ಕೌರವ ಖ್ಯಾತಿಯ ಗೋಡೆಯವರ ಸಾಕ್ಷ್ಯಚಿತ್ರ ನಿರ್ಮಾಣ


Team Udayavani, Oct 18, 2019, 1:30 PM IST

uk-tdy-2

ಶಿರಸಿ: ಆರುವರೆ ದಶಕಗಳ ಕಾಲ ಯಕ್ಷಗಾನ ರಂಗಭೂಮಿಯಲ್ಲಿ ಅನೇಕ ಪೌರಾಣಿಕ ಪಾತ್ರಗಳನ್ನು ಕಟ್ಟಿಕೊಟ್ಟ, ಕೌರವ ಪಾತ್ರದ ಮೂಲಕ ಮನೆಮಾತಾದ ಸರಳ ಸಜ್ಜನಿಕೆಯ ಕಲಾವಿದ ಗೋಡೆ ನಾರಾಯಣ ಹೆಗಡೆ ಅವರ ರಂಗಭೂಮಿ ಬದುಕಿನ ಕುರಿತ ಸಾಕ್ಷ್ಯ ಚಿತ್ರವೊಂದು ನಿರ್ಮಾಣವಾಗುತ್ತಿದೆ. ಅವರ ಕಲಾ ಬದುಕಿನ ಅನಾವರಣ ದಾಖಲಿಸುವ ಕಾರ್ಯವನ್ನು ಯಕ್ಷಗಾನ ಅಕಾಡೆಮಿ ಮಾಡಿಸುತ್ತಿದೆ.

ಯಕ್ಷಗಾನ ಕಲೆಯನ್ನೇ ತಮ್ಮ ಜೀವನದ ಉಸಿರಾಗಿಸಿಕೊಂಡ, ಅನೇಕ ಪಾತ್ರಗಳ ಸೃಷ್ಟಿಯೊಂದಿಗೆ ಯಕ್ಷಗಾನಕ್ಕೆ ಮಹೋನ್ನತ ಕೊಡುಗೆ ನೀಡಿದ ಪ್ರಸಿದ್ಧ ಕಲಾವಿದ ಗೋಡೆ ನಾರಾಯಣ ಹೆಗಡೆಯವರು. ಸಾವಿರಕ್ಕೂ ಅಧಿಕ ಕೌರವ ಪಾತ್ರದಲ್ಲಿ ಮಿಂಚಿದ, ಅದನ್ನು ಅಷ್ಟೇ ಮನೋಜ್ಞವಾಗಿ ಕಟ್ಟಿಕೊಟ್ಟ ಗೋಡೆ ನಾರಾಯಣ ಹೆಗಡೆಯವರ ಬದುಕು ಮತ್ತು ಕಲಾಸಾಧನೆ

ಕುರಿತು ಸಾಕ್ಷ್ಯಚಿತ್ರ ಇದಾಗಲಿದೆ. ಈ ಕುರಿತಾದ ಚಿತ್ರೀಕರಣ ಕೂಡ ಪೂರ್ಣಗೊಂಡಿದೆ. ಅಕಾಡೆಮಿ ಅಧ್ಯಕ್ಷ ಪ್ರೊ| ಎಂ.ಎ. ಹೆಗಡೆ ದಂಟ್ಕಲರ ಮಹತ್ವದ ಯೋಚನೆಯ ಪ್ರತಿಫಲ ಇದಾಗಿದೆ. ಈಗಾಗಲೇ ನೆಬ್ಬೂರು ನಾರಾಯಣ ಭಾಗವತರ ಕುರಿತಾದ ಸಾಕ್ಷ್ಯಚಿತ್ರ ಬಿಡುಗಡೆ ಹಂತದಲ್ಲಿದ್ದು, ಗೋಡೆ ಅವರ ಕುರಿತ ಸಾಕ್ಷ್ಯಚಿತ್ರ ಈ ವರ್ಷದ ಕೊನೆಯೊಳಗೆ ಅಭಿಮಾನಿಗಳ ಕೈ ಸೇರಲಿದೆ.

ಈ ಸಾಕ್ಷಚಿತ್ರವನ್ನು ಶ್ರೀಧರ ಹೆಗಡೆ ಬೆಂಗಳೂರು ಮತ್ತು ಪ್ರಸಿದ್ಧ ಚಿತ್ರನಟ ರಮೇಶ್‌ ಪಂಡಿತ್‌ ನಿರ್ದೇಶಿಸಿದ್ದಾರೆ. ಸಂಶೋಧಕ ಲಕ್ಷಿಶ್‌ ಸೋಂದಾ ಅವರ ಸಂಯೋಜನೆಯಲ್ಲಿ ಈಗಾಗಲೇ ಮಲೆನಾಡಿನ ಸುಂದರ ಪರಿಸರದಲ್ಲಿ ಚಿತ್ರೀಕರಣ ಮುಗಿದಿದೆ. ಈ ಸಾಕ್ಷ್ಯಚಿತ್ರದ ವಿಶೇಷತೆ ಎಂದರೆ ಗೋಡೆಯವರ ಬಾಲ್ಯದ ಬದುಕು, ಅವರಿಗೆ ಯಕ್ಷಗಾನದೆಡೆಗೆ ಆಸಕ್ತಿ ಬರಲು ಕಾರಣವಾದ ಘಟನೆ, ನಂತರದಲ್ಲಿ ಕೊಳಗಿ ಸೀತಾರಾಮ ಭಾಗವತರಲ್ಲಿ ಅವರಿಗೆ ಕಲಿಯಲು ದೊರಕಿದ ಅವಕಾಶ ಎಲ್ಲ ಘಟನೆಗಳನ್ನ ಮರುಸೃಷ್ಟಿ ಮಾಡಲಾಗಿದೆ. ಹಾಗಲ್ಲದೆ ಅವರ ಪ್ರಸಿದ್ಧ ಮತ್ತು ಸ್ಥಾಪಿತ ಪಾತ್ರಗಳ ವಿಶ್ಲೇಷಣೆ ಕೂಡ ಇದೆ. ಗೋಡೆಯವರ ಕುರಿತು ಪತ್ರಕರ್ತ ಎಂ.ಕೆ. ಭಾಸ್ಕರ್‌ರಾವ್‌, ಕಲಾವಿದರಾದ ಸುಬ್ರಹ್ಮಣ್ಯ ಧಾರೇಶ್ವರ, ಎಂ.ಎಲ್‌. ಸಾಮಗ, ಶ್ರೀಧರ ಹೆಗಡೆ ಚಪ್ಪರಮನೆ, ನಿರ್ಮಲಾ ಹೆಗಡೆ ಮುಂತಾದವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಸಾಕ್ಷ್ಯಚಿತ್ರ ಗೋಡೆಯವರ ಇದುವರೆಗಿನ ಕಲಾ ಬದುಕಿನ ಕನ್ನಡಿಯಾಗಿ ಕೈ ಸೇರಲಿದೆ.

ಯಕ್ಷರಂಗದ ಕೌರವ ಎಂದೇ ಜನಜನಿತರಾದ ಗೋಡೆ ಅವರಿಗೆ ಅಕಾಡೆಮಿ ಸಾಕ್ಷ್ಯಚಿತ್ರದ ಮೂಲಕ ಗೌರವಿಸುತ್ತಿರುವದು ವಿಶೇಷವಾಗಿದೆ.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.