ಸಾಗರ ಕವಚ ಕಾರ್ಯಾಚರಣೆ ಯಶಸ್ವಿ


Team Udayavani, Nov 23, 2017, 3:14 PM IST

23-26.jpg

ಕಾರವಾರ: ಸಾಗರ ಮಾರ್ಗ ಹಾಗೂ ಪಕ್ಕದ ರಾಜ್ಯದಿಂದ ದುಷ್ಕರ್ಮಿಗಳು ಜಿಲ್ಲೆಯೊಳಗೆ ನುಸುಳದಂತೆ ಕಟ್ಟೆಚ್ಚರ ವಹಿಸುವ ಸಾಗರ
ಕವಚ ಹೆಸರಿನ ಕಾರ್ಯಾಚರಣೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್‌ ಇಡಲು ಯತ್ನಿಸಿದ ಇಬ್ಬರನ್ನು ನಗರಠಾಣೆ ಪಿಎಸ್‌ಐ
ನವೀನ್‌ ನಾಯ್ಕ ನೇತೃತ್ವದ ತಂಡ ಬುಧವಾರ ಮಧ್ಯಾಹ್ನ ಬಂಧಿಸಿತು.

ಈ ಮೂಲಕ ಜಿಲ್ಲೆಯ ಕರಾವಳಿ ಭಾಗದಲ್ಲಿ ಹಮ್ಮಿಕೊಳ್ಳಲಾಗಿರುವ ಸಾಗರ ಕವಚ ಅಣಕು ಕಾರ್ಯಾಚರಣೆ ಯಶಸ್ವಿಯಾಗಿ
ಮುಕ್ತಾಯವಾಯಿತು. ಬಂಧಿ ತ ಸಿಬ್ಬಂದಿ ಕೋಸ್ಟ್‌ಗಾರ್ಡ್‌ನಲ್ಲಿ ನಾವಿಕ ವೃತ್ತಿ ಮಾಡುವ ಜಿ. ಡೆನಿಯಲ್‌ ರಾಜಕುಮಾರ್‌ ಹಾಗೂ ಎಲ್‌.ಕೆ.ಯಾದವ್‌ ಎಂದು ನಗರಠಾಣೆ ಪೊಲೀಸರು ತಿಳಿಸಿದ್ದಾರೆ.

ಪೊಲೀಸ್‌ ಇಲಾಖೆ, ಕರಾವಳಿ ಕಾವಲು ಪೊಲೀಸ್‌ ಪಡೆ, ತಟರಕ್ಷಕ ಪಡೆ ಹಾಗೂ ರೆಡ್‌ ಫೋರ್ಸ್‌ ಸಹಕಾರದಲ್ಲಿ ಕಟ್ಟೆಚ್ಚರದ
ಕಾರ್ಯಾಚರಣೆ ನಡೆಯಿತು. ನ.21ರಂದು ಬೆಳಗ್ಗೆ 6ರಿಂದ 22ರ ಸಂಜೆ 6 ರವರೆಗೆ ನಡೆದ ಕಾರ್ಯಾಚರಣೆ ಯಶಸ್ವಿಯಾಯಿತು.
ಅನುಮಾನಾಸ್ಪದ ವ್ಯಕ್ತಿಗಳ ಚಲನೆ ಹಾಗೂ ಸಮಾಜಘಾತುಕ ಚಟುವಟಿಕೆಗಳನ್ನು ಪತ್ತೆ ಮಾಡುವ ಕಾರ್ಯಾಚರಣೆ ಸಾಗರ
ಕವಚ ವರ್ಷದಲ್ಲಿ ಎರಡು ಸಲ ನಡೆಸುತ್ತಾ ಬರಲಾಗುತ್ತಿದೆ.

