ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಹೊನ್ನಾವರದ ಮಹಿಳೆ ಸಾವು
Team Udayavani, Apr 25, 2019, 4:30 PM IST
ಹಳಿಯಾಳ/ಹೊನ್ನಾವರ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಅವರ ಪತಿ ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಐಮಂಗಲ ಸಮೀಪ ಬುಧವಾರ ಬೆಳಗಿನ ಜಾವ ಸಂಭವಿಸಿದೆ. ಮೃತ ಮಹಿಳೆಯನ್ನು ಹೊನ್ನಾವರ ಮೂಲದ ಶಾರದಮ್ಮ ಗಾವಡೆ (35) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪತಿ ಸುನೀಲ್ ಗಾವಡೆ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ದಾಂಡೇಲಿಯಿಂದ ಬೆಂಗಳೂರಿಗೆ ತೆರಳುತ್ತಿರುವಾಗ ಈ ಅವಘಡ ನಡೆದಿದೆ.
ಸುನೀಲ್ ಗಾವಡೆ ಅವರು ದಾಂಡೇಲಿ ನಗರಸಭೆಯಲ್ಲಿ ಹೆಲ್ತ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾರದಾ ಅವರು ಹಳಿಯಾಳದಲ್ಲಿ ಸೆನಿಟರಿ ಇನ್ಸ್ಪೆಫೆಕ್ಟರ್ ಆಗಿ ಕೆಲಸಮಾಡುತ್ತಿದ್ದರು. ಇವರು ಹೊನ್ನಾವರದ ಮಾಳ್ಕೋಡಿನವರು, ಗಾವಡೆ ಹಳಿಯಾಳದವರು. ಅವರ ಕಳೆಬರಹ ಬುಧವಾರ ರಾತ್ರಿ 8ಕ್ಕೆ ಹಳಿಯಾಳಕ್ಕೆ ತಲುಪಿದ್ದು, ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಅಲ್ಲಿಂದ ರಾತ್ರಿ ಶವವನ್ನು ಹೊನ್ನಾವರಕ್ಕೆ ಒಯ್ಯಲಾಗಿದೆ. ಅವರ ಅಕಾಲಿಕ ನಿಧನಕ್ಕೆ ಸಚಿವ ಆರ್.ವಿ ದೇಶಪಾಂಡೆ, ಎಂ.ಎಲ್.ಸಿ ಎಸ್.ಎಲ್ ಘೋಕ್ಲೃಕರ, ಕಚೇರಿಯ ಎಲ್ಲ ಸಿಬ್ಭಂದಿ ವರ್ಗ ಹಾಗೂ ಇತರ ಅನೇಕರು ಶೋಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು