![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಕೆರೆ-ಕಟ್ಟೆ-ಕೊಳ್ಳ ಖಾಲಿ ಖಾಲಿ
•20ಕ್ಕೂ ಅಧಿಕ ಗ್ರಾಮಗಳಲ್ಲಿ ನೀರಿಗೆ ಹಾಹಾಕಾರ•ಪ್ರತಿನಿತ್ಯ 34-36 ಸೆಲ್ಸಿಯಸ್ ಉಷ್ಣಾಂಶ ದಾಖಲು
Team Udayavani, May 10, 2019, 4:19 PM IST
![uk-tdy-1..](https://www.udayavani.com/wp-content/uploads/2019/05/uk-tdy-1..-2-614x465.jpg)
ಹಳಿಯಾಳ: ಪಟ್ಟಣದ ಅಂಚಿನಲ್ಲಿರುವ ಹೊರಗಿನ ಗುತ್ತಿಗೇರಿ ಕೆರೆ ಬರಿದಾಗಿದೆ.
ಹಳಿಯಾಳ: ಸದಾ ನೀರಿನಿಂದ ತುಂಬಿರುತ್ತಿದ್ದ ಹಳಿಯಾಳದ ಬಾವಿ, ಕೆರೆ-ಕಟ್ಟೆ, ಹಳ್ಳ-ಕೊಳ್ಳಗಳು ಈಗ ಖಾಲಿ ಖಾಲಿಯಾಗಿವೆ. ತಂಪಾದ ತಣ್ಣನೆಯ ವಾತಾವರಣ ಹೊಂದಿದ್ದ ಈ ಭಾಗವೀಗ ಬೆಂಕಿಯ ಒಲೆಯಾಗಿ ಸುಡುತ್ತಿದೆ. ಜನ-ಜಾನುವಾರುಗಳು ಹಿಂದೆಂದು ಕಂಡರಿಯದ ಬರಗಾಲದಿಂದ ಪರಿತಪಿಸುತ್ತಿದ್ದಾರೆ.
ಬೇಸಿಗೆ ಮುಗಿಯುತ್ತ ಬಂದರೂ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. 2017ರಲ್ಲಿ ಹಳಿಯಾಳಿಗರು ಅತಿ ಹೆಚ್ಚು ಬಿಸಿಲಿನ ತಾಪ ಅನುಭವಿಸಿದ್ದರು. ಈ ಬಾರಿ ಅದಕ್ಕೂ ಅಧಿಕವಾಗಿದೆ. ಪ್ರತಿನಿತ್ಯ 34ರಿಂದ 36 ಸೆಲ್ಸಿಯಸ್ನಷ್ಟು ಉಷ್ಣಾಂಶ ದಾಖಲಾಗುತ್ತಿದೆ. ಹೀಗಾಗಿ ಇಲ್ಲಿನ ಶಿವಪುರ, ಕಾಳಗಿನಕೊಪ್ಪ, ನಿರಲಗಾ, ಕಾಮಡೊಳ್ಳಿ, ಹೊಸಹಡಗಲಿ ಸೇರಿದಂತೆ ಸುಮಾರು 20ಕ್ಕೂ ಅಧಿಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ.
ಜಿಲ್ಲೆಯ ಗಡಿ ತಾಲೂಕಾಗಿರುವ ಹಳಿಯಾಳವು ಅಳ್ನಾವರ-ಧಾರವಾಡ-ಕಲಘಟಗಿಯ ಗಡಿಗಳನ್ನು ಹೊಂದಿಕೊಂಡಿರುವ ವಿಶಾಲ ಪ್ರದೇಶವಾಗಿದ್ದು, ಇಲ್ಲಿ ಕೃಷಿ ಪ್ರಧಾನವಾಗಿದೆ. ಇಲ್ಲಿ ಕಬ್ಬು-ಭತ್ತ-ಗೋವಿನಜೊಳ-ಹತ್ತಿ ಪ್ರಮುಖ ಬಿತ್ತನೆ ಬೆಳೆಗಳಾಗಿವೆ. ನಗರಕ್ಕೆ ನೀರಿನ ಕೊರತೆ ಬಾಧಿಸುವುದಿಲ್ಲ. ಆದರೆ ಗ್ರಾಮಾಂತರ ಭಾಗದ ಹಲವು ಹಳ್ಳಿಗಳು ನೀರಿಗಾಗಿ ಪರಿತಪಿಸಬೇಕಾಗುತ್ತದೆ.
ತಾಲೂಕಿನಲ್ಲಿ ಒಟ್ಟೂ ಸಣ್ಣ-ದೊಡ್ಡ ಸೇರಿ 36 ಕೆರೆಗಳಿದ್ದು, 71 ಬಾಂದಾರಗಳನ್ನು ಹೊಂದಿದೆ. ಸದ್ಯ ಬಾಂದಾರಗಳಲ್ಲಿ ನೀರಿಲ್ಲ. ಆದರೇ ಕೆಲವೇ ಕೆಲವು ಕೆರೆಗಳಲ್ಲಿ ಸ್ವಲ್ಪ ಪ್ರಮಾಣದ ನೀರಿನ ಸಂಗ್ರಹ ಕಾಣಸಿಗುತ್ತಿರುವುದು ಸಮಾಧಾನ ವಿಷಯವಾಗಿದೆ.
