ತೌಕ್ತೇ ಶಾಂತ; ಕಿನಾರೆ ಜನತೆ ನಿಟ್ಟುಸಿರು

ಬೆಳಕು ನೀಡಲು ಹೆಸ್ಕಾಂ ನಿರಂತರ ಪರಿಶ್ರಮ! ­ಆಕ್ಸಿಜನ್‌ ಘಟಕಕ್ಕೆ ವಿದ್ಯುತ್‌ ಸರಬರಾಜು

Team Udayavani, May 18, 2021, 4:29 PM IST

17 knt 03-3

ಕುಮಟಾ: ತೌಕ್ತೇ ಚಂಡಮಾರುತದ ಪ್ರಭಾವದಿಂದಾಗಿ ಕಳೆದೆರಡು ದಿನಗಳಿಂದ ತಾಲೂಕಿನಲ್ಲಿ ಬೀಸುತ್ತಿರುವ ವಿಪರೀತ ಗಾಳಿ ಹಾಗೂ ಧಾರಾಕಾರ ಮಳೆಯ ಆರ್ಭಟ ಸೋಮವಾರ ಶಾಂತಗೊಂಡಿದೆ.

ಕಡಲ ಅಲೆಗಳ ರಭಸ ಕೊಂಚ ಕ್ಷೀಣಿಸಿದ್ದು, ಕಿನಾರೆಯ ಜನರು ಕಾಳಜಿ ಕೇಂದ್ರಗಳಿಂದ ನಿಟ್ಟುಸಿರು ಬಿಟ್ಟು ಮರಳಿ ಮನೆಗಳತ್ತ ಮುಖ ಮಾಡುತ್ತಿದ್ದಾರೆ. ತೌಕ್ತೇ ಚಂಡಮಾರುತವು ಕೊರೊನಾ ನಡುವೆಯೇ ಅಪ್ಪಳಿಸಿದ್ದು, ತಾಲೂಕಿನಲ್ಲಿ ಹಲವಾರು ಅವಾಂತರಗಳನ್ನು ಸೃಷ್ಟಿಸಿವೆ. ಮೀನುಗಾರರು ಹಾಗೂ ರೈತರಿಗೆ ಅಪಾರ ಹಾನಿಯುಂಟು ಮಾಡಿದೆ. ಹಲವು ಮನೆಗಳು ಅಲೆಗಳ ಹಾಗೂ ಗಾಳಿಯ ರಭಸಕ್ಕೆ ಹಾನಿಗೊಳಗಾಗಿವೆ.

ಮೀನುಗಾರರ ದೋಣಿ ಸೇರಿದಂತೆ ಸಲಕರಣೆಗಳು ಸಮುದ್ರದ ಪಾಲಾಗಿವೆ. ಫಲವತ್ತಾದ ಕೃಷಿ ಭೂಮಿ ಸಮುದ್ರದ ನೀರಿನಿಂದ ಫಲವತ್ತತೆ ಕಳೆದುಕೊಂಡಿದೆ. ಹಲವೆಡೆ ಮೂಲಸೌಕರ್ಯ ಪುನಃ ಕಲ್ಪಿಸುವಂತಾಗಿದೆ.

ಮನೆಗಳತ್ತ ಕಿನಾರೆ ಜನ: ಕಳೆದೆರಡು ದಿನಗಳಿಂದ ಸುರಿದ ಮಳೆ ಹಾಗೂ ಕಡಲ ಅಲೆಗಳ ರಭಸಕ್ಕೆ ವಾಸವಿದ್ದ ಮನೆಗಳು ಜಲಾವೃತಗೊಂಡ ಕಾರಣ ತಾಲೂಕಾಡಳಿತ ಸ್ಥಾಪಿಸಿದ್ದ ಕಾಳಜಿ ಕೇಂದ್ರಗಳಲ್ಲಿ ವಾಸ್ತವ್ಯವಿದ್ದ ಜನರು ತಮ್ಮ ತಮ್ಮ ಮನೆಗಳತ್ತ ಮುಖ ಮಾಡಿದ್ದಾರೆ. ಮನೆಯ ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದಾರೆ. ಎರಡೇ ದಿನದಲ್ಲಿ ದುರಸ್ತಿ: ವಿಪರೀತ ಗಾಳಿ-ಮಳೆಯಿಂದ ತಾಲೂಕಿನಲ್ಲಿ 120ಕ್ಕೂ ಅಧಿ ಕ ವಿದ್ಯುತ್‌ ಕಂಬಗಳು ಮುರಿದಿದ್ದವು. ತಂತಿಗಳು ಹರಿದಿದ್ದವು. ಹೆಸ್ಕಾಂ ಇಲಾಖೆ ಸಿಬ್ಬಂದಿ ಎಸ್‌ಡಿಆರ್‌ಎಫ್‌ ತಂಡದ ಸಹಕಾರದೊಂದಿಗೆ ಎರಡೇ ದಿನದಲ್ಲಿ ದುರಸ್ತಿ ಕಾರ್ಯ ನಡೆಸಿ, ತಾಲೂಕಿಗೆ ವಿದ್ಯುತ್‌ ಕಲ್ಪಿಸಿದೆ.

ವಿದ್ಯುತ್‌ ಸರಬರಾಜು: ವಿದ್ಯುತ್‌ ವ್ಯತ್ಯಯವಾದ ಕಾರಣ ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ಒದಗಿಸುತ್ತಿರುವ ತಾಲೂಕಾಸ್ಪತ್ರೆ ಹಾಗೂ ಬೆಟುRಳಿಯ ಆಕ್ಸಿಜನ್‌ ಉತ್ಪಾದನಾ ಘಟಕಕ್ಕೆ ಕೊಂಚ ಸಮಸ್ಯೆಯುಂಟಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ತಾಲೂಕಾಡಳಿತ, ಹೆಸ್ಕಾಂ ಇಲಾಖೆ ಹಾಗೂ ಎಸ್‌ಡಿಆರ್‌ಎಫ್‌ ತಂಡವು ಆ ಮಾರ್ಗವನ್ನು ದುರಸ್ತಿಗೊಳಿಸಿ ಕೂಡಲೇ ವಿದ್ಯುತ್‌ ಕಲ್ಪಿಸಿದ್ದಾರೆ.

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.