೆ ಹೋಗಲು ಜೋಯಿಡಾದಿಂದ ಕದ್ರಾ ಮೂಲಕ ನೂರಾರು ಕಿ.ಮೀ. ದೂರ ಸಾಗಬೇಕಿದೆ. ಇಂತಹ ಸಂದರ್ಭದಲ್ಲಿ ವಾಹನವಿಲ್ಲದೆ ತಹಶೀಲ್ದಾರರು ಅಗತ್ಯ ಕರ್ತವ್ಯ ನಿಮಿತ್ತ ಖಾಸಗಿ ವಾಹನದ ಮೊರೆ ಹೋಗಬೇಕಾದ ಅನಿವಾರ್ಯತೆಯಿದೆ. ಇದಲ್ಲದೆ ಸಚಿವರ ಸಭೆ, ಜಿಲ್ಲಾಮಟ್ಟದ ಸಭೆ, ತಾಲೂಕು ಅಧಿಕಾರಿಗಳ ಸಭೆ ಹೀಗೆ ಹಲವು ಆಡಳಿತಾತ್ಮಕ ಕಾರ್ಯದಲ್ಲಿ ವಾಹನವಿಲ್ಲದೇ ಪರದಾಡುತ್ತಿದ್ದಾರೆ.

ಸ್ವಂತ ವಾಹನದಲ್ಲಿ ಸಂಚಾರ: ಮಳೆಗಾಲ ಸೇರಿದಂತೆ ಇನ್ನಿತರ ಸಮಸ್ಯೆ ಎದುರಿಸಲು ತೊಂದರೆಯಾಗಬಾರದೆಂದು ಈಗಿನ ತಹಶೀಲ್ದಾರ್‌ ಸಂಜಯ ಕಾಂಬಳೆ ತಮ್ಮ ಸ್ವಂತ ವಾಹನದಲ್ಲಿಯೇ ಕಳೆದ ಕೆಲ ತಿಂಗಳುಗಳಿಂದ ಓಡಾಡಿಕೊಂಡಿದ್ದಾರೆ. ಕೆಲ ಗ್ರಾಪಂಗಳಿಗೆ ಅವರ ವಾಹನ ಕೂಡಾ ಹೋಗದೆ ಕಷ್ಟ ಎದುರಿಸುತ್ತಿದ್ದಾರೆ. ಆದರೆ ಕರ್ತವ್ಯ ಪಾಲನೆಯ ಜರೂರ ಇರುವ ಸಂದರ್ಭದಲ್ಲಿ ಅನೇಕ ಸಾರಿ ತಮ್ಮ ವಾಹನದ ಉಪಯೋಗ ಮಾಡಿಕೊಂಡು ತಮ್ಮ ಜವಾಬ್ದಾರಿ ನಿಭಾಯಿಸಿರುತ್ತಾರೆ.

ಮಳೆಗಾಲದಲ್ಲಿ ತೀರಾ ಅಗತ್ಯ: ಮಳೆಗಾಲದ ದಿನಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ, ಸೂಪಾ ಡ್ಯಾಮ್‌ ಹಿನ್ನೀರನ ಪ್ರದೇಶದ ಗ್ರಾಮಗಳಲ್ಲಿ ಹಿನ್ನಿರಿನಿಂದ ಉದ್ಭವಿಸುವ ಸಮಸ್ಯೆಗಳು, ಅತಿ ವೃಷ್ಟಿ, ಅನಾವೃಷ್ಟಿಯಿಂದಾಗುವ ಸಮಸ್ಯೆ ಹೀಗೆ ಹಲವಾರು ಸಮಸ್ಯೆಗಳು ಉದ್ಭವಿಸುತ್ತಿದ್ದು, ಇಂತಹ ಸಮಸ್ಯೆಗಳಿಗೆ ತ್ವರಿತವಾಗಿ ಕಾರ್ಯೋ ನ್ಮೂಖರಾಗಬೇಕಾದ ಅನಿವಾರ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ವಾಹನವಿಲ್ಲದೆ ಪರದಾಡು ವಂತಾದರೆ ಜನಸಾಮಾನ್ಯರಿಗೆ ಆಗುವ ಹಾನಿಗೆ ತಹಶೀಲ್ದಾರರ ಕರ್ತವ್ಯಲೋಪ ಕಾರಣವಾಗುವಂತ ಪರಿಸ್ಥಿತಿ ನಿರ್ಮಾಣವಾಗಲಿದೆ.

ಸರಕಾರ ಈ ಬಗ್ಗೆ ಗಮನ ಹರಿಸಿ ಜೋಯಿಡಾ ತಾಲೂಕಿನ ದುರ್ಗಮ ಪ್ರದೇಶ, ದಟ್ಟ ಕಾಡಿನ ಮಧ್ಯದ ಗ್ರಾಮೀಣ ಪ್ರದೇಶ ಮತ್ತು ವಿಸ್ತಾರದ ದೃಷ್ಟಿಯಿಂದ ಅತ್ಯಂತ ಸುರಕ್ಷಿತ ಹಾಗೂ ಕಾಲಮಿತಿಯಲ್ಲಿ ಶೀಘ್ರ ತಲುಪಲು ಅಗತ್ಯ ವಿರುವ ವಿಶೇಷ ವಾಹನ ವ್ಯವಸ್ಥೆ ಮಾಡಬೇಕಿದೆ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.