ಕೆರೆ-ಕಟ್ಟೆ-ಕೊಳ್ಳ ಖಾಲಿ ಖಾಲಿ

•20ಕ್ಕೂ ಅಧಿಕ ಗ್ರಾಮಗಳಲ್ಲಿ ನೀರಿಗೆ ಹಾಹಾಕಾರ•ಪ್ರತಿನಿತ್ಯ 34-36 ಸೆಲ್ಸಿಯಸ್‌ ಉಷ್ಣಾಂಶ ದಾಖಲು

Team Udayavani, May 10, 2019, 4:19 PM IST

uk-tdy-1..

ಹಳಿಯಾಳ: ಪಟ್ಟಣದ ಅಂಚಿನಲ್ಲಿರುವ ಹೊರಗಿನ ಗುತ್ತಿಗೇರಿ ಕೆರೆ ಬರಿದಾಗಿದೆ.

ಹಳಿಯಾಳ: ಸದಾ ನೀರಿನಿಂದ ತುಂಬಿರುತ್ತಿದ್ದ ಹಳಿಯಾಳದ ಬಾವಿ, ಕೆರೆ-ಕಟ್ಟೆ, ಹಳ್ಳ-ಕೊಳ್ಳಗಳು ಈಗ ಖಾಲಿ ಖಾಲಿಯಾಗಿವೆ. ತಂಪಾದ ತಣ್ಣನೆಯ ವಾತಾವರಣ ಹೊಂದಿದ್ದ ಈ ಭಾಗವೀಗ ಬೆಂಕಿಯ ಒಲೆಯಾಗಿ ಸುಡುತ್ತಿದೆ. ಜನ-ಜಾನುವಾರುಗಳು ಹಿಂದೆಂದು ಕಂಡರಿಯದ ಬರಗಾಲದಿಂದ ಪರಿತಪಿಸುತ್ತಿದ್ದಾರೆ.

ಬೇಸಿಗೆ ಮುಗಿಯುತ್ತ ಬಂದರೂ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. 2017ರಲ್ಲಿ ಹಳಿಯಾಳಿಗರು ಅತಿ ಹೆಚ್ಚು ಬಿಸಿಲಿನ ತಾಪ ಅನುಭವಿಸಿದ್ದರು. ಈ ಬಾರಿ ಅದಕ್ಕೂ ಅಧಿಕವಾಗಿದೆ. ಪ್ರತಿನಿತ್ಯ 34ರಿಂದ 36 ಸೆಲ್ಸಿಯಸ್‌ನಷ್ಟು ಉಷ್ಣಾಂಶ ದಾಖಲಾಗುತ್ತಿದೆ. ಹೀಗಾಗಿ ಇಲ್ಲಿನ ಶಿವಪುರ, ಕಾಳಗಿನಕೊಪ್ಪ, ನಿರಲಗಾ, ಕಾಮಡೊಳ್ಳಿ, ಹೊಸಹಡಗಲಿ ಸೇರಿದಂತೆ ಸುಮಾರು 20ಕ್ಕೂ ಅಧಿಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ.

ಜಿಲ್ಲೆಯ ಗಡಿ ತಾಲೂಕಾಗಿರುವ ಹಳಿಯಾಳವು ಅಳ್ನಾವರ-ಧಾರವಾಡ-ಕಲಘಟಗಿಯ ಗಡಿಗಳನ್ನು ಹೊಂದಿಕೊಂಡಿರುವ ವಿಶಾಲ ಪ್ರದೇಶವಾಗಿದ್ದು, ಇಲ್ಲಿ ಕೃಷಿ ಪ್ರಧಾನವಾಗಿದೆ. ಇಲ್ಲಿ ಕಬ್ಬು-ಭತ್ತ-ಗೋವಿನಜೊಳ-ಹತ್ತಿ ಪ್ರಮುಖ ಬಿತ್ತನೆ ಬೆಳೆಗಳಾಗಿವೆ. ನಗರಕ್ಕೆ ನೀರಿನ ಕೊರತೆ ಬಾಧಿಸುವುದಿಲ್ಲ. ಆದರೆ ಗ್ರಾಮಾಂತರ ಭಾಗದ ಹಲವು ಹಳ್ಳಿಗಳು ನೀರಿಗಾಗಿ ಪರಿತಪಿಸಬೇಕಾಗುತ್ತದೆ.

ತಾಲೂಕಿನಲ್ಲಿ ಒಟ್ಟೂ ಸಣ್ಣ-ದೊಡ್ಡ ಸೇರಿ 36 ಕೆರೆಗಳಿದ್ದು, 71 ಬಾಂದಾರಗಳನ್ನು ಹೊಂದಿದೆ. ಸದ್ಯ ಬಾಂದಾರಗಳಲ್ಲಿ ನೀರಿಲ್ಲ. ಆದರೇ ಕೆಲವೇ ಕೆಲವು ಕೆರೆಗಳಲ್ಲಿ ಸ್ವಲ್ಪ ಪ್ರಮಾಣದ ನೀರಿನ ಸಂಗ್ರಹ ಕಾಣಸಿಗುತ್ತಿರುವುದು ಸಮಾಧಾನ ವಿಷಯವಾಗಿದೆ.

