ಏಳು ದಿನಗಳ ಪೂಜೆ ಬಳಿಕ ಬೌದ್ಧ ಸನ್ಯಾಸಿ ಲೊಬ್‌ಸಂಗ್ ಪುಂಟ್ಸೊಕ್ ಅಂತ್ಯಕ್ರಿಯೆ


Team Udayavani, Sep 19, 2021, 8:16 PM IST

vbhfghfyt

ವರದಿ: ಮುನೇಶ ತಳವಾರ

ಮುಂಡಗೋಡ: ಇಲ್ಲಿಯ ಟಿಬೆಟಿಯನ್ ಕಾಲನಿಯ ಲೋಸಲಿಂಗ್ ಮೊನಾಸ್ಟಿಯ ಹಿರಿಯ ಬೌದ್ಧ ಸನ್ಯಾಸಿ ಲೊಬ್‌ಸಂಗ್ ಪುಂಟ್ಸೊಕ್(೧೦೩) ಅವರ ಮೃತದೇಹಕ್ಕೆ ಕಳೆದ ಒಂದು ವಾರದಿಂದ ಪೂಜೆ ಸಲ್ಲಿಸಿ ಶುಕ್ರವಾರ (ಸೆ.17) ಅಂತ್ಯ ಸಂಸ್ಕಾರ ನಡೆಸಲಾಗಿದೆ.

ಇಲ್ಲಿ ಹಿರಿಯ ಬೌದ್ಧ ಸನ್ಯಾಸಿಗಳ ಮೃತದೇಹಗಳನ್ನು ಒಂದು ವಾರ ಅಥವಾ 15-20 ದಿನಗಳವರೆಗೂ ಇಟ್ಟು ಪೂಜಿಸಿ ನಂತರ ಅಂತ್ಯಕ್ರಿಯೆ ಮಾಡುವ ಸಂಪ್ರದಾಯ ಇದೆ. ಕಳೆದ ಒಂದು ವಾರದ ಹಿಂದೆ ಸನ್ಯಾಸಿ ಲೊಬ್‌ಸಂಗ್ ತಮ್ಮ ಮನೆಯಲ್ಲಿ ಧ್ಯಾನ ಮಾಡುತ್ತಲೇ ಪ್ರಾಣ ಬಿಟ್ಟಿದ್ದರು.ಇವರ ಶರೀರಕ್ಕೆ ಬೌದ್ಧ ಸನ್ಯಾಸಿಗಳು 7 ದಿನಗಳ ಕಾಲ ಪೂಜೆ ಮಾಡಿ ನಂತರ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಏನಿದು ಸಂಪ್ರದಾಯ ?

ಹಿರಿಯ ಬೌದ್ಧ ಸನ್ಯಾಸಿಗಳು ಮರಣ ಹೊಂದಿದ ಬಳಿಕ ಆತ್ಮ ಅವರ ದೇಹವನ್ನು ಬಿಟ್ಟು ಹೋಗಿರುವುದಿಲ್ಲ. ಅವರು ಪುನರ್ಜನ್ಮ ತಾಳುತ್ತಾರೆ ಎನ್ನುವ ನಂಬಿಕೆ ಈ ಜನರಲ್ಲಿದೆ. ಟಿಬೆಟಿಯನ್ ಜನಾಂಗದಲ್ಲಿ ಯಾರು ಉನ್ನತ ಮಟ್ಟದ ಧಾರ್ಮಿಕ ಶಿಕ್ಷಣ ಪಡೆದಿರುತ್ತಾರೋ ಅಂಥವರ ಮರಣದ ನಂತರ ಅವರೊಳಗೆ ಮತ್ತೊಂದು ಆತ್ಮ ಬಂದು ಸೇರಿಕೊಂಡು 5, 10, 15, 20 ಹೀಗೆ ಕೆಲ ದಿನಗಳ ಕಾಲ ಇರುತ್ತದೆ. ಅದು ಮೃತ ದೇಹವನ್ನು ಬಿಟ್ಟು ಹೋಗುವ ವೇಳೆ ಮೂಗಿನಲ್ಲಿ ರಕ್ತ ಸೋರುವಿಕೆ ಅಥವಾ ಮೃತಪಟ್ಟು ಕೆಲ ದಿನಗಳ ನಂತರ ತೆರೆದ ಕಣ್ಣುಗಳು ಮುಚ್ಚಿಕೊಳ್ಳುತ್ತವೆ. ನಂತರ ಅಂತಿಮ ಸಂಸ್ಕಾರ ಮಾಡಲಾಗುತ್ತದೆ.

ಲಾಕ್ಪಾ ಸಿರಿಂಗ್, ಟಿಬೆಟಿಯನ್ ಆಡಳಿತ ಕಚೇರಿ ಚೇರಮನ್ : ಹಿರಿಯ ಬೌದ್ಧ ಸನ್ಯಾಸಿ ಲೊಬ್‌ಸಂಗ್ 1967ರಲ್ಲಿ ಟಿಬೆಟ್ ಬಿಟ್ಟು ಭಾರತಕ್ಕೆ ಬಂದಿದ್ದರು. ಅವರಿಗೆ ಯಾವುದೇ ರೋಗವಿರಲಿಲ್ಲ. ಪೂಜೆ ಮಾಡುವುದು, ಕಿರಿಯ ಬೌದ್ಧ ಸನ್ಯಾಸಿಗಳಿಗೆ ಧರ್ಮ ಬೋಧನೆ ಮಾಡುವುದಷ್ಟೇ ಅವರ ಕಾಯಕವಾಗಿತ್ತು. ಕಳೆದ ಒಂದು ವಾರದ ಹಿಂದೆ ಅವರು ಮರಣಹೊಂದಿದರು. 7 ದಿವಸ ಅವರ ಮೃತದೇಹವನ್ನು ಯಾವುದೆ ಔಷಧೋಪಚಾರವಿಲ್ಲದೆ, ಮಂಜುಗಡ್ಡೆಯಲ್ಲಿ ಇರಿಸದೆ ನಂತರ ಶುಕ್ರವಾರ ಅಂತ್ಯಕ್ರಿಯೆ ನಡೆಸಲಾಯಿತು.

ಇನ್ನು ಕಳೆದ ನಾಲ್ಕೈದು ವರ್ಷದ ಹಿಂದೆಯೂ ಟಿಬೆಟಿಯನ್ ಕ್ಯಾಂಪಿನ ಗಾಂದೇನ್ ಮೊನಾಸ್ಟಿಯ ಹಿರಿಯ ಬೌದ್ಧ ಸನ್ಯಾಸಿಯೊಬ್ಬರು ಧ್ಯಾನ ಮಾಡುತ್ತಿದ್ದ ಸಂದರ್ಭದಲ್ಲಿ ಪ್ರಾಣ ತ್ಯಜಿಸಿದ್ದರು. ಅವರ ಮೃತದೇಹಕ್ಕೆ ಹದಿನೈದು ದಿನಗಳ ಕಾಲ ಪೂಜೆ ಸಲ್ಲಿಸಿ ನಂತರ ಅಂತ್ಯಕ್ರಿಯೆ ನಡೆಸಿದ್ದರು.

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.