ಕಾಯಿಲೆ ಜೊತೆ ಸಮಸ್ಯೆಗಳೂ ಉಲ್ಬಣ


Team Udayavani, Apr 18, 2020, 6:03 PM IST

ಕಾಯಿಲೆ ಜೊತೆ ಸಮಸ್ಯೆಗಳೂ ಉಲ್ಬಣ

ಹೊನ್ನಾವರ: ಜಿಲ್ಲೆಯಲ್ಲಿ ಮಂಗನ ಕಾಯಿಲೆಯೊಂದಿಗೆ ಸಮಸ್ಯೆಗಳೂ ಉಲ್ಬಣಗೊಳ್ಳುತ್ತಿದ್ದು, ಚಿಕಿತ್ಸೆಯ ವ್ಯಥೆ ಹೆಚ್ಚುತ್ತಿದೆ. ಗುಣಮುಖರಾದ ಬಡವರು ಬಿಲ್‌ ಹಿಡಿದುಕೊಂಡು ಸರ್ಕಾರದ ನೆರವಿಗಾಗಿ ಅಲೆದಾಡುವಂತಾಗಿದೆ.

ಹಕೀಕತ್ತೇನು?: ವಿಧಾನಸಭೆ ಬಜೆಟ್‌ ಅಧಿವೇಶನದಲ್ಲಿ ಶಿವಮೊಗ್ಗ ಜಿಲ್ಲೆಯ ಇಬ್ಬರು ಶಾಸಕರು ಧ್ವನಿ ಎತ್ತಿದ ಕಾರಣ ಮುಖ್ಯಮಂತ್ರಿಗಳು ಮಂಗನ ಕಾಯಿಲೆಯ ರೋಗಿಗಳ ಎಲ್ಲ ವೆಚ್ಚವನ್ನು ಸರ್ಕಾರ ಭರಿಸುವುದಾಗಿ ಪ್ರಕಟಿಸಿದ್ದರು. ಅಂತೆಯೇ ಶಿವಮೊಗ್ಗ ಜಿಲ್ಲೆಯಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಅಲ್ಲಿಯ ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತ ಬಿಲ್‌ ಪಾವತಿ ಮಾಡುತ್ತಿದೆ. ಆದರೆ, ಉತ್ತರಕನ್ನಡ ಜಿಲ್ಲೆಯಲ್ಲಿ ಮಾತ್ರ ಈ ಆದೇಶ ಇನ್ನೂ ಜಾರಿಗೆ ಬಂದಿಲ್ಲ. ಈಗಾಗಲೇ ಆಸ್ಪತ್ರೆಯಿಂದ ಗುಣಮುಖರಾಗಿ ಬಂದ ಜಿಲ್ಲೆಯ ಹಲವು ಮಂಗನ ಕಾಯಿಲೆ ಪೀಡಿತರು ಬಿಲ್‌ ಹಿಡಿದುಕೊಂಡು ಓಡಾಡುತ್ತಿದ್ದು ಸಾಲ ಮಾಡಿ ಮನೆ, ಬಂಗಾರ ಒತ್ತೆಯಿಟ್ಟು ಗುಣವಾಗಿ ಬಂದಿದ್ದೇವೆ. ಮುಖ್ಯಮಂತ್ರಿಗಳು ಹೇಳಿದಂತೆ ನಮ್ಮ ಆಸ್ಪತ್ರೆ ವೆಚ್ಚವನ್ನು ಮರಳಿ ಕೊಡಿಸಿ ಎಂದು ವಿನಂತಿಸುತ್ತಿದ್ದಾರೆ.

