ಕಿಸಾನ್‌ ಸಮ್ಮಾನ ಯೋಜನೆ ಗ್ರಾಪಂಗೆ ಹೊರೆ

•ಸಾರ್ವಜನಿಕರ ಇನ್ನಿತರ ಕೆಲಸಗಳಿಗೆ ತೊಂದರೆ •ಗ್ರಾಪಂ ನೌಕರರಿಂದ ಇಒಗೆ ಮನವಿ ಸಲ್ಲಿಕೆ

Team Udayavani, Jun 29, 2019, 2:45 PM IST

uk-tdy-5..

ಅಂಕೋಲಾ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್‌ ಇಲಾಖೆ ನೌಕರ ಸಂಘದವರು ತಾಪಂ ಇಒಗೆ ಮನವಿ ಸಲ್ಲಿಸಿದರು.

ಅಂಕೋಲಾ: ಗ್ರಾಮ ಪಂಚಾಯತಗಳ ಶೇ. 90ರಷ್ಟು ಕೆಲಸ-ಕಾರ್ಯಗಳು ಅಂತರ್ಜಾಲದ ಮೂಲಕವೇ ಆಗಬೇಕಿದ್ದು ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಾಲವಿಲ್ಲದೇ ಕೆಲಸಗಳನ್ನು ನಿರ್ವಹಿಸಲು ಕಷ್ಟಸಾಧ್ಯವಿರುವಾಗ ಪ್ರಧಾನಮಂತ್ರಿ ಕಿಸಾನ ಸಮ್ಮಾನ ನಿಧಿ ಯೋಜನೆಯ ಅರ್ಜಿಗಳನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ಅಳವಡಿಸಲು ಗ್ರಾಪಂಗೆ ಜವಾಬ್ದಾರಿ ನೀಡಿರುವುದರಿಂದ ಸಾರ್ವಜನಿಕರ ಇನ್ನಿತರ ಕೆಲಸಗಳನ್ನು ಮಾಡಲಾಗದೇ ತೊಂದರೆ ಅನುಭವಿಸುವಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತರಾಜ್‌ ಇಲಾಖಾ ನೌಕರರ ಸಂಘದ ತಾಲೂಕಾಧ್ಯಕ್ಷ ಮಂಜುನಾಥ ಟಿ.ಸಿ ಹೇಳಿದರು.

ತಾಲೂಕು ಕಾರ್ಯನಿರ್ವಹಣಾಧಿಕಾರಿ ಮತ್ತು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ಮಾತನಾಡಿದ ಅವರು ಜಿಲ್ಲಾ ಮತ್ತು ತಾಲೂಕಿನ 29ಕ್ಕಿಂತ ಹೆಚ್ಚಿನ ಇಲಾಖೆಗಳ ಜೊತೆಗೆ ಕರ್ತವ್ಯ ನಿರ್ವಹಿಸುವ ಗ್ರಾಪಂ ಯೋಜನೆಗಳ ಕೆಲಸದ ಒತ್ತಡಗಳಿರುವಾಗ ವಿದ್ಯುತ್‌ ಮತ್ತು ಅಂತರ್ಜಾಲದ ಸಮಸ್ಯೆ ಗ್ರಾಮೀಣ ಪ್ರದೇಶದಲ್ಲಿದೆ. ಸಾರ್ವಜನಿಕರ ಕೆಲಸಗಳನ್ನು ನಿರ್ವಹಿಸುವುದರ ಜೊತೆಯಲ್ಲಿ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ ನಿಧಿ ಯೋಜನೆಗೆ ಗ್ರಾಪಂ ಸಿಬ್ಬಂದಿಗಳನ್ನೇ ಗುರಿಯಾಗಿಸಿರುವುದು ಸರಿಯಲ್ಲ ಎಂದರು.

