ಸರ್ಕಾರಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯ : ಸಚಿವ ಶಿವರಾಮ ಹೆಬ್ಬಾರ


Team Udayavani, Sep 12, 2021, 8:15 PM IST

fgrdt5r

ಮುಂಡಗೋಡ: ಆರೋಗ್ಯ ಮತ್ತು ಶಿಕ್ಷಣ ಎರಡು ಪ್ರಮುಖ ಕ್ಷೇತ್ರಗಲಾಗಿದ್ದು, ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ ತರದೇ ಹೋದರೆ ಬಡವರಿಗೆ ತೊಂದರೆ ಆಗುತ್ತದೆ. ಎಲ್ಲವೂ ಸರ್ಕಾರದಿಂದಲೇ ಆಗಬೇಕು ಎಂದರೆ ಸಾಧ್ಯವಿಲ್ಲ ಸಂಘ-ಸಂಸ್ಥೆ ಮತ್ತು ಸಾರ್ವಜನಿಕರ ಸಹಕಾರವೂ ಅಗತ್ಯ  ಎಂದು ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ಅವರು ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಎರಡು ಡಯಾಲಿಸಿಸ್ ಯಂತ್ರಗಳ ಘಟಕವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿಯೇ ಬಡತನ, ನಿರಕ್ಷರತೆ ಅತಿ ಹೆಚ್ಚಾಗಿ ಇರುವ ತಾಲೂಕು ಇದು. ತಾಲೂಕಿನಲ್ಲಿ ಒಟ್ಟು ೧೪ ಜನರು ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಹುಬ್ಬಳ್ಳಿಗೆ ಹೋಗಲು ಅವರಿಗೆ ಹೆಚ್ಚು ವೆಚ್ಚ ತಗಲುತ್ತದೆ. ಡಯಾಲಿಸಿಸ್ ಮಷಿನ್ ಇಲ್ಲದೆ ಬಡವರು ಕಷ್ಟದಲ್ಲಿದ್ದರು ಈಗ ಅವರಿಗೆ ತುಂಬಾ ಅನುಕೂಲವಾಗಿದೆ. ಯಾವುದೇ ಕಾರಣಕ್ಕೂ ಆಸ್ಪತ್ರೆಗೆ ಬಂದ ಬಡವರಿಗೆ ತೊಂದರೆಯಾಗದಂತೆ ಮಾನವೀಯತೆಯಿಂದ ಕಾಣಬೇಕು ಎಂದು ವೈದ್ಯಾಧಿಕಾರಿಗಳಿಗೆ ಕಿವಿಮಾತು ಹೇಳಿದ ಅವರು ಯಲ್ಲಾಪುರದಲ್ಲಿ ಏನು ಸುಧಾರಣೆ ಮಾಡುತ್ತೇನೋ ಮುಂಡಗೋದಲ್ಲಿಯೂ ಅದನ್ನೇ ಮಾಡುತ್ತೇನೆ. ಚುನಾವಣೆವರೆಗೆ ಮಾತ್ರ ರಾಜಕಾರಣ ಮಾಡುತ್ತೇನೆ. ನಂತರ ಮಾಡುವುದಿಲ್ಲ ಎಂದರು.

ಜಿಲ್ಲೆಯ  ಸರ್ವಾಂಗೀಣ  ಅಭಿವೃದ್ಧಿ ನನ್ನ ಉದ್ದೇಶವಾಗಿದೆ. ಸುದೀರ್ಘ ಕಾಲದ ನಂತರ ಅಂಕೋಲಾ-ಹುಬ್ಬಳ್ಳಿ ರೈಲು ಯೋಜನೆಗೆ ಚಾಲನೆ ದೊರೆತಿದ್ದು, ವಾಜಪೇಯಿ ಸರ್ಕಾರದಲ್ಲಿ  290 ಕೋಟಿ ರೂ.ವೆಚ್ಚದಲ್ಲಿ ಯೋಜನೆ ಆಗಬೇಕಿತ್ತು.ಆದರೆ ಕೆಲ ನಕಲಿ ಪರಿಸರವಾದಿಗಳ ವಿರೋಧದಿಂದಾಗಿ ವಿಳಂಬವಾಗಿದೆ. ಈಗ ಈ 1300 ಕೋಟಿ ವೆಚ್ಚವಾಗುತ್ತಿದೆ.

ಜಿಲ್ಲೆಯ ಜನರು ಪರಿಸರ ವಾದಿಗಳು ಪರಿಸರದೊಂದಿಗೆ ನಮ್ಮ ಬದುಕು ಕೂಡ ಅಷ್ಟೇ ಮುಖ್ಯ. ಅಭಿವೃದ್ಧಿ ಕೆಲಸಗಳಿಗೆ ಪರಿಸರವಾದಿಗಳು ಕೈಜೋಡಿಸಬೇಕು ಎಂದರು.

