ಆಧಾರ್‌ಯಿಲ್ಲದೆ ಹಣ ಜಮಾವಣೆಯಿಲ್ಲ


Team Udayavani, Nov 22, 2019, 1:17 PM IST

uk-tdy-1

ಜೋಯಿಡಾ: ಕಾತೇಲಿ ಗ್ರಾಪಂ ವ್ಯಾಪ್ತಿಯ ಡೇರಿಯಾ ಗ್ರಾಮಕ್ಕೆ ರಾಜ್ಯ ಕೃಷಿ ಇಲಾಖೆ ಆಯುಕ್ತ ಬ್ರಿಜೇಷಕುಮಾರ ದೀಕ್ಷಿತ ಭೇಟಿ ನೀಡಿ ಅಲ್ಲಿನ ರೈತರಿಗೆ ಕೃಷಿ ಸನ್ಮಾನ ಯೋಜನೆಯ ಮಾಹಿತಿ ನೀಡಿದರು.

ನಂತರ ಇಲ್ಲಿನ ರೈತರ ಶೂನ್ಯ ಬಂಡವಾಳ ಕೃಷಿ ಪದ್ಧತಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಡಿನ ಮಧ್ಯದ ಗ್ರಾಮವಾದ ಡೇರಿಯಾದ ಕಾಡಿನಲ್ಲಿ ವಾಸಿಸುವ ಜನರಿಗೆ ಪ್ರಧಾನ ಮಂತ್ರಿ ಕೃಷಿ ಸನ್ಮಾನ ಯೋಜನೆ ಬಗ್ಗೆ ಅರಿವು ಇದೆಯೋಇಲ್ಲವೋ ಎನ್ನುವ ಕುರಿತು ಹಾಗೂ ಕೃಷಿಯಲ್ಲಿನ ಹೊಸತನ ಪರಿಶೀಲಿಸುವ ಸಲುವಾಗಿ ವಿಶೇಷತಃ ಡೇರಿಯಾಕೆ ಭೇಟಿ ನೀಡಿದ್ದರೆ ಎನ್ನಲಾಗಿದೆ. ಇಲ್ಲಿಯೂ ರೈತರೊಂದಿಗೆ ಚರ್ಚಿಸಿದ ಅವರು ಪಿ.ಎಂ. ಕಿಸಾನ್‌ ಸಮ್ಮಾನ ಯೋಜನೆಯ ಲಾಭ ಪಡೆದುಕೊಳ್ಳಲು ಕರೆನೀಡಿದರು.

ರೈತರು ಪ್ರಧಾನ ಮಂತ್ರಿ ಕೃಷಿ ಸನ್ಮಾನ ಯೋಜನೆ ಲಾಭ ಒಂದೆರಡು ರೈತರನ್ನು ಹೊರತುಪಡಿಸಿ ಬಹುತೇಕರಿಗೆ ದೊರೆತಿರುವ ಬಗ್ಗೆ ಮಾಹಿತಿ ನೀಡಿದರು. ಆಗ ರೈತರಿಗೆ ಪ್ರತಿಕ್ರಿಯಿಸಿದಆಯುಕ್ತರು, ಬ್ಯಾಂಕ್‌ ಖಾತೆಗೆ ಆಧಾರ ಲಿಂಕ್‌ ಇಲ್ಲದಿರುವ ಕೆಲವರಿಗೆ ಈ ಯೋಜನೆಯ ಅನುದಾನ ಖಾತೆಗೆ ಸೇರ್ಪಡೆಗೊಂಡಿಲ್ಲ. ಆದರೆ ಇಂತಹ ರೈತರು ಯಾವುದೇ ಚಿಂತೆ ಮಾಡ  ಬೇಕಾದ ಅಗತ್ಯವಿಲ್ಲ. ನಿಮ್ಮ ಖಾತೆಗೆ ಆಧಾರ ಲಿಂಕ್‌ ಸರಿಯಾಗಿ ಜೋಡಣೆಯಾದ ನಂತರ ನಿಮಗೆ ಇದರ ಸಂಪೂರ್ಣ ಲಾಭ ದೊರೆಯಲಿದೆ. ಹಿಂದಿನ ಕಂತಿನ ಬಾಕಿ ಸಹಿತ ಖಾತೆಗೆ ಜಮಾವಣೆಗೊಳ್ಳಲಿದೆ ಎಂದರು. ಪಾರಂಪರಿಕ ಕೃಷಿ ಪದ್ಧತಿಯನ್ನು ಇನ್ನೂ ಜೀವಂತವಾಗಿಡುವ ಇಲ್ಲಿನ ರೈತರ ಪ್ರಯತ್ನ ಶ್ಲಾಘಿಸಿದರು.

