ಉ.ಕ.ದಲ್ಲಿ ಬಿಜೆಪಿ ಗೆಲುವಿಗೆ ರಹದಾರಿ
Team Udayavani, May 14, 2019, 4:04 PM IST
ಶಿರಸಿ: ಕೆಲವು ಕಡೆ ಅಭ್ಯರ್ಥಿಗಳು ಚುನಾವಣೆ ನಡೆಸಿದರೆ, ಉತ್ತರ ಕನ್ನಡದಲ್ಲಿ ಕಾರ್ಯಕರ್ತರು ಚುನಾವಣೆ ನಡೆಸುತ್ತಿದ್ದಾರೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಿಲ್ಲಿಸದೇ ಬಿಜೆಪಿ ಗೆಲುವಿಗೆ ರಹದಾರಿ ಮಾಡಿಕೊಟಿದೆ ಎಂದು ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದರು.
ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ನಗರದ ರೋಟರಿ ಸೆಂಟರ್ನಲ್ಲಿ ಸೋಮವಾರ ನಡೆದ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದ ಅವಲೋಕನ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಹಾಕದೇ ಜೆಡಿಎಸ್ಗೆ ಲೋಕಸಭಾ ಕ್ಷೇತ್ರ ಬಿಟ್ಟುಕೊಟ್ಟಿದ್ದು ಸುಲಭದಲ್ಲಿ ಆಗಿಲ್ಲ. ತೆರೆಯ ಹಿಂದೆ ಸಾಕಷ್ಟು ಕೆಲಸಗಳಾಗಿವೆ. ರಾಜಕಾರಣದಲ್ಲಿ ಯಾವುದೂ ಆಕಸ್ಮಿಕವಲ್ಲ. ತೆರೆಯ ಹಿಂದೆ ಹಾಗೂ ಮುಂದೆ ಸಾಕಷ್ಟು ಬೆಳವಣಿಗೆಗಳು ನಡೆದಿರುತ್ತವೆ ಎಂದ ಅವರು, ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸದೇ ಜೆಡಿಎಸ್ ಬಿಟ್ಟುಕೊಡುತ್ತದೆ ಎಂದು ಆರು ತಿಂಗಳ ಮೊದಲೇ ಹೇಳಿದ್ದೆ. ಅದರಂತೆ ಆಗಿದೆ. ಗೆಲುವಿಗೆ ಒನ್ವೇ ಮಾಡಿಕೊಟ್ಟಿದ್ದಾರೆ. ಇದಕ್ಕೆ ಕಾರಣರಾದವರಿಗೆ ಅಭಿನಂದಿಸುತ್ತೇನೆ ಎಂದೂ ಹೇಳಿದರು.
ಪಕ್ಷ ತನ್ನನ್ನು ನಿಲ್ಲಿಸಿದೆ. ನನಗೆ ಓಟು ಕೊಡಿ, ಗೆಲ್ಲಿಸಿ ಎಂದು ಈವರೆಗೂ ಕೇಳಿಲ್ಲ. ರಾಜಕಾರಣದಲ್ಲಿ ಇರುವವರೆಗೂ ಹೀಗೆ ಕೇಳಲ್ಲ. ನಮ್ಮ ಗುರಿ ಏನಿದ್ದರೂ ಭಗವಾ ಧ್ವಜಕ್ಕೆ ದೇಶದಲ್ಲಷ್ಟೇ ಅಲ್ಲದೇ ಜಗತ್ತಿನ ಮೂಲೆಮೂಲೆಯಲ್ಲೂ ಗೌರವ ಸಿಗಬೇಕು ಎಂಬುದು ಎಂದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರು ನಡೆಸಿದ ಬಿರುಸಿನ ಪ್ರಚಾರದಂತೆ ಈ ಚುನಾವಣೆಯಲ್ಲೂ ಕೈಗೊಂಡಿದ್ದರೆ ನಮ್ಮ ಎದುರಾಳಿ ಅಭ್ಯರ್ಥಿ ಇಡಗಂಟು ದೊರೆಯುವುದು ಅನುಮಾನವಿತ್ತು. ಆದರೆ ಒಂದಾನುವೇಳೆ ಈ ಬಾರಿ ಆ ಅಭ್ಯರ್ಥಿಗೆ ಇಡಗಂಟು ಸಿಕ್ಕಿದರೆ ಅದು ನಮ್ಮ ಅತಿಯಾದ ಆತ್ಮವಿಶ್ವಾಸ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ಬಿಜೆಪಿ ಪ್ರಮುಖರಾದ ಗಣೇಶ ಸಣ್ಣಲಿಂಗಣ್ಣನವರ, ರೇಖಾ ಹೆಗಡೆ, ನಂದನ ಸಾಗರ, ಉಷಾ ಹೆಗಡೆ, ಕೃಷ್ಣ ಎಸಳೆ, ಚಂದ್ರು ಎಸಳೆ, ಆರ್.ವಿ. ಹೆಗಡೆ, ಗಣಪತಿ ನಾಯ್ಕ, ರಿತೇಶ, ರಮಾಕಾಂತ ಭಟ್ಟ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!