ಹಣ ಸಿಗಲಿಲ್ಲ: ಇತ್ತೀಚೆಗೆ ಆರೋಗ್ಯ ಕರ್ನಾಟಕದಲ್ಲಿ ಮಂಗನ ಕಾಯಿಲೆ ಚಿಕಿತ್ಸೆಯನ್ನು ಸೇರಿಸಲಾಗಿದೆ. ಈ ಹಿಂದೆ ಚಿಕಿತ್ಸೆ ಪಡೆದವರಿಗೆ ಇದರ ಪ್ರಯೋಜನ ಸಿಗಲಿಲ್ಲ. ಆದರೆ ಇದರಲ್ಲಿ ಮಕ್ಕಳನ್ನು ಸೇರಿಸಲಾಗಿಲ್ಲ. ಹೊನ್ನಾವರ ಸಂಶಿಯ ದೀಕ್ಷಾ ಮರಾಠಿ (4), ಮೇಘಾ ಮರಾಠಿ (9) ಎಂಬ ಇಬ್ಬರು ಮಕ್ಕಳು ಮಣಿಪಾಲದಲ್ಲಿ ಗುಣಮುಖರಾಗಿದ್ದು ಅವರಿಗೆ ಹಣ ಸಿಗಲಿಲ್ಲ. ಈ ಮಕ್ಕಳ ತಾಯಿ ಹೊನ್ನಾವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಖಾಸಗಿ ಆಸ್ಪತ್ರೆಯವರು ಹಣ ತುಂಬದೆ ಗುಣಮುಖರಾದವರನ್ನು ಬಿಡುತ್ತಿಲ್ಲ. ಈ ಸಮಸ್ಯೆಯನ್ನು ಮುಖ್ಯಮಂತ್ರಿಗಳು ತಕ್ಷಣ ಪರಿಹರಿಸಬೇಕಾಗಿದೆ.

ಕಾಯಿಲೆ ಎಲ್ಲಿ? ಎಷ್ಟು? :  ಹೊನ್ನಾವರ, ಸಿದ್ದಾಪುರ, ಭಟ್ಕಳ, ಕುಮಟಾ, ಅಂಕೋಲಾಗಳಲ್ಲಿ ಗುರುತಿಸಲ್ಪಟ್ಟಿರುವ ಮಂಗನ ಕಾಯಿಲೆ ಈ ವರ್ಷ 47 ಜನರನ್ನು ಕಾಡಿದೆ. ಫೆಬ್ರವರಿಯಲ್ಲಿ 1 ಸಾವು ಸಂಭವಿಸಿದೆ. 14ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದವರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಹೊನ್ನಾವರ 12, ಸಿದ್ದಾಪುರ 32, ಭಟ್ಕಳ, ಕುಮಟಾ, ಅಂಕೋಲಾಗಳಲ್ಲಿ ತಲಾ ಒಬ್ಬರು ಮಂಗನ ಕಾಯಿಲೆ ಪೀಡಿತರಾಗಿದ್ದಾರೆ. 7 ಜನ ಮಣಿಪಾಲ ಆಸ್ಪತ್ರೆಯಲ್ಲಿ, 5 ಜನ ಹೊನ್ನಾವರ ಸರ್ಕಾರಿ ಆಸ್ಪತೆಯಲ್ಲಿ, ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದಾಪುರದ 6 ಪ್ರಾಥಮಿಕ ಕೇಂದ್ರದ ವ್ಯಾಪ್ತಿಯಲ್ಲಿ, ಹೊನ್ನಾವರದ ಗೇರಸೊಪ್ಪಾ, ಸಂಶಿ, ಖರ್ವಾ 3 ಪ್ರಾಥಮಿಕ ಕೇಂದ್ರದ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆ ಹರಡಿದೆ.

ಮಂಗನ ಕಾಯಿಲೆ ಮತ್ತುಆರೋಗ್ಯ ಕರ್ನಾಟಕ ವಿಷಯವಾಗಿ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಮಣಿಪಾಲದಲ್ಲಿರುವ ಮಕ್ಕಳ ಚಿಕಿತ್ಸಾ ವೆಚ್ಚ ಭರಿಸಲಾಗುವುದು ಎಂದು ಹೇಳಿದ್ದಾರೆ. ಸುನೀಲ ನಾಯ್ಕ, ಶಾಸಕ

 

-ಜೀಯು ಹೊನ್ನಾವರ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.