ಪುರಸಭೆಗೆ ಮೀನುಗಾರ ಮಹಿಳೆಯರ ಮುತ್ತಿಗೆ

ಹಳೇ ಮೀನು ಮಾರುಕಟ್ಟೆ ಸ್ವಚ್ಛಗೊಳಿಸದೆ ಕಸದ ರಾಶಿ ಹಾಕಿದ್ದಕ್ಕೆ ಆಕ್ರೋಶ

Team Udayavani, Apr 7, 2022, 3:33 PM IST

21

ಭಟ್ಕಳ: ಪುರಸಭೆಯ ಹಳೇ ಮೀನು ಮಾರುಕಟ್ಟೆಯಲ್ಲಿ ಕಸವನ್ನು ರಾಶಿ ಹಾಕಿದ್ದಾರೆ. ಮೀನು ಮಾರಾಟ ಮಾಡಲು ತೊಂದರೆ ಕೊಡುವ ಉದ್ದೇಶದಿಂದಲೇ ಸ್ವಚ್ಛತೆ ಮಾಡಿಲ್ಲ ಎಂದು ದೂರಿ ನೂರಾರು ಮಹಿಳೆಯರು ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಬುಧವಾರ ಮೀನು ಮಾರಾಟಕ್ಕೆ ಬಂದ ಮಹಿಳೆಯರು ನೋಡುವಾಗ ಹಳೇ ಮೀನು ಮಾರುಕಟ್ಟೆಯಲ್ಲಿ ಹೊರಗಿನಿಂದ ಕಸ ತುಂಬಿದ್ದಲ್ಲದೇ ಸ್ವತ್ಛ ಮಾಡಿಲ್ಲವಾಗಿತ್ತು. ಈ ಬಗ್ಗೆ ಕೇಳಿದರೆ ಪುರಸಭೆಯವರು ಹಳೇ ಮೀನು ಮಾರುಕಟ್ಟೆ ಚಾಲ್ತಿಯಲ್ಲಿಲ್ಲ, ಈಗಾಗಲೇ ಕಟ್ಟಡ ಶಿಥಿಲವಾಗಿದ್ದರಿಂದ ಮೀನು ಮಾರುಕಟ್ಟೆಯನ್ನು ಸ್ಥಳಾಂತರಿಸಲಾಗಿದೆ ಎಂದಿದ್ದರಿಂದ ತೀವ್ರ ಆಕ್ರೋಶಗೊಂಡ ಮಹಿಳೆಯರು ತಾವು ತಂದಿದ್ದ ಮೀನು ಬುಟ್ಟಿಯೊಂದಿಗೆ ಪುರಸಭಾ ಕಟ್ಟಡದ ಎದುರು ಬಂದು ಒಳಗೆ ಪ್ರವೇಶಿಸಲು ಪ್ರಯತ್ನಿಸಿದರು. ಅಷ್ಟರಲ್ಲಿ ಸ್ಥಳಕ್ಕಾಗಮಿಸಿದ್ದ ಪೊಲೀಸರು ಮಹಿಳೆಯರನ್ನು ತಡೆದು ಒಳ ಹೋಗದಂತೆ ನಿರ್ಬಂಧಿಸಿದರು.

ಇದರಿಂದ ಇನ್ನಷ್ಟ ಆಕ್ರೋಶಗೊಂಡ ಮಹಿಳೆಯರು ಪುರಸಭಾ ಎದುರಿನಲ್ಲಿಯೇ ಮೀನನ್ನು ಚೆಲ್ಲಿ ರಾದ್ದಾಂತ ಮಾಡಿದ್ದಲ್ಲದೇ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು. ಕೆಲ ಸಮಯ ಪೊಲೀಸರಿಗೂ ಮೀನು ಮಾರುವ ಮಹಿಳೆಯರಿಗೂ ಮಾತಿನ ಚಕಮಕಿ ನಡೆದು ಕೊನೆಗೂ ಅಲ್ಲಿಂದ ತೆರಳಿದರು. ಒಂದು ಹಂತದಲ್ಲಿ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರು ಮಹಿಳೆಯರ ಕೃತ್ಯಕ್ಕೆ ಆಕ್ರೋಶಗೊಂಡಿದ್ದರೂ ಸಹ ಸಮಾಧಾನದಿಂದ ಅವರನ್ನೆಲ್ಲ ಅಲ್ಲಿಂದ ಕಳುಹಿಸುವಲ್ಲಿ ಯಶಸ್ವಿಯಾದರು.

