ಆನ್‌ಲೈನ್‌ ವ್ಯವಸ್ಥೆ ಯಿಂದ ಸಮಸ್ಯೆ


Team Udayavani, Oct 29, 2019, 1:22 PM IST

uk-tdy-2

ಭಟ್ಕಳ: ಕಟ್ಟಡ ಕಾರ್ಮಿಕರಿಗೆ ಆನ್‌ಲೈನ್‌ ವ್ಯವಸ್ಥೆಯಿಂದ ಅನ್ಯಾಯ ಆಗುತ್ತಿದ್ದು, ಶೀಘ್ರ ಗೊಂದಲ ನಿವಾರಿಸಿ ಕಟ್ಟಡ ಕಾರ್ಮಿಕರಿಗೆ ಸರಕಾರದ ಸೌಲಭ್ಯ ಸಿಗುವಂತಾಗಬೇಕೆಂದು ಉತ್ತರ ಕನ್ನಡ ಜಿಲ್ಲಾ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಪ್ರಧಾನಕಾರ್ಯದರ್ಶಿ ಜಿ.ಎನ್‌. ರೇವಣಕರ ತಿಳಿಸಿದ್ದಾರೆ.

ಪಟ್ಟಣದ ಖಾಸಗಿ ಹೊಟೆಲ್‌ ಸಭಾಂಗಣದಲ್ಲಿ ಕರೆದ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚಿನವರೆಗೂ ಕಟ್ಟಡ ಕಾರ್ಮಿಕರ ಅರ್ಜಿಗಳನ್ನುಮೆನ್ಯುವಲ್‌ ಆಗಿ ಸ್ವೀಕರಿಸುತ್ತಿದ್ದರಿಂದ ಶೀಘ್ರ ಅರ್ಜಿ ಪರಿಶೀಲನೆ ಆಗಿ ತ್ವರಿತ ರೀತಿಯಲ್ಲಿ ಕಾರ್ಮಿಕರಿಗೆ ಸೌಲಭ್ಯ ಸಿಗುತ್ತಿತ್ತು. ಆದರೆ ಅರ್ಜಿಗಳನ್ನು ಆನ್‌ ಲೈನ್‌ ಮೂಲಕ ಸಲ್ಲಿಸುವುದು ಮಾಡಿದ ದಿನದಿಂದ ಇಲ್ಲಿಯವರೆಗೂ ಫಲಾನುಭವಿಗಳಿಗೆ ಸರಿಯಾದ ರೀತಿಯಲ್ಲಿ ಸೌಲಭ್ಯ ಸಿಗುತ್ತಿಲ್ಲ. ಆನಲೈನ್‌ ಅರ್ಜಿಗಳನ್ನು ಪರಿಶೀಲಿಸಲು ಮೂರ್‍ನಾಲ್ಕು ದಿನ ವಿಳಂಬ ಮಾಡಲಾಗುತ್ತಿದೆ.

ಒಮ್ಮೆ ಪರಿಶೀಲಿಸಿದರೂ ಅರ್ಜಿಯನ್ನು ಇಲ್ಲದ ಸಬೂಬು ಹೇಳಿ ತಿರಸ್ಕರಿಸುವ ಕೆಲಸ ಮಾಡಲಾಗುತ್ತಿದೆ. ಈ ಬಗ್ಗೆ ಕಾರ್ಮಿಕ ಕಚೇರಿಯಲ್ಲಿ ಪ್ರಶ್ನಿಸಿದರೂ ಸಮರ್ಪಕ ಉತ್ತರ ಸಿಗುತ್ತಿಲ್ಲ ಎಂದ ಅವರು ಆನ್‌ಲೈನ್‌ ವ್ಯವಸ್ಥೆಯಿಂದ ಕಟ್ಟಡ ಕಾರ್ಮಿಕರಿಗೆ ತೊಂದರೆಯಾಗುತ್ತಿದ್ದು, ಎಲ್ಲಿ ಅರ್ಜಿ ಹಾಕಲಾಗಿದೆಯೋ ಅಲ್ಲಿಯೇ ಅವರ ವಿವರ ಪರಿಶೀಲಿಸಬೇಕಿದೆ. ಅದನ್ನು ಬಿಟ್ಟು ಬೇರೆ ಕಡೆಗೆ ಪರಿಶೀಲಿಸಿಲು ಹೋದರೆ ಯಾವುದೇ ವಿವರ ಸಿಗುತ್ತಿಲ್ಲ. ಆನ್‌ಲೈನ್‌ ವ್ಯವಸ್ಥೆಯಲ್ಲೇ ನಿಗೂಢತೆ, ಗೊಂದಲವಿದ್ದು, ಆದಷ್ಟು ಬೇಗ ಸರಿಪಡಿಸಬೇಕು, ಕಟ್ಟಡ ಕಾರ್ಮಿಕರ ಕೆಲಸ ಆಗಲು ಹಾಗೂ ಸರಕಾರದಿಂದ ಸೌಲಭ್ಯ ತ್ವರಿತಗತಿಯಲ್ಲಿ ಸಿಗುವಂತಾಗಲು ಈ ಮೊದಲಿನಂತೆಯೇ ಕಾರ್ಮಿಕರ ನಿರೀಕ್ಷಕರ ಕಚೇರಿಯಲ್ಲೇ ಅರ್ಜಿ ಸ್ವೀಕಾರ ಮಾಡಬೇಕು.

ಅಧಿಕೃತ ಸಂಘಟನೆ ಕಚೇರಿಯಲ್ಲಿ ಮಾತ್ರ ಕಾರ್ಮಿಕರ ಅರ್ಜಿ ಸ್ವೀಕೃತವಾಗಬೇಕು ಎಂದು ಹೇಳಿದ ಅವರು, ಕಾರ್ಮಿಕರ ಪಿಂಚಣಿ, ಮದುವೆ ಸಹಾಯಧನ ಕಳೆದ ನಾಲ್ಕು ವರ್ಷಗಳಿಂದ ಬಿಡುಗಡೆಯಾಗಿಲ್ಲ. ಸರಕಾರ ಈ ಬಗ್ಗೆಯೂ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದರು. ಸಿಐಟಿಯು ತಾಲೂಕು ಅಧ್ಯಕ್ಷ ಪುಂಡಲೀಕ ನಾಯ್ಕ, ಸಿಐಟಿಯು ಕಾರ್ಯದರ್ಶಿ ಶ್ರೀಧರ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.