ತಾ.ಪಂ ಸಾಮಾನ್ಯ ಸಭೆ: ಇಲಾಖಾವಾರು ಪ್ರಗತಿ ನೋಟ ಮಂಡನೆ


Team Udayavani, Apr 30, 2022, 5:45 PM IST

22meeting

ಭಟ್ಕಳ: ತಾಲೂಕು ಪಂಚಾಯತ್ ಸಭಾ ಭವನದಲ್ಲಿ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಐ.ಟಿ. ವಿವೇಕ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆಯು ನಡೆಯಿತು.

ಸಭೆಯಲ್ಲಿ ತಮ್ಮ ತಮ್ಮ ಇಲಾಖೆಯ ಪ್ರಗತಿ ನೋಟವನ್ನು ಇಲಾಖಾವಾರು ಅಧಿಕಾರಿಗಳು ಮಂಡಿಸಿದರು. ಈ ಸಂದರ್ಭದಲ್ಲಿ ತೋಟಗಾರಿಕಾ ಇಲಾಖೆಯ ಪ್ರಗತಿ ವರದಿಯನ್ನು ಅಧಿಕಾರಿ ಶ್ವೇತಾ ಕರ್ಕಿ ಮಂಡಿಸುತ್ತಾ ವಿವಿಧ ಯೋಜನೆಯಡಿಯಲ್ಲಿ ಬಂದ ಅನುದಾನ ಹಾಗೂ ರೈತರಿಗೆ ಒದಗಿಸಲಾದ ಸಹಾಯ ಧನದ ವಿವರಣೆಯನ್ನು ನೀಡಿದರು.

ಈ ಸಂದರ್ಭದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ ಅವರು ಮಲ್ಲಿಗೆ ಬೆಳೆಗಾರರ ಹಾಗೂ ಗ್ರಾಹರ ನಡುವಿನ ಮಧ್ಯವರ್ತಿಗಳಿಂದಾಗಿ ಮಲ್ಲಿಗೆ ಬೆಳೆಗಾರರಿಗೆ ದೊರೆಯಬೇಕಾಗಿದ್ದ ದರ ದೊರೆಯದೇ ತೊಂದರೆಯಾಗುತ್ತಿದ್ದು ಈ ಬಗ್ಗೆ ನೇರ ಖರೀದಿಗೆ ಸಹಾಯವಾಗುವಂತೆ ಪ್ರಸ್ತಾವನೆಯನ್ನು ತಯಾರಿಸಲು ಹೇಳಿದ್ದು ಯಾವ ಹಂತದಲ್ಲಿದೆ ಎಂದು ಪ್ರಶ್ನಿಸಿದರು. ಈ ಕುರಿತು ಮಾಹಿತಿ ಇಲ್ಲದ ಅಧಿಕಾರಿ ಮುಂದಿನ ಸಭೆಗೆ ತಿಳಿಸುವುದಾಗಿ ಹೇಳಿದರು. ನರೇಗಾ ಯೋಜನೆಯ ಪ್ರಗತಿ ತೀರಾ ಕುಂಠಿತವಾಗಿದ್ದು ಹೆಚ್ಚಿಸಲು ಸೂಚಿಸಲಾಯಿತು.

ಕೃಷಿ ಇಲಾಖೆಯಲ್ಲಿ 16 ಸಾವಿರ ಮಾನವ ಕೆಲಸಗಳ ಗುರಿ ನೀಡಲಾಗಿದ್ದರೂ ಸಹ ಅರ್ಧದಷ್ಟು ಸಾಧನೆಯಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪದೇ ಪದೇ ಪ್ರಗತಿಯ ಕುರಿತು ಹೇಳುತ್ತಿದ್ದು ನೋಟೀಸು ನೀಡಿದ್ದಾರೆ. ಮುಂದಿನ ತಿಂಗಳ ಒಳಗಾಗಿ ಪ್ರಗತಿ ಸಾಧಿಸಬೇಕು ಎಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಹೇಳಿದರು.

ಮೀನುಗಾರಿಕಾ ಇಲಾಖೆಯಲ್ಲಿ ಮೀನುಗಾರಿಕಾ ಅಭಿವೃದ್ಧಿಗಾಗಿ ಪ್ರದರ್ಶನ, ತರಬೇತಿಯನ್ನು ನೀಡಲಾಗಿದ್ದು, ಬ್ಯಾಂಕಿಂಗ್ ಕುರಿತು ತರಬೇತಿಯನ್ನು ಸಹ ನೀಡಲಾಗಿದೆ. ಕರಪತ್ರಗಳನ್ನು ಮುದ್ರಿಸಿ ಹಂಚಲಾಗಿದ್ದು, ಸಾಂಪ್ರದಾಯಿಕ ಮೀನುಗಾರಿಕೆಗೆ ಬಲೆ ಖರೀದಿಗೆ ಧನ ಸಹಾಯ ನೀಡಲಾಗಿದೆ ಎಂದರು.

