ತಮಿಳುನಾಡಿನಲ್ಲಿ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಕಾರವಾರದಲ್ಲಿ ಪತ್ತೆ

ಮೊಬೈಲ್ ಟ್ರ್ಯಾಕ್ ಮೂಲಕ ಜೋಡಿಗಳನ್ನು ಪತ್ತೆ ಹಚ್ಚಿದ ತಮಿಳುನಾಡು ಪೊಲೀಸರು

Team Udayavani, Aug 28, 2022, 12:40 PM IST

ತಮಿಳುನಾಡಿನಿಂದ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಕಾರವಾರದಲ್ಲಿ ಪತ್ತೆ

ಕಾರವಾರ : ಪ್ರಿಯಕರನೊಂದಿಗೆ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆಯನ್ನು ತಮಿಳುನಾಡು ಪೊಲೀಸರು ಕಾರವಾರದಲ್ಲಿ ಪತ್ತೆ ಹಚ್ಚಿದ್ದಾರೆ.

ತಮಿಳುನಾಡು ಮೂಲದ ಮಹಿಳೆಯನ್ನು ಮೊಬೈಲ್ ಟ್ರ್ಯಾಕಿಂಗ್ ಮೂಲಕ ಪತ್ತೆ ಹಚ್ಚಿದ್ದು ವಿಶೇಷ. ಕಾರವಾರದ ಥಾಮ್ಸೆವಾಡದಲ್ಲಿ ಪ್ರೇಮಿಗಳು ಕಳೆದ ಆರು ತಿಂಗಳಿಂದ ನೆಲಸಿದ್ದರು ಎಂಬುದು ಬೆಳಕಿಗೆ ಬಂದಿದೆ. ತಮಿಳುನಾಡು ಪೊಲೀಸರು ಮಹಿಳೆ ಹಾಗೂ ಆಕೆಯ ಎಂಜಿನಿಯರ್ ಸ್ನೇಹಿತನನ್ನು ಶನಿವಾರ ವಾಪಸ್ ತಮಿಳುನಾಡಿಗೆ ಕರೆದೊಯ್ದಿದ್ದಾರೆ.

ತಮಿಳುನಾಡಿನ ಪುದುಕೋಟೆ ಜಿಲ್ಲೆಯ ಗಣೇಶನಗರದ ಆಯಿಷಾ ಹಾಗೂ ಆಕೆಯ ಪ್ರಿಯಕರ ಬೀರ್ ಮೊಹಿದ್ದೀನ್ ನನ್ನು ಕಾರವಾರದ ಪೊಲೀಸರ ಸಹಕಾರದೊಂದಿಗೆ ಶನಿವಾರ ಪತ್ತೆ ಹಚ್ಚಿದ್ದಾರೆ. ಮಹಿಳೆ ಕಾಣೆಯಾದ ಪ್ರಕರಣ ತಮಿಳುನಾಡು ‌ಪೊಲೀಸ್ ಠಾಣೆಯಲ್ಲಿದ್ದ ಕಾರಣ ಅವರಿಬ್ಬರನ್ನು ತಮಿಳುನಾಡಿಗೆ ಕರೆದೊಯ್ಯಲಾಗಿದೆ.

ಎರಡು ಮಕ್ಕಳ ತಾಯಿಯೂ ಆಗಿರುವ ಆಯಿಷಾ ನಾಪತ್ತೆಯಾಗಿರುವ ಬಗ್ಗೆ ಅವರ ಕುಟುಂಬಸ್ಥರು ಇದೇ ಫೆ.21 ರಂದು ತಮಿಳುನಾಡಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ಆರಂಭಿಸಿದ ಪೊಲೀಸರು ಮೊಬೈಲ್ ಟ್ರ್ಯಾಕಿಂಗ್ ಮಾಡಿದ ವೇಳೆ ಅವರು ಕಾರವಾರದಲ್ಲಿರುವುದು ಪತ್ತೆಯಾಗಿದೆ. ಆದರೆ ಕಾರವಾರದಲ್ಲಿ ಎಲ್ಲಿದ್ದಾರೆಂಬುದನ್ನು ಹುಡುಕಲು ಸಾಧ್ಯವಾಗಿರಲಿಲ್ಲ. ಎರಡು ಬಾರಿ ಕಾರವಾರಕ್ಕೆ ಬಂದ ತಮಿಳುನಾಡಿನ ಪೊಲೀಸರ ತಂಡಕ್ಕೆ ಇಬ್ಬರು ಪತ್ತೆಯಾಗದೆ ವಾಪಸ್ ತೆರಳಿದ್ದರು.

ಇದನ್ನೂ ಓದಿ : ರಾಜ್ಯಾಧ್ಯಕ್ಷ ಸ್ಥಾನ ಮುಂದುವರಿಕೆ ರಾಷ್ಟ್ರೀಯ ನಾಯಕರ ನಿರ್ಧಾರ: ಈಶ್ವರಪ್ಪ

ಆದರೆ ಶುಕ್ರವಾರ ನಗರ ಠಾಣೆ ಸಿಪಿಐ ಸಿದ್ದಪ್ಪ ಬಿಳಗಿ ಹಾಗೂ ಇತರ ಪೊಲೀಸರ ಸಹಕಾರದಲ್ಲಿ ತಮಿಳುನಾಡು ಪೊಲೀಸರು ಮೊಬೈಲ್ ಟ್ರ್ಯಾಕಿಂಗ್ ಮಾಡಿ ಆಯಿಷಾನನ್ನು ಪತ್ತೆ ಮಾಡಿದ್ದಾರೆ. ಆಕೆಯ ದೂರದ ಸಂಬಂಧಿಯೂ ಆಗಿದ್ದ ಬೀರ್ ಮೊಹಿದ್ದೀನ್ ನೊಂದಿಗೆ ಗೋವಾಗೆ ಓಡಿ ಬಂದಿದ್ದ ಈಕೆ, ಕಳೆದ ಆರು ತಿಂಗಳಿನಿಂದ ನಗರದ ಥಾಮ್ಸೇವಾಡದಲ್ಲಿ ಜೊತೆಯಾಗಿ ವಾಸವಾಗಿರುವುದು ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ.

ಬೀರ್ ಮೊಹಿದ್ದೀನ್ ಎಂಜಿನಿಯರಿಂಗ್ ಮುಗಿಸಿದ್ದು, ಆಯಿಷಾಳನ್ನು ಪ್ರೀತಿಸಿ, ಕಾರವಾರಕ್ಕೆ ಬಂದಿದ್ದರು. ಥಾಮ್ಸೆವಾಡದಲ್ಲಿ ಬಾಡಿಗೆ ಮನೆಯಲ್ಲಿ ಉಳಿದಿದ್ದರು. ಬೀರ್ ಮೊಹಿದ್ದೀನ್ ಕಾರವಾರದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಇಬ್ಬರು ಸೇರಿ ಇಲ್ಲಿಯೇ ವಾಸ ಮಾಡತೊಡಗಿದ್ದರು. ಆದರೆ ಮೊಬೈಲ್ ಟ್ರ್ಯಾಕಿಂಗ್ ಮಾಡಿ ಇಬ್ಬರನ್ನು ಹುಡುಕಿದ ಪೊಲೀಸರು ತಮಿಳುನಾಡಿಗೆ ಕರೆದೊಯ್ದಿದ್ದಾರೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.