ಅಧಿಕಾರಿಗಳು ಸ್ಪಂದಿಸದಿದ್ದರೆ ಹೋರಾಟ ಎಚ್ಚರಿಕೆ


Team Udayavani, May 16, 2019, 4:28 PM IST

nc-3

ಅಂಕೋಲಾ: ಪುರಸಭೆ ವ್ಯಾಪ್ತಿಯಲ್ಲಿ ತೀವ್ರಗೊಂಡಿರುವ ನೀರಿನ ಸಮಸ್ಯೆಯನ್ನು ಮೇ 20ರೊಳಗೆ ಸಮರ್ಪಕವಾಗಿ ನಿಭಾಯಿಸಿ ಜನರ ನೀರಿನ ಬವಣೆ ನೀಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನದಲ್ಲಿ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಅಂಕೋಲಾ ಘಟಕ ಮತ್ತು ಪುರಸಭಾ ಸದಸ್ಯರು ಪುರಸಭೆ ಮುಖ್ಯಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪುರಸಭಾ ಮಾಜಿ ಅಧ್ಯಕ್ಷ ಅರುಣ ನಾಡಕರ್ಣಿ, ಪುರಸಭೆ ವ್ಯಾಪ್ತಿಯಲ್ಲಿ 90 ಸರಕಾರಿ ಬಾವಿಗಳಿದ್ದು, ಸುಮಾರು 80ರಷ್ಟು ಬಾವಿಗಳಲ್ಲಿ ನೀರು ಸಿಗುತ್ತದೆ. ಅದರಲ್ಲಿನ ಕೆಲವು ಬಾವಿಗಳ ಹೂಳೆತ್ತಿದರೆ ಇನ್ನಷ್ಟು ನೀರು ದೊರಕಬಹುದು. ಅನೇಕ ಬಾವಿಗಳಿಗೆ ಪಂಪ್‌ಸೆಟ್ ಅಳವಡಿಸಿ ನೀರನ್ನು ತೆಗೆಯಲಾಗುತ್ತಿದ್ದು, ಅಂತಹ ಕಡೆ ಸಾರ್ವಜನಿಕರಿಗೆ ನೀರು ಪಡೆಯಲು ಬೆದರಿಕೆಗಳು ಬರುತ್ತಿವೆ. ಇದರ ಕುರಿತು ತನಿಖೆ ನಡೆಸಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು.

ತಾಲೂಕಿನ ಜಲ ಮೂಲವಾದ ಗಂಗಾವಳಿ ನದಿ ನೀರು ಇಂದು ಸಂಪೂರ್ಣವಾಗಿ ಬತ್ತುತ್ತಿದೆ. ಗಂಗಾವಳಿ ನದಿ ನೀರಿನ ಜರಿಮೂಲ ಅರಬೈಲ್ ಮತ್ತು ಗುಳ್ಳಾಪುರ ಭಾಗದಲ್ಲಿ 20ರಿಂದ 50 ಎಚ್ಪಿಗೂ ಅಧಿಕ ಪಂಪ್‌ಸೆಟ್ ಅಳವಡಿಸಿ ನೀರನ್ನು ತೆಗೆಯುತ್ತಿದ್ದಾರೆ. ಮೊದಲು ಪಂಪ್‌ಸೆಟ್ ಅಳವಡಿಸಿದನ್ನು ತೆಗೆದು ಬತ್ತುತ್ತಿರುವ ನೀರನ್ನು ಉಳಿಸಿಕೊಂಡರೆ ಮುಂದಿನ ದಿನದಲ್ಲಿ ತಾಲೂಕಿನ ಜನರಿಗೆ ನೀರಿನ ಅಭಾವವನ್ನು ಕಡಿಮೆ ಮಾಡಬಹುದು. ಜಿಲ್ಲಾಧಿಕಾರಿಗಳು ಪಂಪ್‌ಸೆಟ್ ಅಳವಡಿಸಿ ನೀರನ್ನು ತೆಗೆಯುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.

