ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ


Team Udayavani, Dec 1, 2021, 10:41 AM IST

fight

ದಾಂಡೇಲಿ : ನಗರದಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗಿ ಹೊರ ಬರುತ್ತಿದ್ದಂತೆಯೆ ಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ತಹಶೀಲ್ದಾರ್ ಕಚೇರಿಯ ಆವರಣದಲ್ಲೆ ಹೊಡೆದಾಟ ನಡೆದು, ಆನಂತರ ಪ್ರಕರಣ ದಾಖಲಾದ ಘಟನೆ ಸೋಮವಾರ ಸಂಜೆ ದಾಂಡೇಲಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗಾಂಧಿನಗರದ ನಿವಾಸಿ ಅನಿತಾ ಪ್ರಕಾಶ ಪಾಟೀಲ ಮತ್ತು ನಗರ ಸಭಾ ಸದಸ್ಯೆ ರುಕ್ಮಿಣಿ ಬಾಗಡೆಯವರ ನಡುವೆ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ವಿಚಾರಣೆಯಿತ್ತು. ಈ ವಿಚಾರಣೆ ಮುಗಿದು ಹೊರ ಬರುತ್ತಿದ್ದಂತೆಯೆ ಅನಿತಾ ಪ್ರಕಾಶ ಪಾಟೀಲ ಮತ್ತು ರುಕ್ಮಿಣಿ ಬಾಗಾಡೆಯವರ ಗುಂಪಿನ ನಡುವೆ ಮಾತಿನ ಚಕಮುಖಿ ನಡೆದಿದೆ.

ಇದಾದ ಬಳಿಕ ತಹಶೀಲ್ದಾರ್ ಕಚೇರಿಯ ಆವರಣದಲ್ಲೆ ಮಾತಿಗೆ ಮಾತು ಬೆಳೆದು ರುಕ್ಮಿಣಿ ಬಾಗಡೆಯವರ ಪುತ್ರ ಪ್ರದೀಪ ಬಾಗಡೆ ಎಂಬಾತನು ಅನಿತಾ ಪ್ರಕಾಶ ಪಾಟೀಲ ಅವರ ಮೇಲೆ ಹಲ್ಲೆ ನಡೆಸಿದ್ದಾನೆಂದು, ಇದನ್ನು ಬಿಡಿಸಲು ಹೋದ ಮಲಪ್ರಭಾ ಮತ್ತು ರಾಜೇಶ ಗಿರಿಯವರಿಗೂ ಹಲ್ಲೆ ಮಾಡಲಾಗಿದ್ದು,

ಈ ಸಂದರ್ಭದಲ್ಲಿ ಸಂಜಯ ಬಾಗಡೆಯವರು ರಾಜೇಶ ಗಿರಿಯವರ ತಲೆಗೆ ಹೆಲ್ಮೇಟಿನಿಂದ ಹೊಡೆದು ರಕ್ತ ಬರುವಂತೆ ಗಾಯಗೊಳಿಸಿದ್ದಾರೆ ಹಾಗೂ ರುಕ್ಮಿಣಿ ಬಾಗಡೆಯವರು ಚಪ್ಪಲಿಯಲ್ಲಿ ಮಲಪ್ರಭಾರವರಿಗೆ ಹೊಡೆದು ಅವಮಾನಿಸಿದ್ದಾರೆಂದು ಮತ್ತು ಅವ್ಯಾಚ ಶಬ್ದಗಳಿಂದ ಬೈಯ್ದಿದ್ದಾರೆಂದು ಈ ಬಗ್ಗೆ ಸೂಕ್ತ ರೀತಿಯ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಅನಿತಾ ಪ್ರಕಾಶ ಪಾಟೀಲ ಅವರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇಲ್ಲಿ ಗಾಯಗೊಂಡಿದ್ದ ರಾಜೇಶ ಗಿರಿಯವರಿಗೆ, ಅನಿತಾ ಪ್ರಕಾಶ ಪಾಟೀಲ ಮತ್ತು ಮಲಪ್ರಭಾರವರಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಪ್ರತಿದೂರು ನೀಡಿದ ರುಕ್ಮಿಣಿ ಬಾಗಾಡೆ:

ನಗರ ಸಭಾ ಸದಸ್ಯೆ ರುಕ್ಮಿಣಿ ಬಾಗಾಡೆಯವರು ಸಹ ನಗರ ಠಾಣೆಯಲ್ಲಿ ದೂರಿಗೆ ಪ್ರತಿ ದೂರು ನೀಡಿದ್ದು, ಅವರು ನೀಡಿದ್ದ ದೂರಿನಲ್ಲಿ ತಾನು, ತನ್ನ ಪತಿ ಸಂಜಯ್ ಬಾಗಾಡೆ ಮತ್ತು ಪ್ರದೀಪ ಬಾಗಡೆ ಜೊತೆ ಪೊಲೀಸ್ ಠಾಣೆಗೆ ಹೋಗಲು ಬರುತ್ತಿದ್ದಾಗ ಮಲಪ್ರಭಾ ರವರು ನನ್ನ ತಲೆಕೂದಲನ್ನು ಹಿಡಿದು ಎಳೆದಾಡಿದ್ದಾರೆ.

ಅನಿತಾ ಪ್ರಕಾಶ ಪಾಟೀಲ ಅವರು ಚಪ್ಪಲಿಯಿಂದ ಹೊಡೆದಿದ್ದಾರೆ. ರಾಜೇಶ ಅವರು ಅವ್ಯಾಚ ಶಬ್ದಗಳಿಂದ ಬೈಯ್ದು ಎಳೆದಾಡಿ ಕುತ್ತಿಗೆಯನ್ನು ಹಿಡಿದು ಹೊಡೆದಿದ್ದಾರೆ. ಹಾಗೂ ಹೇಮಂತಪುರಿ ಮತ್ತು ಪರಶುರಾಮ ಪುರಿ ಅವರುಗಳು ಸಂಜಯ್ ಬಾಗಡೆ ಹಾಗೂ ಪ್ರದೀಪ ಬಾಗಡೆಗೆ ಹೊಡೆದು ಜಾತಿ ನಿಂದನೆಯ ಜೊತೆಗೆ ಕೊಲೆ ಬೆದರಿಕೆಯೊಡ್ಡಿದ್ದಾರೆಂದು ಈ ಬಗ್ಗೆ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ರುಕ್ಮಿಣಿ ಬಾಗಡೆ, ಪ್ರದೀಪ ಬಾಗಡೆಯವರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಒಟ್ಟಿನಲ್ಲಿ ದೂರಿಗೆ ಪ್ರತಿದೂರು ದಾಖಲಾಗಿದ್ದು, ಘಟನೆಗೆ ಸಂಬಂಧಪಟ್ಟಂತೆ ತಹಶೀಲ್ದಾರ್ ಕಚೇರಿಯ ಸಿಸಿ ಕ್ಯಾಮೇರಾದಲ್ಲಿ ಕೆಲ ದೃಶ್ಯಗಳು ಸೆರೆಯಾಗಿವೆ ಎನ್ನುವ ಮಾಹಿತಿ ಲಭ್ಯವಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಲೆ ಎಚ್ಚೆತ್ತು ಅಗತ್ಯ ಮುನ್ನೆಚ್ಚರಿಕೆ ವಹಿಸದೇ ಇದ್ದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಕೋಪ ತಾರಕಕ್ಕೇರಿ ಅನಾಹುತ ನಡೆದರೂ ಅಚ್ಚರಿ ಪಡಬೇಕಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.