2021-22ನೇ ಸಾಲಿನಲ್ಲಿ ಕೋವಿಡ್ ಸಂಬಂಧ ಹಾನಿಯಾದ ಕುರಿತು ಪರಿಹಾರ ಹಣವನ್ನು ನೀಡಲಾಗಿದೆ. ಒಂದು ಮಹಿಳಾ ಉದ್ಯಮಿಯೋರ್ವರ ಕೋಲ್ಡ್ ಸ್ಟೋರೇಜ್ ಮತ್ತು ಐಸ್ ಪ್ಲಾಂಟ್‍ಗೆ 90 ಲಕ್ಷ ಸಬ್ಸಿಡಿ ನೀಡಲಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ವಿದ್ಯಾರ್ಥಿ ವೇತನವನ್ನು ಅವರ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ. ಅತಿಕ್ರಮಣದಾರರ ಅರ್ಜಿಗಳ ವಿಲೇವಾರಿ ನಡೆಯುತ್ತಿದೆ ಎಂದರು. ಅಂತರ್ಜಾತಿ ವಿವಾಹ ಒಂದು ಅರ್ಜಿ ಬಂದಿದ್ದು ಮಂಜೂರಿಗಾಗಿ ಕಳುಹಿಸಲಾಗಿದೆ ಎಂದರು.

ಅಲ್ಪ ಸಂಖ್ಯಾತರ ಇಲಾಖೆಯ ಶಂಶುದ್ಧೀನ್ ಶೇಖ್ ಮಾತನಾಡಿ, 14 ಜನರಿಗೆ ವಿಶೇಷ ಯೋಜನೆಯಡಿಯಲ್ಲಿ ತಲಾ 25 ಸಾವಿರ ವಿದ್ಯಾರ್ಥಿ ವೇತನ ನೀಡಲಾಗಿದೆ. 116 ಜನ ಪ್ರಯಾಣ ಭತ್ಯೆಗೆ ಅರ್ಜಿ ಸಲ್ಲಿಸಿದ್ದು 83 ಜನರಿಗೆ ತಲಾ 1000ದಂತೆ ನೀಡಲಾಗಿದೆ ಎಂದರು.

ಮೆಟ್ರಿಕ್‍ನಂತರದ ವಸತಿ ನಿಲಯದ ಕಟ್ಟಡ ಪೂರ್ಣಗೊಂಡಿದ್ದು ಉದ್ಘಾಟನೆಗಾಗಿ ಸಚಿವರು ದಿನಾಂಕ ನಿಗದಿ ಮಾಡಬೇಕಾಗಿದೆ. ಜೈನ ಬಸದಿ ಜೀರ್ಣೋದ್ಧಾರಕ್ಕೆ ತಲಾ 10 ಲಕ್ಷದಂತೆ ಎರಡು ಜೈನ ಬಸದಿಗಳಿಗೆ ನೀಡಲಾಗಿದೆ ಎಂದರು.

ಶಿಶು ಅಭಿವೃದ್ಧಿ ಇಲಾಖೆ ಸುಶೀಲಾ ಮಾತನಾಡಿ, ಅಂಗನವಾಡಿಗೆ ಬೇಸಿಗೆ ರಜೆಯಲ್ಲಿ ಮನೆ ಮನೆಗೆ ಪೌಷ್ಟಿಕಾಂಶಯುಕ್ತ ಆಹಾರ ವದಗಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.

ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸೋಡಿಗದ್ದೆ ಅಂಗನವಾಡಿ ಕೇಂದ್ರದ ಉಸ್ತುವಾರಿ ಬೆಳಕೆ ಪಂಚಾಯತ್‍ನದ್ದಾಗಿದೆ. ಇಲ್ಲಿಗೆ ಬರುವ ಮಕ್ಕಳು ಕೂಡಾ ಯಲ್ವಡಿಕವೂರು ಗ್ರಾಮದವರೇ ಆಗಿದ್ದರಿಂದ ಉಸ್ತುವಾರಿ ತಮಗೆ ವಹಿಸಬೇಕು ಎಂದು ಗ್ರಾಮ ಪಂಚಾಯತ್‍ನಿಂದ ಪತ್ರ ಬರೆದಿದ್ದಾರೆ ಎಂದು ಸಭೆಗೆ ತಿಳಿಸಿದರು. ಈ ಕುರಿತು ವರದಿಯನ್ನು ನೀಡುವಂತೆ ಹಾಗೂ ನಿರ್ಣಯ ಕೈಗೊಳ್ಳುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು.

ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಬಸವರಾಜ ಬಳ್ಳಾರಿ ಅವರಿಗೆ ಕುಡಿಯುವ ನೀರಿನ ಕಾಮಗಾರಿಗಳನ್ನು ಶೀಘ್ರ ಮುಗಿಸುವಂತೆ ಸೂಚಿಸಲಾಯಿತು. ಸುಮಾರು 20-25 ಮಜಿರೆಗಳಲ್ಲಿ ಕುಡಿಯುವ ನೀರಿನ ಅಭಾವವಾಗುವ ಸಾಧ್ಯತೆಗಳಿವೆ ಎಂದು ಕಾರ್ಯನಿರ್ವಹಣಾಧಿಕಾರಿ ಸಭೆಗೆ ತಿಳಿಸಿದರು.

ಕಂದಾಯ ಇಲಾಖೆಯ ವಿಜಯಲಕ್ಷ್ಮೀ ಮಣಿ ಇಲಾಖೆಯ ಪ್ರಗತಿ ವರದಿ ನೀಡಿದರು. ಉಳಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ವರದಿಯನ್ನು ನೀಡಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.