ಗ್ರಾ.ಪಂ.ದಲ್ಲಿ ಸಾಮಾನ್ಯ ಸಭೆ, ವಾರ್ಡ್‌ಸಭೆ, ಗ್ರಾಮಸಭೆ, ಜಮಾಬಂದಿ, ಸಾಮಾಜಿಕ ಲೆಕ್ಕಪರಿಶೋಧನೆ ಹೀಗೆ 40-50 ಸಭೆಗಳನ್ನು ವರ್ಷದಲ್ಲಿ ನಿರ್ವಹಿಸಿ ಉಳಿದ ಕರ್ತವ್ಯಗಳನ್ನು ನಿರ್ವಹಿಸುವುದರ ಜೊತೆಯಲ್ಲಿ ಸಿಬ್ಬಂದಿ ಕೊರತೆ ಇದ್ದರೂ ಪ್ರಧಾನಮಂತ್ರಿ ಕಿಸಾನ ಸಮ್ಮಾನ ನಿಧಿ ಯೋಜನೆಯಲ್ಲಿ ಸ್ವೀಕೃತವಾದ ಅರ್ಜಿಗಳನ್ನು ದಾಖಲಿಸುವ ಕೆಲಸ ನಿರ್ವಹಿಸುತ್ತಿದ್ದೇವೆ. ಆದರೂ ಬೇರೆಬೇರೆ ಇಲಾಖೆಗಳ ಕೆಲಸಗಳನ್ನು ತಂದು ಗ್ರಾಪಂಗಳ ಮೇಲೆ ಒತ್ತಡ ತಂದು ಗ್ರಾಪಂ ಸಿಬ್ಬಂದಿಯನ್ನು ಮನೆ-ಮನೆಗೆ ಕಳುಹಿಸಿ ಅರ್ಜಿ ಸಂಗ್ರಹಿಸಬೇಕೆಂದು ಹೊಸ ಆದೇಶ ಹೊರಡಿಸಿರುವುದು ಖೇದಕರ. ಸಂಬಂಧಪಟ್ಟ ಇಲಾಖೆ ಯಾವುದಾದರೂ ಸಿಬ್ಬಂದಿ ಒದಗಿಸಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಸಹಕರಿಸಬೇಕು ಎಂದರು.

ಆರ್‌ಡಿಪಿಆರ್‌ ಸಂಘದ ಗೌರವಾಧ್ಯಕ್ಷ ನೀಲಕಂಠ ನಾಯಕ, ಉಪಾಧ್ಯಕ್ಷೆ ಹಶ್ಮತ ಖಾನ್‌, ಕಾರ್ಯದರ್ಶಿ ನಾಗೇಂದ್ರ ನಾಯ್ಕ, ಖಜಾಂಚಿ ಎಂ.ಯು. ಪಟೇಲ್, ಪಿಡಿಓಗಳಾದ ಲೀಲಾ ಆಗೇರ, ಸಹನಾ ನಾಯಕ, ವಿಠuಲ ನಾಯ್ಕ, ಶಾಂತಲಾ ನಾಯಕ, ಮಹಾಂತೇಶ, ರವಿಂದ್ರಬಾಬು, ನಾಗರತ್ನಾ ಗೌಡ, ಶಾಂತಲಾ ನಾಯ್ಕ, ಲಕ್ಷ್ಮೀ ಗೌಡ, ಅಮಿತಾ ನಾಯ್ಕ ಇದ್ದರು.

ಮಾನಸಿಕ ಒತ್ತಡ: ಸಂಪೂರ್ಣ ಜವಾಬ್ದಾರಿಯುತವಾಗಿ ಗ್ರಾ.ಪಂ ಕೆಲಸಗಳನ್ನು ನಿರ್ವಹಿಸುವಾಗ ವಿದ್ಯುತ್‌ ಮತ್ತು ಅಂತರ್ಜಾಲದ ವ್ಯವಸ್ಥೆಯಲ್ಲಿ ವ್ಯತ್ಯಯವುಂಟಾದಾಗ ಸಾರ್ವಜನಿಕರ ಬೇಸರಕ್ಕೆ ಕಾರಣವಾದ ಘಟನೆಗಳು ನಡೆದಿವೆ. ಇಲಾಖೆಯ ಕರ್ತವ್ಯದ ಅವಧಿಯನ್ನು ಹೊರತುಪಡಿಸಿ ರಾತ್ರಿಯವರೆಗೂ ಕರ್ತವ್ಯ ನಿರ್ವಹಿಸಿ ಎಂದರೆ ಮಹಿಳಾ ಪಿಡಿಒಗಳು ಹೇಗೆ ಕರ್ತವ್ಯ ನಿರ್ವಹಿಸಬೇಕು? ಈ ಮೊದಲು ಸಹ ಕೆಲಸದ ಒತ್ತಡದಿಂದ ಪಿಡಿಓಗಳ ಆತ್ಮಹತ್ಯೆಯಂತಹ ಪ್ರಕರಣಗಳು ನಡೆದಿವೆ. ಬೇರೆ-ಬೇರೆ ಇಲಾಖೆಗಳು ನಿರ್ವಹಿಸುವ ಕೆಲಸವನ್ನು ಪಂಚಾಯತದ ಮೇಲೆ ಹೇರಿ ಪಂಚಾಯತ ಸಿಬ್ಬಂದಿ ಹೊಣೆಗಾರರನ್ನಾಗಿ ಮಾಡುವುದು ಸಮಂಜಸವಲ್ಲ ಎಂದು ಪಿಡಿಒ ಗಿರೀಶ ನಾಯಕ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.