ಸಮ್ಮಿಶ್ರ ಸರಕಾರ ಸ್ಥಿರ: ಪರಮೇಶ್ವರ್‌


Team Udayavani, Sep 23, 2018, 6:00 AM IST

g-parameshwara-2222.jpg

ಕಾರವಾರ: ಪ್ರಸಿದ್ಧ ಶಕ್ತಿದೇವತೆ ಸಾತೇರಿ ದೇವಿ ದರ್ಶನಕ್ಕೆ ಬಂದಿದ್ದೇನೆ. ಸರ್ಕಾರ ಉಳಿಸಿ ಎಂದು ಪ್ರಾರ್ಥಿಸಲು ಅಲ್ಲ. ಸರ್ಕಾರ ಸ್ಥಿರವಾಗಿದೆ. ಇದು ನನ್ನ ಖಾಸಗಿ ಭೇಟಿ ಎಂದು ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್‌ ಹೇಳಿದರು.

ಕಾರವಾರ ತಾಲೂಕಿನ ಹಣಕೋಣ ಸಮೀಪದ ಸಾತೇರಿ ದೇವಿ ದರ್ಶನಕ್ಕೆ ತೆರಳುವ ಮುನ್ನ ಕಾರವಾರ-ಗೋವಾ ಗಡಿಯಲ್ಲಿ ಮಾಜಾಳಿ ಚೆಕ್‌ಪೋಸ್ಟ್‌ ಬಳಿ ಸುದ್ದಿಗಾರರ ಜತೆ ಮಾತನಾಡಿ, ಸಾತೇರಿ ದೇವಿ ಶಕ್ತಿ ದೇವತೆ ಎಂದು ನಮ್ಮ ಪಕ್ಷದವರು ಹೇಳುತ್ತಿದ್ದರು. ಅದಕ್ಕಾಗಿ ಆಶೀರ್ವಾದ ಪಡೆಯಲು ಬಂದಿರುವೆ. ಮುಖ್ಯಮಂತ್ರಿ ಕುಮಾರಸ್ವಾಮಿ ಶೃಂಗೇರಿ ಹೋದದ್ದಕ್ಕೂ, ನಾನು ಇಲ್ಲಿ ಬಂದದ್ದಕ್ಕೂ ಸಂಬಂಧವಿಲ್ಲ. ಸರ್ಕಾರದ ಸ್ಥಿರತೆಗೆ ಹರಕೆ ಮಾಡಿಕೊಳ್ಳಲು ಬಂದಿಲ್ಲ. ಸಾತೇರಿಯಲ್ಲಿ ಪ್ರಾರ್ಥಿಸಲು ಬಂದಿರುವೆ ಎಂದರು.

ನಮ್ಮ ಪಕ್ಷದ ಶಾಸಕರು, ಜೆಡಿಎಸ್‌ ಶಾಸಕರು ಸ್ಥಿರವಾಗಿದ್ದಾರೆ. ಅವರು ಮುಂಬೈಗೆ ಹೋಗಿದ್ದರೆ ಅದು ಸ್ವಂತ ಕೆಲಸದ ಮೇಲೆ. ಎಲ್ಲದಕ್ಕೂ ಕತೆ ಕಟ್ಟುವುದು ಸರಿಯಲ್ಲ. ಸರ್ಕಾರವನ್ನು ಯಡಿಯೂರಪ್ಪ ಅಸ್ಥಿರಗೊಳಿಸಲು ಯತ್ನಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ, ಅದರಲ್ಲಿ ಅವರು ಯಶಸ್ಸು ಪಡೆಯುವುದಿಲ್ಲ. ಶಾಸಕರಿಗೆ ಆಮಿಷ ಒಡ್ಡುವ ಮಟ್ಟಕ್ಕೆ ಬಿಜೆಪಿ ಇಳಿದಿದೆ ಎಂದು ಆರೋಪಿಸಿದರು.ನಿರಂತರವಾಗಿ ಬಿಜೆಪಿ ನಮ್ಮ ಸರ್ಕಾರಕ್ಕೆ ಕಿರುಕುಳ ಕೊಡುತ್ತಿದೆ. 