ಜಿಲ್ಲಾ ಕೇಂದ್ರ ಕಾರವಾರ ಸಮೀಪ ಐಎನ್‌ಎಸ್‌ ಕದಂಬ, ಕೈಗಾ ಅಣುಸ್ಥಾವರ, ಸುಪಾ, ಕದ್ರಾ, ಕೊಡಸಳ್ಳಿ ಅಣೆಕಟ್ಟು, ಕಾಳಿ
ಸೇತುವೆಯಂತಹ ಸೂಕ್ಷ್ಮ ಪ್ರದೇಶಗಳಿದ್ದು, ಇವುಗಳ ಸುರಕ್ಷತೆ ದೃಷ್ಟಿಯಿಂದ ಈ ಕಾರ್ಯಾಚರಣೆ ಮಹತ್ವದ್ದಾಗಿದೆ. ಭದ್ರತಾ
ವ್ಯವಸ್ಥೆಯನ್ನು ಪ್ರತಿವರ್ಷ ಪರಿಶೀಲಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು. ಎಲ್ಲೆಡೆ ಪೊಲೀಸ್‌ ಕಾವಲು:
ಸಾಗರ ಕವಚ ಕಾರ್ಯಾಚರಣೆಯಲ್ಲಿ ದುಷ್ಕರ್ಮಿಗಳು ಜಿಲ್ಲೆಯ ಗಡಿ ಪ್ರವೇಶಿಸಿದಾಗ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಿಬ್ಬಂದಿಗೆ ತರಬೇತಿ ನೀಡಲಾಯಿತು. ಸಮುದ್ರ ದಂಡೆ, ರಾಷ್ಟ್ರೀಯ ಹೆದ್ದಾರಿ ಮತ್ತು ಅರಣ್ಯ ಹಾಗೂ ನಗರ, ಪಟ್ಟಣಗಳ ನಿರ್ದಿಷ್ಟ ಪ್ರದೇಶಗಳಲ್ಲಿ ಪೊಲೀಸ್‌  ಕಾವಲು ಬಿಗಿಗೊಳಿಸಲಾಗಿತ್ತು. ವಾಹನಗಳನ್ನು ಹಾಗೂ ಅತ್ತಿಂದಿತ್ತ  ಪ್ರಯಾಣಿಸುವ ಜನರ ಬ್ಯಾಗ್‌, ಲಗೇಜ್‌ ಗಳನ್ನು ತಪಾಸಣೆ ಮಾಡಲಾಯಿತು. ಪೊಲೀಸ್‌ ಇಲಾಖೆಯ ಬಾಂಬ್‌ ನಿಷ್ಕ್ರಿಯ ದಳದವರನ್ನು ಜಾಗೃತಾವಸ್ಥೆಯಲ್ಲಿ
ಇಡಲಾಗಿತ್ತು.

ಗಡಿಯಲ್ಲಿ ತೀವ್ರ ತಪಾಸಣೆ:
ಜಿಲ್ಲೆಯ ಕಾರವಾರದಿಂದ ಭಟ್ಕಳದ ವರೆಗಿನ ಎರಡೂ ಗಡಿಯಲ್ಲಿ ವಾಹನ ತಪಾಸಣೆ ಜೋರಾಗಿತ್ತು. ಗೋವಾ ಗಡಿಯಿಂದ ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ಹಾದು ಬರುವ ಪ್ರತಿಯೊಂದು ವಾಹನಗಳನ್ನು ಪೊಲೀಸರು ಹಾಗೂ ಸಂಚಾರಿ ಪೊಲೀಸರು ನಿಲ್ಲಿಸಿ ತಪಾಸಣೆ
ನಡೆಸುವ ದೃಶ್ಯ ಕಂಡು ಬಂತು.

ಸಮುದ್ರದಲ್ಲಿ ಕೋಸ್ಟ್‌ ಗಾರ್ಡ್‌ನ ಗಸ್ತು:
ಸಮುದ್ರ ಮಾರ್ಗವಾಗಿ ದುಷ್ಕರ್ಮಿಗಳು ಒಳ ಪ್ರವೇಶಿಸದಂತೆ, ಕೋಸ್ಟ್‌ ಗಾರ್ಡ್‌ ಹಾಗೂ ಕರಾವಳಿ ಕಾವಲು ಪೊಲೀಸ್‌
ಪಡೆಯ ಬೋಟುಗಳು ಗಸ್ತು ತಿರುಗಿದವು. ಗೋವಾ ಗಡಿಯಿಂದ ಭಟ್ಕಳದ ವರೆಗೆ ಹಗಲು-ರಾತ್ರಿ ಗಸ್ತು ತಿರುಗಿ ಬಿಗಿ ಕಾವಲು
ಏರ್ಪಡಿಸಲಾಗಿತ್ತು.  

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

KARADI (2)

Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.