ಮಂಕು ಕವಿದ ಮಣಕಿ ಕ್ರೀಡಾ ಮೈದಾನ!


Team Udayavani, Jul 2, 2019, 9:43 AM IST

uk-tdy-1..

ಕುಮಟಾ: ಮೈದಾನದುದ್ದಕ್ಕೂ ಮದ್ಯದ ಬಾಟಲಿಗಳ ಕಾರುಬಾರು. ಕತ್ತಲಾಯಿತೆಂದರೆ ವ್ಯಸನಿಗರ ಅಡ್ಡಾವಾಗುತ್ತಿದ್ದರೂ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ. ಹಲವು ಕಾರ್ಯಕ್ರಮಗಳಿಗೆ ಸಾಕ್ಷಿಯಾದ ಪಟ್ಟಣದ ಐತಿಹಾಸಿಕ ಮಣಕಿ ಮೈದಾನ ಈಗ ಮಂಕು ಕವಿದಂತಾಗಿದೆ.

ಪಟ್ಟಣದ ಮಹಾತ್ಮಗಾಂಧಿ ಮೈದಾನ (ಮಣಕಿ ಗ್ರೌಂಡ್‌) ಅಭಿವೃದ್ಧಿ ಕಾಣದೆ, ಅಕ್ರಮ ಚಟುವಟಿಕೆಗಳ ತಾಣವಾಗಿದೆ. ಪಟ್ಟಣದ ಹೃದಯಭಾಗದಲ್ಲಿರುವ ಮಣಕಿ ಮೈದಾನ ಸುಮಾರು 11 ಎಕರೆಗಳಷ್ಟಿರುವ ಜಿಲ್ಲೆಯಲ್ಲಿಯೇ ವಿಶಾಲವಾದ ಮೈದಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಈ ಮೈದಾನದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಮಹಾತ್ಮ ಗಾಂಧಿ, ಇಂದಿರಾ ಗಾಂಧಿ ಸೇರಿದಂತೆ ಹಲವು ಗಣ್ಯರ ಕಾರ್ಯಕ್ರಮಗಳಿಗೆ ಈ ಮೈದಾನ ಸಾಕ್ಷಿಯಾಗಿದೆ.

ಕುಮಟಾ ಉತ್ಸವ, ಹಬ್ಬ, ಯಕ್ಷಗಾನ, ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಹಲವು ಕ್ರೀಡಾ ಚಟುವಟಿಕೆಗಳು ನಡೆಯುತ್ತವೆ. ಅಲ್ಲದೇ ವಿವಿಧ ರಾಜಕೀಯ ಪಕ್ಷಗಳ ರಾಜ್ಯ ಮತ್ತು ರಾಷ್ಟ್ರ ಮುಖಂಡರುಗಳಿಗೂ ಈ ಮೈದಾನದ ಪರಿಚಯವಿದೆ. ಇಂಥ ಐತಿಹಾಸಿಕ ಹಿನ್ನೆಲೆಯಿರುವ ಮೈದಾನವು ಮೂಲ ಸೌಕರ್ಯಗಳಿಲ್ಲದೆ ಬಣಗುಡುತ್ತಿದೆ.

ಅಲ್ಲದೆ ತಾಲೂಕು ಆಡಳಿತ ಈ ಮೈದಾನದಲ್ಲಿ ಎಲ್ಲ ರಾಷ್ಟ್ರೀಯ ದಿನಾಚಣೆ ಮತ್ತು ಹಬ್ಬಗಳನ್ನು ಆಚರಿಸುತ್ತದೆಯೇ ಹೊರತು ಅಭಿವೃದ್ಧಿ ಕಡೆಗೆ ಗಮನ ಹರಿಸಿಲ್ಲ. ಹಾಗಾಗಿ ಇತ್ತೀಚಿನ ವರ್ಷಗಳಲ್ಲಿ ಈ ಮೈದಾನ ಅಕ್ರಮ ಚಟುವಟಿಕೆಗಳ ತಾಣವಾಗಿದೆ. ರಾತ್ರಿಯಾಯಿತೆಂದರೆ ಮದ್ಯ ವ್ಯಸನಿಗರ ಅಡ್ಡಾವಾಗುತ್ತಿದೆ. ಎಲ್ಲಿ ನೋಡಿದರೂ ಮದ್ಯದ ಬಾಟಿಲಿಗಳು ಹಾಗೂ ಬಾಟಲಿಯ ಚೂರುಗಳು ಕಾಣ ಸಿಗುತ್ತದೆ. ಇದರಿಂದ ಪ್ರತಿನಿತ್ಯ ಆಡಲು ಬರುವವರಿಗೆ ಹಾಗೂ ವಾಯವಿಹಾರಕ್ಕೆಂದು ಬರುವ ಜನರಿಗೆ ತೊಂದರೆಯಾಗುತ್ತಿದೆ. ಇಂಥ ಸುಂದರ ಮತ್ತು ವಿಶಾಲ ಮೈದಾನ ಅಭಿವೃದ್ಧಿ ಹೊಂದದಿರುವುದಕ್ಕೆ ಅನೇಕ ಕ್ರೀಡಾ ಪ್ರೇಮಿಗಳು, ಪ್ರಜ್ಞಾವಂತ ನಾಗರಿಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಸಂಜೆ ಸಮಯದಲ್ಲಿ ವಾಯುವಿಹಾರಕ್ಕೆಂದು ಪ್ರತಿದಿನ ಬರುತ್ತಿದ್ದೆವು. ಆದರೆ ಈಗಿನ ಮೈದಾನದ ಸ್ಥಿತಿ ಗಮನಿಸಿದರೆ ಮಹಿಳೆಯರು ಹಾಗೂ ಮಕ್ಕಳು ಇತ್ತ ಬರದಂತಹ ಭಯದ ವಾತಾವರಣ ನಿರ್ಮಾಣವಾಗಿದೆ. ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಶೀಘ್ರ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಿ.• ಶ್ರೀಲತಾ ಭಟ್,ಸ್ಥಳೀಯರು

ಮೈದಾನದ ಸುತ್ತಲೂ ರಾತ್ರಿಯ ಸಂದರ್ಭದಲ್ಲಿ ಕನಿಷ್ಠ ಎರಡು ಬಾರಿ ಪಹರೆಯನ್ನ ನಡೆಸುತ್ತೇವೆ. ಇಂತಹ ದುಷ್ಟ ಕೃತ್ಯ ಎಸಗುವವರು ಕಂಡು ಬಂದರೆ ಕಾನೂನಾತ್ಮಕವಾಗಿ ಕಠಿಣಕ್ರಮ ಕೈಗೊಳ್ಳತ್ತೇವೆ.• ಕುಮಟಾ ಪೊಲೀಸ್‌ ಇಲಾಖೆ

 

•ಕೆ. ದಿನೇಶ ಗಾಂವ್ಕರ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.