ಕುಮಾರಸ್ವಾಮಿಯನ್ನು ಅಸ್ಥಿರ ಮಾಡಲು ಯತ್ನಿಸುತ್ತಿದೆ. ಆ ಸಿಟ್ಟಿನಲ್ಲಿ ಜನ ದಂಗೆ ಏಳುತ್ತಾರೆ ಎಂದಿದ್ದಾರೆ. ಎಲ್ಲವನ್ನೂ ಅಕ್ಷರಶಃ ಅರ್ಥೈಸಬಾರದು. ಭಾವೋದ್ವೇಗದಲ್ಲಿ ಹೇಳಿದ ಮಾತಿಗೆ ಏನೇನೋ ಕಲ್ಪಿಸಿಕೊಳ್ಳುವುದು ಸರಿಯಲ್ಲ. ದೇಶಪಾಂಡೆ ಹಿರಿಯರು, ಸಚಿವರಾಗಿದ್ದಾರೆ. ಹಾಗೆಯೇ ಶಿವರಾಮ ಹೆಬ್ಟಾರ ಸರದಿ ಬರಲಿದೆ. ಅವರು ಕಾಯಬೇಕು. ಕಾಂಗ್ರೆಸ್‌ನಲ್ಲಿ ಮಾತ್ರ ಎಲ್ಲರಿಗೂ ಅವಕಾಶ ಸಿಗಲು ಸಾಧ್ಯ. ಎಲ್ಲರಿಗೂ ಸಮಾನ ಅವಕಾಶ ಕಾಂಗ್ರೆಸ್‌ ಪಕ್ಷದಲ್ಲಿದೆ ಎಂದರು.

ಮೂಗುತಿ ಪಡೆದ ಪರಮೇಶ್ವರ
ಹಣಕೋಣದ ಸಾತೇರಿ ದೇವಿ ಜಾತ್ರೆಯಲ್ಲಿ ಪಾಲ್ಗೊಂಡ ಅವರು ದೇವರಿಗೆ ಬಂದ ಕಾಣಿಕೆಗಳ ಹರಕೆಯ ಸಂಪ್ರದಾಯದಲ್ಲಿ ಭಾಗಿಯಾದರು. ವರ್ಷದಲ್ಲಿ ಏಳು ದಿನ ಮಾತ್ರ ಬಾಗಿಲು ತೆರೆಯುವ ಸಂಪ್ರದಾಯದ ಸಾತೇರಿ ದೇವಿಯ ಜಾತ್ರೆಯಲ್ಲಿ ದೇವಿಗೆ ಹರಕೆ ರೂಪದಲ್ಲಿ ಬಂದ ಬಂಗಾರದ ಆಭರಣ ಮತ್ತು ಸೀರೆಯನ್ನು ಭಕ್ತರಿಗೆ ಹರಾಜು ಹಾಕುವ ಪದ್ಧತಿ ಇದೆ. ಹರಾಜು ಕ್ರಿಯೆಯನ್ನು ಗಮನಿಸಿದ ಉಪ ಮುಖ್ಯಮಂತ್ರಿಗಳು ತಾವೂ ದೇವಿಗೆ ಹರಕೆ ರೂಪದಲ್ಲಿ ಬಂದಿದ್ದ ಮೂಗುತಿ ಖರೀದಿಸಿದರು. 15,101 ರೂ.ಗಳಿಗೆ ಮೂಗುತಿ ಪರಮೇಶ್ವರ ಕೈಗೆ ಬಂತು. ಅದನ್ನು ಅವರು ಭಕ್ತಿಯಿಂದ ಸ್ವೀಕರಿಸಿದರು.

ಸಾತೇರಿ ದೇವಿಗೆ ಇದೇ ವೇಳೆ ಅವರು ಹರಕೆ ಹೊತ್ತಿದ್ದು, ಆ ಗುಟ್ಟನ್ನು ಮಾತ್ರ ಬಿಟ್ಟು ಕೊಟ್ಟಿಲ್ಲ. ಸರ್ಕಾರದ ರಕ್ಷಣೆಯ ಬೇಡಿಕೆಯನ್ನು ಸಾತೇರಿ ದೇವಿಯಲ್ಲಿ ಕೋರಲಾಗಿದೆ. ದೇವಿಯಲ್ಲಿ ಹೊತ್ತ ಹರಕೆ ಇದುವರೆಗೆ ಸುಳ್ಳಾಗಿಲ್ಲ ಎಂಬ ಬಲವಾದ ನಂಬಿಕೆ ಇಲ್ಲಿನ ಜನರಲ್ಲಿದೆ. ಸರ್ಕಾರದ ರಕ್ಷಣೆಗಾಗಿಯೇ ಡಿಸಿಎಂ ಅವರನ್ನು ಸಾತೇರಿ ದೇವಿಯ ದರ್ಶನಕ್ಕೆ ಕರೆಸಿದ್ದೆವು ಎಂದು ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಹೇಳಿಕೊಂಡರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.