ಸಮಾಜ ತಿದ್ದುವಲ್ಲಿ ಪತ್ರಿಕೆ ಪಾತ್ರ ಹಿರಿದು

•ಸಾಧಕ ಪತ್ರಕರ್ತರು-ಪತ್ರಿಕಾ ವಿತರಕರಿಗೆ ಸನ್ಮಾನ •ಪತ್ರಿಕಾ ರಂಗದ ಸೇವೆ ಪರಿಗಣಿಸಿ ಗೌರವ

Team Udayavani, Jul 29, 2019, 9:25 AM IST

uk-tdy-1

ಯಲ್ಲಾಪುರ: ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪದ್ಮಾಕರ ಪಾಯ್ದೆ ದಂಪತಿ ಹಾಗೂ ಪತ್ರಿಕಾ ವಿತರಕ ಮುರಳಿಧರ ಹೆಗಡೆ ಅವರನ್ನು ಸನ್ಮಾನಿಸಲಾಯಿತು.

ಯಲ್ಲಾಪುರ: ಸಮಾಜದ ಬಗ್ಗೆ ಕಳಕಳಿ ಹೊಂದಿದ ಪತ್ರಕರ್ತ ಸೂಕ್ಷ್ಮ ಮನೋಭಾವ ಹೊಂದಿರುವ ಮೂಲಕ ಪ್ರತಿಯೊಂದನ್ನೂ ವಿಮರ್ಶಾತ್ಮಕವಾಗಿ ಗ್ರಹಿಸಿ ಸ್ವೀಕರಿಸುವ ಮನೋಭಾವದ ಪ್ರವೃತ್ತಿಯನ್ನು ಹೊಂದಿರಬೇಕು. ತನ್ನಿಚ್ಚೆ ಬಿಂಬಿಸದೇ ಸಮಾಜಮುಖೀ ವಿಚಾರಧಾರೆ ಆತನದ್ದಾಗಿರಬೇಕು ಎಂದು ಹಿರಿಯ ರಂಗಕರ್ಮಿ ರಂಗಸಮೂಹದ ಅಧ್ಯಕ್ಷ ರಾಮಕೃಷ್ಣ ಧುಂಡಿ ಹೇಳಿದರು.

ರವಿವಾರ ತಾಲೂಕಿನ ಮಂಚಿಕೇರಿಯ ಉಮಾಶಂಕರ ಆವಾರದದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಗೌರವ ಸಂಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ ಹಾಗೂ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸಿದ ಪದ್ಮಾಕರ ಫಾಯ್ದೆ ಇಂದಿನ-ಮುಂದಿನ ಪತ್ರಕರ್ತರಿಗೆ ಆದರ್ಶಪ್ರಾಯರಾಗಿದ್ದಾರೆ. ಇಳಿವಯಸ್ಸಿನ ಕಷ್ಟವನ್ನರಿತ ಸಂಘಟನೆ ಅವರ ಮನೆಯಲ್ಲಿಯೇ ಸನ್ಮಾನಿಸುವ ಮೂಲಕ ಔಚಿತ್ಯಪೂರ್ಣ ಕಾರ್ಯಕ್ರಮ ಏರ್ಪಡಿಸಿರುವುದು ಶ್ಲಾಘನೀಯ ಎಂದರು.

ಹಿರಿಯ ಪತ್ರಕರ್ತ, ನಿವೃತ್ತ ಶಿಕ್ಷಕ ಪದ್ಮಾಕರ ಫಾಯ್ದೆ ಹಾಗೂ ಪತ್ನಿ ಜಯಶ್ರೀ ದಂಪತಿಯನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಉದಯವಾಣಿ ಪತ್ರಿಕಾ ವಿತರಕ ಮುರಳಿಧರ ಹೆಗಡೆ ಅವರನ್ನು ಗೌರವಿಸಲಾಯಿತು. ಭೈರುಂಬೆಯ ಪತ್ರಿಕಾ ವಿತರಕ ಪರಮಾನಂದ ಹೆಗಡೆ ಅವರು ಪದ್ಮಾಕರ ಫಾಯ್ದೆ ದಂಪತಿಯನ್ನು ಇದೇ ಸಂದರ್ಭದಲ್ಲಿ ಗೌರವಿಸಿದರು.