ಪುರಸಭೆ ಮಾಜಿ ಅಧ್ಯಕ್ಷ ರಾಜೇಂದ್ರ ನಾಯ್ಕ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ ಹಿಂದೆಂದು ಕಂಡರಿಯದ ನೀರಿನ ಸಮಸ್ಯೆ ಇಂದು ಬಂದೊದಗಿದೆ. ಈ ಸಮಸ್ಯೆಗೆ ವಾರ್ಡ್‌ವಾರು ನೀರು ಸರಬರಾಜು ಮಾಡಲಾಗುತ್ತಿದೆ. ಟ್ಯಾಂಕರ್‌ ಮತ್ತು ಸಿಂಟ್ಯಾಕ್ಸ್‌ ಮೂಲಕ ಸರಬರಾಜು ಮಾಡುವ ನೀರು ಟ್ಯಾಂಕರ್‌ ಭರ್ತಿ ಮಾಡದೆ ಅರ್ಧ ಟ್ಯಾಂಕ್‌ ತುಂಬಿಕೊಂಡು ಹೋಗುತ್ತಿದ್ದಾರೆ ಎನ್ನುವ ಮಾತಗಳು ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ. ಒಬ್ಬ ಸಿಬ್ಬಂದಿಯನ್ನು ನೇಮಿಸಿ ಪರಿಶೀಲಿಸಿ ನೀರನ್ನು ಸಾರ್ವಜನಿಕರಿಗೆ ನೀಡಬೇಕು ಎಂದು ಹೇಳಿದರು.

ಪುರಸಭೆ ಮಾಜಿ ಅಧ್ಯಕ್ಷ ಬಾಸ್ಕರ ನಾರ್ವೇಕರ ಮಾತನಾಡಿ, ಏಪ್ರಿಲ್-ಮೇ ತಿಂಗಳಲ್ಲಿ ಮದುವೆ, ಮುಂಜಿ ಹಾಗೂ ಧಾರ್ಮಿಕ ಕಾರ್ಯಕ್ರಮ, ಬಂಡಿಹಬ್ಬಗಳಿಗೆ ಅನೇಕ ಸಂಖ್ಯೆಯಲ್ಲಿ ಬಂಧುಮಿತ್ರರು ತಾಲೂಕಿಗೆ ಆಗಮಿಸುವುದರಿಂದ ನೀರಿನ ಬೇಡಿಕೆ ಹೆಚ್ಚಾಗುತ್ತದೆ. ಇದನ್ನು ಅರ್ಥೈಸಿಕೊಂಡು ಸೂಕ್ತ ಕ್ರಮಕೈಗೊಳ್ಳಿ ಎಂದರು.

ಜಯಾ ನಾಯ್ಕ, ಶಾಂತಲಾ ನಾಡಕರ್ಣಿ, ಹೇಮಾ ಆಗೇರ, ನಾಗರಾಜ ಐಗಳ, ಸೂರಜ ನಾಯ್ಕ, ರೇಖಾ ಗಾಂವಕರ, ತಾರಾ ನಾಯ್ಕ, ತಾರಾ ಗಾಂವಕರ, ಮೊಹ್ಮದ್‌ ಇಕ್ಬಾಲ್, ರಾಮಾ ನಾಯಕ, ರಾಮಚಂದ್ರ ಹೆಗಡೆ, ಸಂಜಯ ನಾಯ್ಕ ಮುಂತಾದವರು ಇದ್ದರು.

ಪುರಸಭೆ ವ್ಯಾಪ್ತಿಯ ಸರಕಾರಿ ಬಾವಿಗಳಿಗೆ ವೈಯಕ್ತಿಕ ಪಂಪ್‌ಸೆಟ್‌ಗಳನ್ನು ಅಕ್ರಮವಾಗಿ ಅಳವಡಿಸಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ 24ಕ್ಕೂ ಅಧಿಕ ಪಂಪ್‌ಸೆಟ್ ತೆಗೆದು ಹಾಕಲಾಗಿದೆ. ಕೆಲವರು ಮತ್ತೆ ಅಳವಡಿಸಿದ್ದಾರೆ ಎಂದು ಮಾಹಿತಿಗಳು ಬರುತ್ತಿವೆ. ಹಾಗೆನಾದರು ಮುಂದುವರೆದಲ್ಲಿ ಅಂತವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು.
•ಬಿ. ಪ್ರಹ್ಲಾದ, ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirur landslide; Green signal for National highway traffic in three or four days?

Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

1-ccc-aa

Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್‌ ಬೇಸರ

1–eewr-aa-aa

Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು

1–eewr-aa

Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್‌ ನಂಬಿಯಾರ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.