ಪಾಕ್ ಪರ ಘೋಷಣೆ ಕೂಗಿದ್ರೆ ಸರಕಾರ ಸುಮ್ಮನಿರಲ್ಲ : ಕೋಟ
Team Udayavani, Mar 1, 2020, 8:27 PM IST
ಶಿರಸಿ: ಪಾಕಿಸ್ತಾನ ಪರ ಘೋಷಣೆ, ಭಾರತಕ್ಕೆ ವಿರೋಧದ ಜಯಕಾರ ಕೂಗಿದವರ ವಿರುದ್ಧ ಸರಕಾರ ಸುಮ್ಮನಿರಲ್ಲ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಲದ ಹೆಗ್ಗಣ, ಹಾವುಗಳು ಹೊರಬರುತ್ತಿವೆ. ಇಲ್ಲಿನ ಗಾಳಿ-ನೀರು ಕುಡಿದು ಭಾರತದ ವಿರುದ್ಧ ಮಾತನಾಡಿದರೆ ಜೈಲಿಗೆ ಕಳಿಸುತ್ತೇವೆ ಎಂದರು. ದೊರೆಸ್ವಾಮಿ ಹಾಗೂ ಯತ್ನಾಳರ ಮಾತುಗಳನ್ನು ಕೇಳಿದ್ದೇವೆ. ಈ ಗೊಂದಲ ಇತ್ಯರ್ಥ ಆಗಬಹುದೆಂಬ ನಂಬಿಕೆ ಇದೆ ಎಂದರು.
ಸಿಎಂ ಪರಮಾಧಿಕಾರ:
ಉಸ್ತುವಾರಿ, ನಿಗಮ-ಮಂಡಳಿ ನೇಮಕ, ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಸಚಿವ ಸಂಪುಟ ವಿಸ್ತರಣೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಾತಿ ಸಂಬಂಧ ಸ್ವಲ್ಪ ವಿಳಂಬ ಆಗಿದ್ದರೂ ಸಿಎಂ ಆಯಾ ಕಾಲಕ್ಕೆ ರಾಜ್ಯದ ಅಧ್ಯಕ್ಷರ, ಕೇಂದ್ರದ ನಾಯಕರ ಸಹಮತ ಪಡೆದು ಸಮರ್ಪಕವಾದ ತೀರ್ಮಾನ ಕೈಗೊಳ್ಳುತ್ತಾರೆ. ಸ್ವಾಭಾವಿಕವಾಗಿ ಆಯಾ ಜಿಲ್ಲೆಯವರಿಗೆ ಉಸ್ತುವಾರಿ ಸಿಗುತ್ತದೆ. ಆದರೆ, ಕೆಲವೊಮ್ಮೆ ಆಚೀಚೆ ಆಗಬಹುದು. ಉಸ್ತುವಾರಿಗಳು ಎಂದರೆ ಆಯಾ ಜಿಲ್ಲೆಗಳ ಅಭಿವೃದ್ಧಿ, ಆಗುಹೋಗುಗಳನ್ನು ನೋಡಿಕೊಳ್ಳಬೇಕಾದವರು ಎಂದರ್ಥ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