ನಂದಿಗದ್ದೆ ಗ್ರಾ.ಪಂ.ಗೆ ಭೇಟಿ: ನಂತರ ತಾಲೂಕಿನ ನಂದಿಗದ್ದಾ ಗ್ರಾ.ಪಂ.ಗೆ ಭೇಟಿ ನೀಡಿ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಕಿಸಾನ ಸನ್ಮಾನ ಯೋಜನೆಯಡಿ ರೈತರ ಖಾತೆಗೆ ಜಮಾ ಆಗಬೇಕಾಗಿದ್ದ ಮೊತ್ತದ ಪರಿಶೀಲನೆ ನಡೆಸಿದರು. ಅಲ್ಲಿ ನೆರೆದ ರೈತರಿಗೆ ಈ ಯೋಜನೆಯ ಕುರಿತು ಮಾಹಿತಿ ನೀಡಿದರು. ರಾಜ್ಯದಲ್ಲಿ ಬಹಳಷ್ಟು ಜಿಲ್ಲೆಗಳಲ್ಲಿ ರೈತರಿಗೆ ಈ ಯೋಜನೆಯಿಂದ ಹಣ ದೊರೆತಿಲ್ಲ, ರೈತರ ಬ್ಯಾಂಕ್‌ ಖಾತೆಗೆ ಆಧಾರ ಲಿಂಕ್‌ ಇಲ್ಲದ ಕಾರಣ ಹಣ ಜಮಾವಣೆ ಆಗಿಲ್ಲ ಎಂದರು. ಇಂತಹ ಸಮಸ್ಯೆಗಳ ಬಗ್ಗೆ ರೈತರಿಗೆ ತಿಳಿಹೇಳಿ, ಆಧಾರಕಾರ್ಡ್‌ ಲಿಂಕ್‌ ಸರಿಯಾಗಿ ಮಾಡುವ ಮೂಲಕ ಯಾರಿಗೂ ಅನ್ಯಾಯವಾಗದಂತೆ ಕ್ರಮಕೈಗೊಳ್ಳಬೇಕಿದೆ. ಎಲ್ಲಾ ರೈತರಿಗೂ ಯೋಜನೆಯ ಲಾಭ ದೊರೆಯುವಂತಾಗಬೇಕು ಎಂದರು.

ಜಿಲ್ಲಾ ಕೃಷಿ ಇಲಾಖೆ ಅಧಿಕಾರಿ ಹೊನ್ನಪ್ಪ ಗೌಡ, ಪ್ರಮುಖರಾದ ಶಿವಕುಮಾರ, ಜೋಯಿಡಾ ಕೃಷಿ ಅಧಿಕಾರಿ ಪಿ.ಐ. ಮಾನೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ತೋಡ್ಕರ್‌, ಡೇರಿಯಾದ ಡಾ|ಜಯಾನಂದ ಡೇರೆಕರ್‌ ಹಾಗೂ ಡೇರಿಯಾ ವಾಗ್ಬಂದ, ನಂದಿಗದ್ದೆ ಪಂಚಾಯತ್‌ ವ್ಯಾಪ್ತಿ ಕೃಷಿಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.