![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಉ.ಕ.ದಲ್ಲಿ ಬಿಜೆಪಿ ಗೆಲುವಿಗೆ ರಹದಾರಿ
Team Udayavani, May 14, 2019, 4:04 PM IST
![nc-4](https://www.udayavani.com/wp-content/uploads/2019/05/nc-4-4-620x258.jpg)
ಶಿರಸಿ: ಕೆಲವು ಕಡೆ ಅಭ್ಯರ್ಥಿಗಳು ಚುನಾವಣೆ ನಡೆಸಿದರೆ, ಉತ್ತರ ಕನ್ನಡದಲ್ಲಿ ಕಾರ್ಯಕರ್ತರು ಚುನಾವಣೆ ನಡೆಸುತ್ತಿದ್ದಾರೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಿಲ್ಲಿಸದೇ ಬಿಜೆಪಿ ಗೆಲುವಿಗೆ ರಹದಾರಿ ಮಾಡಿಕೊಟಿದೆ ಎಂದು ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದರು.
ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ನಗರದ ರೋಟರಿ ಸೆಂಟರ್ನಲ್ಲಿ ಸೋಮವಾರ ನಡೆದ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದ ಅವಲೋಕನ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಹಾಕದೇ ಜೆಡಿಎಸ್ಗೆ ಲೋಕಸಭಾ ಕ್ಷೇತ್ರ ಬಿಟ್ಟುಕೊಟ್ಟಿದ್ದು ಸುಲಭದಲ್ಲಿ ಆಗಿಲ್ಲ. ತೆರೆಯ ಹಿಂದೆ ಸಾಕಷ್ಟು ಕೆಲಸಗಳಾಗಿವೆ. ರಾಜಕಾರಣದಲ್ಲಿ ಯಾವುದೂ ಆಕಸ್ಮಿಕವಲ್ಲ. ತೆರೆಯ ಹಿಂದೆ ಹಾಗೂ ಮುಂದೆ ಸಾಕಷ್ಟು ಬೆಳವಣಿಗೆಗಳು ನಡೆದಿರುತ್ತವೆ ಎಂದ ಅವರು, ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸದೇ ಜೆಡಿಎಸ್ ಬಿಟ್ಟುಕೊಡುತ್ತದೆ ಎಂದು ಆರು ತಿಂಗಳ ಮೊದಲೇ ಹೇಳಿದ್ದೆ. ಅದರಂತೆ ಆಗಿದೆ. ಗೆಲುವಿಗೆ ಒನ್ವೇ ಮಾಡಿಕೊಟ್ಟಿದ್ದಾರೆ. ಇದಕ್ಕೆ ಕಾರಣರಾದವರಿಗೆ ಅಭಿನಂದಿಸುತ್ತೇನೆ ಎಂದೂ ಹೇಳಿದರು.
ಪಕ್ಷ ತನ್ನನ್ನು ನಿಲ್ಲಿಸಿದೆ. ನನಗೆ ಓಟು ಕೊಡಿ, ಗೆಲ್ಲಿಸಿ ಎಂದು ಈವರೆಗೂ ಕೇಳಿಲ್ಲ. ರಾಜಕಾರಣದಲ್ಲಿ ಇರುವವರೆಗೂ ಹೀಗೆ ಕೇಳಲ್ಲ. ನಮ್ಮ ಗುರಿ ಏನಿದ್ದರೂ ಭಗವಾ ಧ್ವಜಕ್ಕೆ ದೇಶದಲ್ಲಷ್ಟೇ ಅಲ್ಲದೇ ಜಗತ್ತಿನ ಮೂಲೆಮೂಲೆಯಲ್ಲೂ ಗೌರವ ಸಿಗಬೇಕು ಎಂಬುದು ಎಂದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರು ನಡೆಸಿದ ಬಿರುಸಿನ ಪ್ರಚಾರದಂತೆ ಈ ಚುನಾವಣೆಯಲ್ಲೂ ಕೈಗೊಂಡಿದ್ದರೆ ನಮ್ಮ ಎದುರಾಳಿ ಅಭ್ಯರ್ಥಿ ಇಡಗಂಟು ದೊರೆಯುವುದು ಅನುಮಾನವಿತ್ತು. ಆದರೆ ಒಂದಾನುವೇಳೆ ಈ ಬಾರಿ ಆ ಅಭ್ಯರ್ಥಿಗೆ ಇಡಗಂಟು ಸಿಕ್ಕಿದರೆ ಅದು ನಮ್ಮ ಅತಿಯಾದ ಆತ್ಮವಿಶ್ವಾಸ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ಬಿಜೆಪಿ ಪ್ರಮುಖರಾದ ಗಣೇಶ ಸಣ್ಣಲಿಂಗಣ್ಣನವರ, ರೇಖಾ ಹೆಗಡೆ, ನಂದನ ಸಾಗರ, ಉಷಾ ಹೆಗಡೆ, ಕೃಷ್ಣ ಎಸಳೆ, ಚಂದ್ರು ಎಸಳೆ, ಆರ್.ವಿ. ಹೆಗಡೆ, ಗಣಪತಿ ನಾಯ್ಕ, ರಿತೇಶ, ರಮಾಕಾಂತ ಭಟ್ಟ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shirur landslide; Green signal for National highway traffic in three or four days?](https://www.udayavani.com/wp-content/uploads/2024/07/1-27-150x83.jpg)
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
![Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ](https://www.udayavani.com/wp-content/uploads/2024/07/shiruu-150x83.jpg)
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
![1-ccc-aa](https://www.udayavani.com/wp-content/uploads/2024/07/1-ccc-aa-150x94.jpg)
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
![1–eewr-aa-aa](https://www.udayavani.com/wp-content/uploads/2024/07/1-eewr-aa-aa-150x91.jpg)
Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು
![1–eewr-aa](https://www.udayavani.com/wp-content/uploads/2024/07/1-eewr-aa-150x89.jpg)
Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್ ನಂಬಿಯಾರ್
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.