Sirsi ಬಂಗಾರದ ಅಂಗಡಿಯಲ್ಲಿ ಕಳ್ಳತನ; ಮೂವರು ಮಹಿಳೆಯರ ಬಂಧನ
Team Udayavani, Jun 16, 2023, 8:13 PM IST
ಶಿರಸಿ: ಇಲ್ಲಿನ ಬಂಗಾರದ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಆಭರಣ ದೋಚಿದ ಘಟನೆ ನಡೆದ 24 ಗಂಟೆಯೊಳಗೆ ಮೂವರು ಮಹಿಳೆಯರನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮ ಜರುಗಿಸಿದ ಘಟನೆ ನಡೆದಿದೆ.
ನಗರದ ಉರ್ದು ಶಾಲಾ ಹಿಂದಿನ ಮಾರುಕಟ್ಟೆ ರಸ್ತೆಯ ಓಂಕಾರ್ ಜ್ಯುವೆಲ್ಲರಿ ಅಂಗಡಿಯಲ್ಲಿ ಸುಮಾರು 93ಸಾವಿರ ರೂ ಮೌಲ್ಯದ ಚಿನ್ನಾಭರಣ ಗಳನ್ನು ಕದ್ದು ಪರಾರಿಯಾಗಿದ್ದ ಮೂವರು ಚೋರಿಯರು ಕಳ್ಳತನವಾದ ಚಿನ್ನಾಭರಣಗಳ ಸಹಿತ ಕಂಬಿ ಎಣಿಸುತ್ತಿದ್ದಾರೆ. ಶಿರಸಿ ನಗರ ಠಾಣೆ ಪೊಲೀಸರು ಆರೋಪಿತರಿಗೆ ಕಾನೂನು ಕೋಳ ತೊಡಿಸಿದ್ದಾರೆ.
ಅಡುಗೆ ವೃತ್ತಿಯ ಗದಗದ ಸಂಗೀತಾ ಯಲ್ಲೋಸಾ ಬಾಕಳೆ(42), ಹುಬ್ಬಳ್ಳಿಯ ಸೀರೆ ವ್ಯಾಪಾರಿ ರಾಜೇಶ್ವರಿ ಬಾಂಡಗೇ (48) ಹಾಗೂ ಗದಗದ ಟೇಲರ್ ಶೋಭಾಬಾಯಿ ಲಕ್ಷಮಣಸಾ ಜಿತೂರಿ (68)ಬಂಧಿತ ಆರೋಪಿಗಳಾಗಿದ್ದಾರೆ.
ಜೂನ್ 15ರಂದು ವಾಮನ ನಾಗೇಶ್ ರಾಯ್ಕರ್ ಎಂಬುವವರಿಗೆ ಸೇರಿದ ಓಂಕಾರ್ ಜ್ಯುವೆಲ್ಲರಿ ಅಂಗಡಿಗೆ ಬಂದು ಚಿನ್ನಾಭರಣ ಗಳನ್ನು ಕದ್ದು ಪರಾರಿಯಾಗಿದ್ದರು.ಕಳ್ಳತನದ ದೃಶ್ಯಾವಳಿಗಳು ಸಿ ಸಿ ಕ್ಯಾಮೆರಾ ದಲ್ಲಿ ಸೆರೆ ಯಾಗಿತ್ತು. ದೃಶ್ಯಾವಳಿಗಳನ್ನು ಆಧಾರವಾಗಿಟ್ಟುಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಶಿರಸಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