ಪುರಸಭೆ ವಿರುದ್ಧ ಆಕ್ರೋಶ: ಮೀನುಗಾರ ಮಹಿಳೆಯರು ತಮ್ಮನ್ನು ಇಲ್ಲಿಂದ ಒಕ್ಕಲೆಬ್ಬಿಸಬೇಕು ಎನ್ನುವ ಉದ್ದೇಶದಿಂದಲೇ ಪುರಸಭೆಯವರೇ ಹೊರಗಿನಿಂದ ಕಸ ತಂದು ಹಾಕಿ, ಸ್ವತ್ಛಗೊಳಿಸದೇ ತೊಂದರೆ ಕೊಡುತ್ತಿದ್ದಾರೆ. ಹೊಸ ಮೀನು ಮಾರುಕಟ್ಟೆಗೆ ಹೋಗಬೇಕೆನ್ನುವ ಉದ್ದೇಶ ಅವರದು. ನಾವು ಯಾವುದೇ ಕಾರಣಕ್ಕೂ ಹೊಸ ಮೀನು ಮಾರುಕಟ್ಟೆಗೆ ಹೋಗುವುದಿಲ್ಲ, ಇಲ್ಲಿಯೇ 70-80 ವರ್ಷದಿಂದ ಮೀನು ಮಾರಾಟ ಮಾಡುತ್ತಿದ್ದು, ಇಲ್ಲಿಯೇ ಮುಂದುವರಿಸುತ್ತೇವೆ ಎಂದು ಪಟ್ಟು ಹಿಡಿದರು.

ಕಸ ಹಾಕಿದ್ದಕ್ಕೆ ದೂರು ಸಲ್ಲಿಕೆ: ಪುರಸಭೆಯ ಹಳೆ ಮೀನು ಮಾರುಕಟ್ಟೆಯಲ್ಲಿ ಕಸ ಹಾಕಿರುವ ಕುರಿತು ಸಿ.ಸಿ. ಟಿ.ವಿ. ಫೂಟೇಜ್‌ಗಳನ್ನು ಪಡೆದು ತಪ್ಪತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು. ಮೀನುಗಾರರು ಆರೋಪಿಸಿದಂತೆ ಕಸ ಹಾಕಿದವರು ಯಾರು ಎನ್ನುವುದು ಪುರಸಭೆಗೂ ತಿಳಿಯಬೇಕು ಎಂದು ಮುಖ್ಯಾಧಿಕಾರಿ ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಅಕ್ಕ ಪಕ್ಕದ ಸಿ.ಸಿ. ಟಿ.ವಿಗಳನ್ನು ವಿಶ್ಲೇಷಣೆ ಮಾಡಿ ಕಸ ಹಾಕಿರುವವರ ಕುರಿತು ಸೂಕ್ತ ತನಿಖೆ ನಡೆಸಿ ಎಂದೂ ತಿಳಿಸಲಾಗಿದೆ.

ಈ ಕುರಿತು ಪುರಸಭಾ ಅಧ್ಯಕ್ಷ ಪರ್ವೇಜ್‌ ಕಾಶಿಮಜಿ ಮಾತನಾಡಿ, ಹಳೇ ಮೀನು ಮಾರುಕಟ್ಟೆ ಶಿಥಿಲವಾಗಿದೆ ಎಂದು 2020ರಲ್ಲಿಯೇ ಲೋಕೋಪಯೋಗಿ ಇಲಾಖೆ ವರದಿ ನೀಡಿದ್ದು, ಅಲ್ಲಿ ಯಾವುದೇ ಜನ ವಸತಿಗೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

ಆದ್ದರಿಂದ ಎರಡು ವರ್ಷಗಳ ಹಿಂದೆಯೇ ಮೀನು ಮಾರಾಟ ಟೆಂಡರ್‌ನ್ನು ಸಹ ಹೊಸ ಮೀನು ಮಾರುಕಟ್ಟೆಯಲ್ಲಿಯೇ ಕರೆಯಲಾಗಿದೆ. ಈಗಾಗಲೇ ಮೀನು ಮಾರುಕಟ್ಟೆಯನ್ನು ತೆರವುಗೊಳಿಸುವಂತೆ ಪುರಸಭೆಗೆ ಲೋಕಾಯುಕ್ತರು ನೋಟಿಸ್‌ ನೀಡಿ ಸೂಕ್ತ ಕ್ರಮ ಕೈಗೊಳ್ಳಲು ಫೆ.10 ಗಡುವು ನೀಡಿದ್ದಾರೆ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಹಳೆ ಮೀನು ಮಾರುಕಟ್ಟೆಯಲ್ಲಿ ಮೀನು ಮಾರಾಟ ಮುಂದುವರಿಸಲು ಸಾಧ್ಯವಿಲ್ಲ. ಕಾನೂನು ತೊಡಕು ಉಂಟಾಗುತ್ತದೆ. ಮುಂದೆ ಕಟ್ಟಡ ಕುಸಿದು ಏನಾದರೂ ಅನಾಹುತವಾದರೆ ಯಾರು ಹೊಣೆ? ಎಂದ ಅವರು, ಹೊಸ ಮೀನು ಮಾರುಕಟ್ಟೆಯಲ್ಲಿ ಯಾವುದೇ ಸೌಲಭ್ಯ ನೀಡಲು ನಾವು ಬದ್ಧರಿದ್ದೇವೆ. ಏಪ್ರಿಲ್‌ ಒಂದು ತಿಂಗಳು ಯಾವುದೇ ಶುಲ್ಕ ವಸೂಲಿಯನ್ನೂ ಮಾಡುವುದಿಲ್ಲ. ಅಲ್ಲಿಯೇ ವ್ಯಾಪಾರ ಆರಂಭಿಸುವಂತೆ ಕೋರಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.