ಕೆ.ವಿ.ಜಿ.ಬಿ. ಚೇರ್‌ಮನ್ ಪಿ.ಗೋಪಿಕೃಷ್ಣ ಮಾತನಾಡಿ, ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ವಿಶೇಷವಾಗಿ ಗ್ರಾಮೀಣ ಭಾಗದ ಬಡ ರೋಗಿಗಳಿಗೆ ವರವಾದ ಡಯಾಲಿಸಿಸ್ ಯಂತ್ರಗಳನ್ನು ಆಸ್ಪತ್ರೆಗೆ ಅಳವಡಿಸಲಾಗಿದೆ. ಇದರಿಂದ ದುಬಾರಿ ವೆಚ್ಚ ಮತ್ತು ದೂರದ ಆಸ್ಪತ್ರೆಗಳಿಗೆ ಅಲೆದಾಟ ತಪ್ಪಿದಂತಾಗಿದೆ ಎಂದರು.

ಮಾಸ್ಟರ್ ಟ್ರೇನರ್ ಸುಧೀರ ಕುಲ್ಕರ್ಣಿ ಮಾತನಾಡಿ, ಸುಮಾರು ೪೦ ವರ್ಷದಿಂದ ಸಮಾಜಕ್ಕೆ ಸೇವೆ ಸಲ್ಲಿಸುತ್ತಾ ಬರುತ್ತಿದೆ. ಬ್ಯಾಂಕಿಗ ವಿಚಾರದಲ್ಲಿ ದೇಶದ್ಯಂತ ತರಬೇತಿ ನೀಡಿದ್ದೇವೆ ಎಂದರು. ಸೆಲ್ಕೋ ಸೋಲಾರ ಸಿಇಒ ಮೋಹನ ಹೆಗಡೆ ಮಾತನಾಡಿದರು.

ಮುಂದಿನ ದಿನದಲ್ಲಿ   ನನ್ನ ಕಂಪನಿ ಮತ್ತು ಸೆಲ್ಕೋ ಸೋಲಾರ ವತಿಯಿಂದ ಸುಸುಜ್ಜಿತ ಸೋಲಾರ ಆಧಾರಿತ ಪ್ರಸೂತಿ ಗೃಹವನ್ನು ಸುಮಾರು ೪೫ ಲಕ್ಷದ ವೆಚ್ಚದಲ್ಲಿ ಮುಂಡಗೋಡದಲ್ಲಿ ಆಸ್ಪತ್ರೆ  ನಿರ್ಮಿಸುತ್ತೇವೆ ಎಂದು ಸಚಿವ ಹೆಬ್ಬಾರ ಹೇಳಿದರು. ಇದೆ ವೇಳೆ ಕೆ.ವಿ.ಜಿ.ಬಿ. ಚೇರ್‌ಮನ್ ಪಿ.ಗೋಪಿಕೃಷ್ಣ, ಮಾಸ್ಟರ್ ಟ್ರೇನರ್ ಸುಧೀರ ಕುಲ್ಕರ್ಣಿ, ಸೆಲ್ಕೋ ಸೋಲಾರ ಸಿಇಒ ಮೋಹನ ಹೆಗಡೆ, ಹರಿಪ್ರಕಾಶ ಕೋಣೆಮನೆ, ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿ ಶರದ ನಾಯಕ ಅವರನ್ನು ಸಚಿವರು ಸನ್ಮಾನಿಸಿದರು.

ನಂತರ ಸಚಿವರು ತಾಲೂಕು ಆಸ್ಪತ್ರೆ ಹಿಂಭಾಗದಲ್ಲಿ ಆಮ್ಲಜನಕ ಉತ್ಪಾದನಾ ಘಟಕದ ಶಂಕು ಸ್ಥಾಪನೆ ನೆರವೇರಿಸಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಶರದ ನಾಯಕ, ಡಾ.ಎಚ್.ಎಫ್.ಇಂಗಳೆ, ಹರಿಪ್ರಕಾಶ ಕೋಣೆಮನೆ, ಪ.ಪಂ.ಅಧ್ಯಕ್ಷೆ ರೇಣುಕಾ ರವಿ ಹಾವೇರಿ, ಸದಸ್ಯೆ ಜಯಸುಧಾ ಭೋವಿವಡ್ಡರ ಮುಖ್ಯಾಧಿಕಾರಿ ಸಂಗನಬಸಯ್ಯ, ಉಮೇಶ ಬಿಜಾಪುರ, ನಾಗಭೂಷಣ ಹಾವಣಗಿ, ಗುಡ್ಡಪ್ಪ ಕಾತೂರ, ಶೇಖರ ಲಮಾಣಿ, ತಾಲೂಕು ಆಸ್ಪತ್ರೆ ಸಿಬ್ಬಂದಿ ಮತ್ತಿತರರಿದ್ದರು. ವಿ.ವಿ.ಕುರ್ಡೇಕರ ಪ್ರಾರ್ಥಿಸಿದರು. ಎಸ್.ಎಸ್.ಪಟ್ಟಣಶೆಟ್ಟಿ, ಮಂಜುನಾಥ ಭಾಗ್ವತ ಮತ್ತು ಉಮೇಶ ಪುದಾಳೆ ನಿರ್ವಹಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.