ಕೋಡಿ ಕಡಿದ ನದಿಬಾಗ ಗ್ರಾಮಸ್ಥರು

ಸಮುದ್ರದ ಒಡಲು ಸೇರಿದ ಹಳ್ಳದ ಹಿನ್ನೀರು ; ದೂರವಾದ ನೆರೆ ಆತಂಕ ; ಹಬ್ಬದಂತೆ ಆಚರಣೆ

Team Udayavani, Jun 23, 2022, 5:39 PM IST

28

ಅಂಕೋಲಾ: ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪೂಜಗೇರಿ ನದಿಬಾಗ ಹಳ್ಳದ ಹಿನ್ನೀರು ಏರುತ್ತಿದ್ದು, ಹಿನ್ನೀರಿನ ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತಿರುವ ಕಾರಣ ನದಿಬಾಗ ಗ್ರಾಮಸ್ಥರೆಲ್ಲರೂ ಹಳ್ಳ ಸಮುದ್ರ ಸೇರುವ ಕೋಡಿಯನ್ನು ಕಡಿದು ಹಳ್ಳದ ಹಿನ್ನೀರನ್ನು ಸಮುದ್ರದ ಒಡಲಿಗೆ ಸೇರಲು ದಾರಿ ಮಾಡಿಕೊಟ್ಟಿದ್ದಾರೆ.

ತಾಲೂಕಿನ ನದಿಬಾಗ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಗ್ರಾಮದ ಯುವಕರು, ಹಿರಿಯರು ಕೂಡಿಕೊಂಡು ಕೋಡಿ ಕಡಿಯುವ ಕಾಯಕ ಮಾಡಿದ್ದಾರೆ. ಬೇಸಿಗೆಯ ಸಂದರ್ಭದಲ್ಲಿ ಹಳ್ಳ ಹರಿದು ಸಮುದ್ರ ಸೇರುವ ಕೋಡಿಯು ಅಲೆಯ ರಭಸಕ್ಕೆ ಉಸುಕಿನಿಂದ ಮುಚ್ಚಿ ಹೋಗುತ್ತದೆ. ಅದನ್ನು ಮಳೆಗಾಲದಲ್ಲಿ ಹಳ್ಳದ ಹಿನ್ನೀರಿನ ಪ್ರದೇಶವಾದ ಕೃಷಿ ಜಮೀನು ಹಾಗೂ ತಟದಲ್ಲಿರುವ ಮನೆಗಳಿಗೆಲ್ಲ ನೀರು ಒಳನುಗ್ಗುತ್ತದೆ. ವಂದಿಗೆ, ಹೊಸಗದ್ದೆ, ಬೆಟ್ಟದ ಮೇಲಿನಿಂದ ಮಳೆಗಾಲದಲ್ಲಿ ಹರಿದು ಬರುವ ನೀರು ಇದೆ ಹಳ್ಳದಿಂದ ಸಮುದ್ರ ಸೇರಬೇಕು.

ಆರಂಭದ ಮಳೆಗೆ ಹಳ್ಳವು ತುಂಬುತ್ತಿರುವುದನ್ನು ಕಂಡು ನದಿಬಾಗ ಗ್ರಾಮದ ಗ್ರಾಮಸ್ಥರು ಇದು ಒಂದು ಹಬ್ಬದಂತೆ ನೈಸರ್ಗಿಕವಾಗಿ ಉಸುಕಿನಿಂದ ತುಂಬಿಕೊಂಡಿರುವ ಕೋಡಿ ಕಡಿಯುವ ಕಾಯಕದಲ್ಲಿ ತೊಡಗಿಕೊಳ್ಳುತ್ತಾರೆ. ಕೋಡಿಯಲ್ಲಿರುವ ಉಸುಕನ್ನು ತೆರವು ಮಾಡಲು ಸುಮಾರು ಹತ್ತು ಗಂಟೆ ಕೆಲಸವನ್ನು ಮಾಡಿ ಹಳ್ಳದ ಹಿನ್ನೀರನ್ನು ಸಮುದ್ರದ ಒಡಲಿಗೆ ಸೇರಿಸುತ್ತಾರೆ.

ಸ್ಥಳೀಯ ಬೊಬ್ರವಾಡಾ ಗ್ರಾಪಂ ಕೋಡಿ ಕಡಿಯುವುದಕ್ಕೆ ಸಹಾಯಧನವಾಗಿ ಹತ್ತು ಸಾವಿರ ರೂ. ಕೊಡುವುದು ಬಿಟ್ಟರೆ ಸರಕಾರದಿಂದ ಇನ್ನಾವುದೆ ಅನುದಾನ ಬರುತ್ತಿಲ್ಲ. ಇದು ನಾಲ್ಕು ಗ್ರಾಪಂ ಅವರಿಗೆ ಸಂಬಂಧಿಸಿದ್ದಾದರೂ ಒಂದೇ ಗ್ರಾ.ಪಂ ಮಾತ್ರ ಇದರಲ್ಲಿ ಭಾಗಿಯಾಗುತ್ತದೆ. ಕೋಡಿ ಕಡಿಯುವುದು ಒಂದು ಅಪಾಯದ ಕೆಲಸವಾದರೂ ಇಲ್ಲಿಯ ಗ್ರಾಮಸ್ಥರು ಅದನ್ನು ವರ್ಷಕ್ಕೊಮ್ಮೆ ಉತ್ಸಾಹದಿಂದ ಮಾಡಿ ಜನರ ಆತಂಕ ದೂರ ಮಾಡುತ್ತಾರೆ.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.