ರಾಜ್ಯದಲ್ಲಿ ಬಿಜೆಪಿ ಗೆಲುವು ನಿಶ್ಚಿತ
Team Udayavani, Jan 9, 2018, 3:16 PM IST
ದಾಂಡೇಲಿ: ದೇಶದ 19 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಬರುವ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ಸಿನ ಭ್ರಷ್ಟಾಚಾರ, ಭೂಹಗರಣ, ಆಡಳಿತದ ವೈಫಲ್ಯತೆಯಿಂದ ಜನ ಬೇಸತ್ತಿದ್ದಾರೆಂದು ಸಂಸದ ಪ್ರಹ್ಲಾದ್ ಜೋಶಿ ನುಡಿದರು.
ಅವರು ನಗರದ ಮರಾಠ ಸಮುದಾಯ ಭವನದಲ್ಲಿ ಬೂತ್ ಸಶಕ್ತಿಕರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಪಜಾ, ಪಂಗಡ ಹಾಗೂ
ಹಿಂದುಳಿದ ಜನರಿಗೆ ಕೇಂದ್ರ ಹಾಗೂ ರಾಜ್ಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಕೊಟ್ಟಿದೆ. ಮೋದಿಜಿ ಸಾಧನೆ ಮನೆ-ಮನೆಗೆ ತಲಿಪಿಸುವ ಕಾರ್ಯವನ್ನು ಬೂತ ಮಟ್ಟದ ಕಾರ್ಯಕರ್ತರು ಪ್ರಾಮಾಣಿಕವಾಗಿ ಮಾಡಬೇಕಾಗಿದೆ ಎಂದರು.
ಮೋದಿಜಿ ಕಾರ್ಯದಿಂದ ಬಡವರ ಬೇಡಿಕೆ ಈಡೇರಿಸಲು ಸಾಧ್ಯವಾಗಿದೆ. ರಾಜ್ಯದ ಬಹುತೇಕ ಯೋಜನೆಗಳಿಗೆ ಸಾವಿರಾರು ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ ರಾಜ್ಯ ಸರ್ಕಾರ ಈ ಹಣದ ಸದ್ಬಳಕೆ ಮಾಡುವಲ್ಲಿ ವಿಫಲವಾಗಿದೆ ಎಂದು ಆರೋಪಸಿದರು. ಮಾಜಿ ಶಾಸಕ ಸುನಿಲ ಹೆಗಡೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡುತ್ತ ಬಿಜೆಪಿ ಗೆಲುವಿಗಾಗಿ ಬೂತ ಮಟ್ಟದ ಕಾರ್ಯಕರ್ತರು ಹೆಚ್ಚು ಪರಿಶ್ರಮ ಮಾಡಲು ಕಂಕಣ
ಬದ್ಧರಾಗಬೇಕಾಗಿದೆ ಎಂದರು.
ಬಿಜೆಪಿ ಹಳಿಯಾಳ ಅಧ್ಯಕ್ಷ ಶಿವಾಜಿ ನರಸಾನಿ, ಜೊಯಿಡಾ ಅಧ್ಯಕ್ಷ ತುಕಾರಾಮ ಮಂಜರೇಕರ, ಜಿಲ್ಲಾ ಕಾಯದರ್ಶಿ ಸುಧಾಕರ ರೆಡ್ಡಿ, ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ರಫಿಕ್ ಹುದ್ದಾರ, ಮುಖಂಡರಾದ ಮಂಗೇಶ ದೇಶಪಾಂಡೆ, ಚಂದ್ರಕಾಂತ ಕ್ಷೀರಸಾಗರ, ಅಶೋಕ ಪಾಟೀಲ, ಜಿ.ಆರ್.
ಪಾಟಿಲ, ಶಾರದಾ ಪರಶುರಾಮ, ದೇವಕ್ಕ ಕೆರಿಮನಿ, ಎಸ್.ಎ.ಶೆಟ್ಟಣ್ಣವರ, ಎನ್.ಎಸ್ ಹೆಗಡೆ, ಅನಿಲ ಮುತ್ನಾಳ, ಉಮೇಶ ಬಾಗತ ಮುಂತಾದವರಿದ್ದರು. ಹಿಂದುಳಿದ ವರ್ಗಗಳ ಅಧ್ಯಕ್ಷ ಗುರು ಮಠಪತಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್