ಕೃಷಿ ಇಲಾಖೆ ಮಾಹಿತಿಯಂತೆ 2017ರಲ್ಲಿ 1820 ಮಿ.ಮೀ ವಾಡಿಕೆ ಮಳೆಯಾಗಬೇಕಿತ್ತು. ಆದರೆ 949.07ಮಿಮೀ ಆಗಿ ಪ್ರತಿಶತ 47.62 ಕಡಿಮೆ ಮಳೆಯಾಗಿತ್ತು. 2018ರಲ್ಲಿ 1222.73 ಮಿಮೀ ಮಳೆಯಾಗಿ ಶೇ. 32.80 ಮಳೆಯಾಗಿದ್ದು, 2017ಕ್ಕಿಂತ ಶೇ.15 ಉತ್ತಮ ಮಳೆಯಾಗಿದೆ. ಆದರೆ ಸದ್ಯ ಕೆರೆಗಳಲ್ಲಿ ನೀರಿನ ಸಂಗ್ರಹ ಪಾತಾಳ ಮುಟ್ಟುವ ಹಂತದಲ್ಲಿದೆ. ದಾಂಡೇಲಿಯ ಕಾಳಿನದಿಯಿಂದ ಹಳಿಯಾಳ ಪಟ್ಟಣಕ್ಕೆ ನೀರು ಸರಬರಾಜು ಆಗುತ್ತಿದೆ. ಕೆಲವೊಮ್ಮೆ ಪುರಸಭೆಯ ಕಾರ್ಯವೈಖರಿಯಿಂದ ಮಾತ್ರ ಜನ ನೀರಿನ ಸಮಸ್ಯೆ ಎದುರಿಸುತ್ತಾರೆ.
130 ಹಳ್ಳಿಗಳನ್ನು ಹೊಂದಿರುವ ದೊಡ್ಡ ತಾಲೂಕಾಗಿರುವ ಹಳಿಯಾಳ 24 ಗ್ರಾಮ ಪಂಚಾಯತಗಳನ್ನು ಹೊಂದಿದ್ದು, ತಾಲೂಕಿನಲ್ಲಿ 93 ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಇದರಲ್ಲಿ ಸಾರ್ವಜನಿಕರು-ಜನಪ್ರತಿನಿಧಿಗಳ-ಗ್ರಾಮಸ್ಥರ ಮಾಹಿತಿಯಂತೆ 32ಕ್ಕೂ ಅಧಿಕ ಘಟಕಗಳು ನಿರ್ವಹಣೆ ಇಲ್ಲದೇ ಕಾರ್ಯನಿರ್ವಹಿಸುತ್ತಿಲ್ಲ ಎನ್ನುತ್ತಾರೆ.
ಇನ್ನೂ ತಾಪಂ, ತಾಲೂಕಾಡಳಿತದವರು ಬೊರವೆಲ್ಗಳ ಸ್ಥಿತಿಗತಿಗಳನ್ನು ಮೇಲಿಂದ ಮೇಲೆ ಪರಿಶೀಲನೆ ಮಾಡುವ ಮೂಲಕ ನಿಗಾವಹಿಸಿದ್ದಾರೆ. ಆದರೆ ಸುಡು ಬಿಸಿಲಿನ ತಾಪದಿಂದ ಅಂತರ್ಜಲ ಮಟ್ಟ ಕೂಡ ಪಾತಾಳ ಮುಟ್ಟಿದ್ದೇ ಈ ಬಾರಿ ನೀರಿನ ಸಮಸ್ಯೆ ಹೆಚ್ಚಾಗಿ ತಲೆದೋರಲು ಕಾರಣವಾಗಿದೆ.
ಒಟ್ಟಾರೆ ಬೇಸಿಗೆ ಕಾಲದಲ್ಲಿ ಹಳಿಯಾಳ ಭಾಗದಲ್ಲಿ ಪಟ್ಟಣಕ್ಕೆ ಮಾತ್ರ ಕುಡಿಯುವ ನೀರಿನ ಸಮಸ್ಯೆ ಬಾಧಿಸುವುದಿಲ್ಲ. ಆದರೇ ಗ್ರಾಮೀಣ ಭಾಗದಲ್ಲಿ ಈಗಾಗಲೇ ಹಲವು ಕಡೆಗಳಲ್ಲಿ ಕೆರೆಗಳು ಬತ್ತಿವೆ. ಅಂತರ್ಜಲವು ಪಾತಾಳ ತಲುಪಿ ಬೊರವೆಲ್ಗಳು ನೀರು ನೀಡದ ಸ್ಥಿತಿಗೆ ತಲುಪಿವೆ. ಬಿಸಿಲಿನ ಝಳವು ನೀರಿನ ಮೂಲಗಳನ್ನು ಬರಿದಾಗಿಸುತ್ತಿದ್ದು, ಹಲವು ಹಳ್ಳಿಗಳು ಮಾತ್ರ ನೀರಿನ ಸಮಸ್ಯೆ ಎದುರಿಸುವಂತಾಗಿದೆ. ಆದರೆ ಯಾರಿಗೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಾಲೂಕಾಡಳಿತ ಹೇಳುತ್ತಿರುವುದು ಗ್ರಾಮೀಣ ಜನರಿಗೆ ಸಮಾಧಾನದ ಸಂಗತಿಯಾಗಿದೆ.
•ಯೋಗರಾಜ ಎಸ್.ಕೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shirur landslide; Green signal for National highway traffic in three or four days?](https://www.udayavani.com/wp-content/uploads/2024/07/1-27-150x83.jpg)
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
![Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ](https://www.udayavani.com/wp-content/uploads/2024/07/shiruu-150x83.jpg)
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
![1-ccc-aa](https://www.udayavani.com/wp-content/uploads/2024/07/1-ccc-aa-150x94.jpg)
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
![1–eewr-aa-aa](https://www.udayavani.com/wp-content/uploads/2024/07/1-eewr-aa-aa-150x91.jpg)
Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು
![1–eewr-aa](https://www.udayavani.com/wp-content/uploads/2024/07/1-eewr-aa-150x89.jpg)
Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್ ನಂಬಿಯಾರ್
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.