ನೀಗಿತು ಕುಡಿಯುವ ನೀರಿನ ಸಮಸ್ಯೆ

ಶಾಸಕ ದಿನಕರ ಶೆಟ್ಟಿ  ಇಚ್ಛಾಶಕ್ತಿ-ಜನಪರ ಕಾಳಜಿ­ನಿಟ್ಟು ಸಿರು ಬಿಟ್ಟ ಅಘನಾಶಿನಿ ನಿವಾಸಿಗಳು

Team Udayavani, May 27, 2021, 9:19 PM IST

6465465454

ಕುಮಟಾ: ತಾಲೂಕಿನ ಕಾಗಾಲ ಗ್ರಾಪಂ ವ್ಯಾಪ್ತಿಯ ಅಘನಾಶಿನಿ ಭಾಗದ ನಿವಾಸಿಗಳು ಕಳೆದ ಹಲವಾರು ವರ್ಷಗಳಿಂದ ಕುಡಿಯುವ ನೀರಿನ ಬವಣೆ ಎದುರಿಸುತ್ತಿದ್ದು, ಶಾಸಕ ದಿನಕರ ಶೆಟ್ಟಿಯವರ ಇಚ್ಛಾಶಕ್ತಿ ಹಾಗೂ ಜನಪರ ಕಾಳಜಿಯಿಂದ ಇದಕ್ಕೀಗ ಮುಕ್ತಿ ದೊರೆತಂತಾಗಿದೆ.

ಕಳೆದ ಸಾಲಿನಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಬಿಡುಗಡೆಯಾದ ಅನುದಾನದಲ್ಲಿ ಗ್ರಾಪಂ ಟಾಸ್ಕ್ಫೋರ್ಸ್‌ ಸಮಿತಿ ಮೂಲಕ ಕೊಳವೆಬಾವಿ ನಿರ್ಮಿಸಿ, ಅಘನಾಶಿನಿ ಭಾಗದ ಜನತೆಗೆ ಕುಡಿಯುವ ನೀರು ಪೂರೈಸುವಲ್ಲಿ ಶಾಸಕ ಶೆಟ್ಟಿ ಯಶಸ್ವಿಯಾಗಿದ್ದಾರೆ. ಅಘನಾಶಿನಿ ಭಾಗದ ಜನತೆ ಕಳೆದ ಹಲವಾರು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದು, ಅಘನಾಶಿನಿ ನದಿ ಅರಬ್ಬಿ ಸಮುದ್ರಕ್ಕೆ ಸಂಗಮವಾಗುವ ಈ ಭಾಗದಲ್ಲಿ ತೆರೆದ ಬಾವಿ ನಿರ್ಮಿಸಿದರೆ ಉಪ್ಪು ನೀರು ಸೇರುವ ಸಾಧ್ಯತೆ ಅಧಿಕವಾಗಿದೆ. ಅಲ್ಲದೇ, ಮಳೆಗಾಲದಲ್ಲಿಯೂ ಸಹ ಸಿಹಿ ನೀರಿನ ಮೂಲಗಳಿಗೆ ಉಪ್ಪು ನೀರು ಸೇರ್ಪಡೆಗೊಳ್ಳುವ ಕಾರಣ ಸ್ಥಳೀಯ ಜನತೆ ಕುಡಿಯುವ ನೀರಿಗಾಗಿ ಪರಿತಪಿಸಬೇಕಾಗಿತ್ತು.

ಈ ಬಗ್ಗೆ ಸ್ಥಳೀಯ ಗ್ರಾ.ಪಂ ಹಲವು ಕ್ರಮ ಕೈಗೊಂಡರೂ ಶಾಶ್ವತ ಪರಿಹಾರ ಮಾತ್ರ ದೊರೆತಿರಲಿಲ್ಲ. ಈ ಸಂಬಂಧ ಸ್ಥಳೀಯರು ಸಂಬಂಧಿಸಿದ ಇಲಾಖೆ ಹಾಗೂ ಶಾಸಕ ದಿನಕರ ಶೆಟ್ಟಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ತಕ್ಷಣ ಸ್ಪಂದಿಸಿದ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು. ಅಲ್ಲದೇ, ಕಳೆದ ಸಾಲಿನಲ್ಲಿ ಕ್ಷೇತ್ರದ ಕುಡಿಯುವ ನೀರಿನ ಯೋಜನೆಗಾಗಿ ಬಿಡುಗಡೆಯಾದ 15 ಲಕ್ಷ ರೂ. ಅನುದಾನದಲ್ಲಿ 1.5 ಲಕ್ಷ ರೂ. ಅನುದಾನವನ್ನು ಆಘನಾಶಿನಿ ಭಾಗದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನೀಡುವುದಾಗಿ ಭರವಸೆ ನೀಡಿದ್ದರು.

ಶಾಸಕ ದಿನಕರ ಶೆಟ್ಟಿಯವರ ಸಹಕಾರದೊಂದಿಗೆ ಕಾಗಾಲ ಗ್ರಾಪಂ ಟಾಸ್ಕ್ಫೋರ್ಸ್‌ ಸಮಿತಿ ಶಾಸಕರ ಅನುದಾನದ ಜೊತೆಗೆ ಗ್ರಾ.ಪಂ ಅನುದಾನವನ್ನೂ ಬಳಸಿ ಶಾಶ್ವತ ಕುಡಿಯುವ ನೀರಿನ ಯೋಜನೆಗಾಗಿ ಅಘನಾಶಿನಿಯ ಕಿರುಬೇಲೆ ಬಳಿ ಒಟ್ಟೂ 3 ಲಕ್ಷ ರೂ.ಗಳಲ್ಲಿ ಎರಡು ಬೋರ್‌ವೆಲ್‌ಗ‌ಳನ್ನು ತೆಗೆಸಿದ್ದು, ಇದರಿಂದ ಪಂಚಾಯತ ವ್ಯಾಪ್ತಿಯ ಬಹುತೇಕ ಭಾಗದ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಂತಾಗಿದೆ. ಪಂಚಾಯತ ವ್ಯಾಪ್ತಿಯ ಪ್ರತಿ ಮನೆಗಳಿಗೂ ನಳ ಅಳವಡಿಸಿ, ಮೀಟರ್‌ ಹಾಕುವ ಮೂಲಕ ಜನತೆಗೆ ಸಕಾಲಕ್ಕೆ ಕುಡಿಯುವ ನೀರು ಪೂರೈಸುವುದರ ಜೊತೆಗೆ ನೀರು ಪೋಲಾಗದಂತೆ ಕ್ರಮವಹಿಸಲು ಸ್ಥಳೀಯ ಗ್ರಾ.ಪಂ ಚಿಂತನೆ ನಡೆಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.