ಸನ್ಮಾನ ಸ್ವೀಕರಿಸಿದ ಪದ್ಮಾಕರ ಫಾಯ್ದೆ ಮಾತನಾಡಿ, ತಾವು ಕಳೆದ ಹಲವು ವರ್ಷಗಳಿಂದ ಶಿಕ್ಷಕ ವೃತ್ತಿ ಹಾಗೂ ಪತ್ರಿಕಾ ರಂಗದ ಜೊತೆಗೆ ನಾಣ್ಯ, ಅಂಚೆಚೀಟಿ, ಚಿತ್ರಗಳ ಸಂಗ್ರಹವನ್ನೂ ಹವ್ಯಾಸವಾಗಿ ಬೆಳೆಸಿಕೊಂಡು ಬಂದಿದ್ದೇನೆ. ಇವುಗಳ ಸಂಗ್ರಹ ದೊಡ್ಡ ಪ್ರಮಾಣದಲ್ಲಿ ತಮ್ಮಲ್ಲಿದ್ದು, ಅದನ್ನು ಪ್ರದರ್ಶಿಸುವ, ಸಂರಕ್ಷಿಸುವುದಕ್ಕೆ ಅವಕಾಶ ಸಿಗುವಂತಾಗಬೇಕು. ಈ ಹವ್ಯಾಸ ಮತ್ತು ಸಂಗ್ರಹ ನನ್ನೊಂದಿಗೆ ಕಳೆದು ಹೋಗಕೂಡದು ಎಂದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನರಸಿಂಹ ಸಾತೊಡ್ಡಿ ಮಾತನಾಡಿ, ಕೆಲ ಆದರ್ಶಗಳು, ಆದರ್ಶವ್ಯಕ್ತಿಗಳು ನಮ್ಮೆದುರಿಗಿದ್ದರೂ ನಾವು ಲಕ್ಷಿಸುವುದಿಲ್ಲ. ಅಂಚೆ ಕಾರ್ಡ್‌ಪತ್ರ ಮತ್ತು ಪತ್ರಿಕಾ ವರದಿ ಕಟಿಂಗ್ಸ್‌ ಮೂಲಕ ವ್ಯವಸ್ಥೆ ಸರಿಪಡಿಸುವ ಕಾಯಕವನ್ನು ಮಾಡಿದ್ದರು ಎಂದ ಅವರು ಇವರ ಬದುಕು ಮತ್ತು ಹವ್ಯಾಸ ಮುಂದಿನವರಿಗೆ ಮಾದರಿಯಾಗಬೇಕು ಎಂದರು.

ಬರಹಗಾರ, ಕವಿ ಗಣಪತಿ ಬಾಳೆಗದ್ದೆ, ಸಹಕಾರಿ ರಾಘವೇಂದ್ರ ಭಟ್ಟ ಹಾಸಣಗಿ, ಡಾ| ಪ್ರಸನ್ನ ಫಾಯ್ದೆ ಸಾಂದರ್ಭಿಕವಾಗಿ ಮಾತನಾಡಿದರು. ಶಿಕ್ಷಕ ಪ್ರವೀಣ ಫಾಯ್ದೆ, ಜಲಸೇವಕ ಸುಬ್ರಾಯ ಮಂಜಾ ನಾಯ್ಕ ಮಂಚಿಕೇರಿ ಇದ್ದರು.

ಪತ್ರಕರ್ತ ಸುಬ್ರಾಯ ಬಿದ್ರೆಮನೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಧರ ಅಣಲಗಾರ, ಗಣಪತಿ ಹಾಸ್ಪುರ ಸನ್ಮಾನಪತ್ರ ವಾಚಿಸಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರ್ಯದರ್ಶಿ ದತ್ತಾತ್ರೇಯ ಕಣ್ಣಿಪಾಲ ನಿರ್ವಹಿಸಿದರು. ಸದಸ್ಯ ಕೆ.ಎಸ್‌. ಭಟ್ಟ ಆನಗೋಡ ವಂದಿಸಿದರು.

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.