ಬೆಳದಿಂಗಳ ರಾತ್ರಿಯಲ್ಲಿ ಹೃದಯಸ್ಪರ್ಶಿ ಸಮ್ಮಾನ


Team Udayavani, Feb 6, 2018, 7:19 PM IST

06-12.jpg

ಹೊನ್ನಾವರ: ಜಿಲ್ಲೆಯಲ್ಲಿ ಹಿಂದುಸ್ತಾನಿ ಸಂಗೀತದ ಸವಿ ಫಸರಿಸಲು ಕಾರಣರಾದ 60-85ರ ವರ್ಷವರೆಗಿನ 47 ಹಿರಿಯ ಕಲಾವಿದರನ್ನು ಅಭಿನಂದಿಸುವ ಅಪರೂಪದ ಸಮಾರಂಭ ಕರಿಕಾನಮ್ಮ ದೇವಿ ದೇವಸ್ಥಾನ ಬೆಟ್ಟದ ಮೇಲೆಯೇ ನಡೆಯಿತು.

ಶಾಸ್ತ್ರೀಯ ಸಂಗೀತ ಎಂದರೆ ಮಾರು ದೂರ ಸರಿಯುತ್ತಿದ್ದ ಕಾಲದಲ್ಲಿ ಸಂಗೀತ ಸಾಧನೆ ಮಾಡುತ್ತಾ ಶಿಷ್ಯರನ್ನು ತರಬೇತಿಗೊಳಿಸಿ ಸಂಗೀತದ
ಬೆಟ್ಟವನ್ನು ಕಷ್ಟಪಟ್ಟು ಏರಿದ ಕಲಾವಿದರನ್ನು ಇಂದಿನ ಕಲಾವಿದರು ಸಂಭ್ರಮದಿಂದ ಗೌರವಿಸಿದರು. ಎಲ್ಲ ಕಲಾವಿದರ ಆರೋಗ್ಯ, ಆಯುಷ್ಯ ಕೋರಿ ಶ್ರೀ ಕರಿಕಾನಮ್ಮ ದೇವಿಯಲ್ಲಿ ಪ್ರಾರ್ಥಿಸಲಾಯಿತು. ಗಜಾನನ ಭಂಡಾರಿ ಇವರ ಶಹನಾಯಿಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಕನ್ನಡ ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಲವಂತರಾವ್‌ ಪಾಟೀಲ ಮಾತನಾಡಿ, ಪ್ರಕೃತಿಯೇ ದೇವರು, ದೇವರಲ್ಲಿ ಪ್ರಕೃತಿ ಇದ್ದಾನೆ. ಈ ಸನ್ನಿಧಿಯಲ್ಲಿ ಸ್ವರಸಾಧಕರನ್ನು ಸನ್ಮಾನಿಸುತ್ತಿರುವುದು ಗಂಧರ್ವ ಲೋಕದ ಗೌರವ ದೊರೆತಂತೆ ಎಂದು ಅಭಿನಂದಿಸಿದರು.

ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸೆಲ್ಕೊ ಇಂಡಿಯಾ ಸಂಸ್ಥಾಪಕ ಡಾ| ಹರೀಶ ಹಂದೆ ಮಾತನಾಡಿ, ಜಗತ್ತನ್ನು ಒಂದುಗೂಡಿಸುವ ಸಂಗೀತಕ್ಕೆ ಜಗತ್ತಿನಷ್ಟೇ ವ್ಯಾಪ್ತಿಯಿದೆ. ಸಂಗೀತ ಜಗತ್ತಿಗೆ ಸೇರಿದ್ದು, ಉತ್ತರಾದಿ, ದಕ್ಷಿಣಾದಿ, ಕಾಶ್ಮೀರಿ, ಪಹಾಡಿ, ಪಾಶ್ಚಾತ್ಯ ಯಾವ ಹೆಸರಿನಿಂದ ಕರೆದರೂ ಸಂಗೀತದ ಉದ್ದೇಶ ಮನುಕುಲವನ್ನು ಒಂದು ಮಾಡುವುದು. ಜಿಲ್ಲೆಯ ಕಲಾವಿದರನ್ನು ಸೇರಿಸಿ ಅಭಿನಂದಿಸುತ್ತಿರುವವರನ್ನು ಅಭಿನಂದಿಸುತ್ತೇನೆ ಎಂದರು.

ಇದೇ ಸಮಾರಂಭದಲ್ಲಿ ಅವಿನಾಶ ಹೆಬ್ಟಾರ ಸಂಸ್ಮರಣಾ ಯುವ ಪುರಸ್ಕಾರವನ್ನು ಮಂಗಳೂರಿನ ಅಂಕುಶ ನಾಯಕ ಇವರಿಗೆ ಗಣ್ಯರು ಪ್ರದಾನ
ಮಾಡಿದರು. ನಾದ-ಮಾಧವ ರಾಷ್ಟ್ರೀಯ ಪ್ರಶಸ್ತಿಯನ್ನು ಪಂ| ಶಿವಾನಂದ ತರಲಗಟ್ಟಿ ಅವರಿಗೆ ತಲುಪಿಸುವುದಾಗಿ ಪ್ರಕಟಿಸಲಾಯಿತು. ಕ್ಷೇತ್ರದ ಪ್ರಧಾನ ಅರ್ಚಕ, ಸಾಮವೇದ ವಿದ್ವಾಂಸ ಸುಬ್ರಹ್ಮಣ್ಯ ಭಟ್‌ ಆಶೀರ್ವಚನ ನೀಡಿದರು. ಕಲಾಸಂಗಮದ ಅಧ್ಯಕ್ಷ ಡಾ| ಎಂ.ಜಿ. ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ತಬಲಾ ವಾದಕ ಗೋಪಾಲಕೃಷ್ಣ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಧರ ಹೆಗಡೆ ಕಲಾºಗ ವಂದಿಸಿದರು. ಕಾರ್ಯಕ್ರಮವನ್ನು ಕಲಾಮಂಡಲ, ಎಸ್‌.ಕೆ.ಪಿ. ದೇವಸ್ಥಾನ ಟ್ರಸ್ಟ್‌, ಮ್ಯೂಸಿಕ್‌ ಟ್ರಸ್ಟ್‌ ಇವು ಸಂಯೋಜಿಸಿದ್ದವು. ನೂರಕ್ಕೂ ಹೆಚ್ಚು ವಿದೇಶಿ ಕಲಾಸಕ್ತರ ಸಹಿತ ಸಾವಿರಕ್ಕೂ ಹೆಚ್ಚು ಸಂಗೀತ ಪ್ರೇಮಿಗಳು ಬೆಳತನಕ ನಡೆದ ಸಂಗೀತ ಆಸ್ವಾದಿಸಿದರು.

ಪಂ| ಹಾಸನಗಿ ಗಣಪತಿ ಭಟ್‌, ಕೃಷ್ಣರಾವ್‌ ಕಲ್ಗುಂಡಿ ಕೊಪ್ಪ, ಎಂ.ಟಿ. ಭಾಗವತ್‌, ಆರ್‌.ವಿ. ಹೆಗಡೆ ಹಳ್ಳದಕೈ, ಪಂ| ಪರಮೇಶ್ವರ ಹೆಗಡೆ, ಶ್ರೀಪಾದ
ಹೆಗಡೆ ಕಂಪ್ಲಿ ಸಹಿತ ಹೆಚ್ಚಿನ ಎಲ್ಲ ಕಲಾವಿದರು ಕಾರ್ಯಕ್ರಮ ನೀಡಿದರು.
 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.