ಕೃಷಿ ಇಲಾಖೆ ಮಾಹಿತಿಯಂತೆ 2017ರಲ್ಲಿ 1820 ಮಿ.ಮೀ ವಾಡಿಕೆ ಮಳೆಯಾಗಬೇಕಿತ್ತು. ಆದರೆ 949.07ಮಿಮೀ ಆಗಿ ಪ್ರತಿಶತ 47.62 ಕಡಿಮೆ ಮಳೆಯಾಗಿತ್ತು. 2018ರಲ್ಲಿ 1222.73 ಮಿಮೀ ಮಳೆಯಾಗಿ ಶೇ. 32.80 ಮಳೆಯಾಗಿದ್ದು, 2017ಕ್ಕಿಂತ ಶೇ.15 ಉತ್ತಮ ಮಳೆಯಾಗಿದೆ. ಆದರೆ ಸದ್ಯ ಕೆರೆಗಳಲ್ಲಿ ನೀರಿನ ಸಂಗ್ರಹ ಪಾತಾಳ ಮುಟ್ಟುವ ಹಂತದಲ್ಲಿದೆ. ದಾಂಡೇಲಿಯ ಕಾಳಿನದಿಯಿಂದ ಹಳಿಯಾಳ ಪಟ್ಟಣಕ್ಕೆ ನೀರು ಸರಬರಾಜು ಆಗುತ್ತಿದೆ. ಕೆಲವೊಮ್ಮೆ ಪುರಸಭೆಯ ಕಾರ್ಯವೈಖರಿಯಿಂದ ಮಾತ್ರ ಜನ ನೀರಿನ ಸಮಸ್ಯೆ ಎದುರಿಸುತ್ತಾರೆ.

130 ಹಳ್ಳಿಗಳನ್ನು ಹೊಂದಿರುವ ದೊಡ್ಡ ತಾಲೂಕಾಗಿರುವ ಹಳಿಯಾಳ 24 ಗ್ರಾಮ ಪಂಚಾಯತಗಳನ್ನು ಹೊಂದಿದ್ದು, ತಾಲೂಕಿನಲ್ಲಿ 93 ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಇದರಲ್ಲಿ ಸಾರ್ವಜನಿಕರು-ಜನಪ್ರತಿನಿಧಿಗಳ-ಗ್ರಾಮಸ್ಥರ ಮಾಹಿತಿಯಂತೆ 32ಕ್ಕೂ ಅಧಿಕ ಘಟಕಗಳು ನಿರ್ವಹಣೆ ಇಲ್ಲದೇ ಕಾರ್ಯನಿರ್ವಹಿಸುತ್ತಿಲ್ಲ ಎನ್ನುತ್ತಾರೆ.

ಇನ್ನೂ ತಾಪಂ, ತಾಲೂಕಾಡಳಿತದವರು ಬೊರವೆಲ್ಗಳ ಸ್ಥಿತಿಗತಿಗಳನ್ನು ಮೇಲಿಂದ ಮೇಲೆ ಪರಿಶೀಲನೆ ಮಾಡುವ ಮೂಲಕ ನಿಗಾವಹಿಸಿದ್ದಾರೆ. ಆದರೆ ಸುಡು ಬಿಸಿಲಿನ ತಾಪದಿಂದ ಅಂತರ್ಜಲ ಮಟ್ಟ ಕೂಡ ಪಾತಾಳ ಮುಟ್ಟಿದ್ದೇ ಈ ಬಾರಿ ನೀರಿನ ಸಮಸ್ಯೆ ಹೆಚ್ಚಾಗಿ ತಲೆದೋರಲು ಕಾರಣವಾಗಿದೆ.

ಒಟ್ಟಾರೆ ಬೇಸಿಗೆ ಕಾಲದಲ್ಲಿ ಹಳಿಯಾಳ ಭಾಗದಲ್ಲಿ ಪಟ್ಟಣಕ್ಕೆ ಮಾತ್ರ ಕುಡಿಯುವ ನೀರಿನ ಸಮಸ್ಯೆ ಬಾಧಿಸುವುದಿಲ್ಲ. ಆದರೇ ಗ್ರಾಮೀಣ ಭಾಗದಲ್ಲಿ ಈಗಾಗಲೇ ಹಲವು ಕಡೆಗಳಲ್ಲಿ ಕೆರೆಗಳು ಬತ್ತಿವೆ. ಅಂತರ್ಜಲವು ಪಾತಾಳ ತಲುಪಿ ಬೊರವೆಲ್ಗಳು ನೀರು ನೀಡದ ಸ್ಥಿತಿಗೆ ತಲುಪಿವೆ. ಬಿಸಿಲಿನ ಝಳವು ನೀರಿನ ಮೂಲಗಳನ್ನು ಬರಿದಾಗಿಸುತ್ತಿದ್ದು, ಹಲವು ಹಳ್ಳಿಗಳು ಮಾತ್ರ ನೀರಿನ ಸಮಸ್ಯೆ ಎದುರಿಸುವಂತಾಗಿದೆ. ಆದರೆ ಯಾರಿಗೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಾಲೂಕಾಡಳಿತ ಹೇಳುತ್ತಿರುವುದು ಗ್ರಾಮೀಣ ಜನರಿಗೆ ಸಮಾಧಾನದ ಸಂಗತಿಯಾಗಿದೆ.

•ಯೋಗರಾಜ ಎಸ್‌.ಕೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.