ಟಿಕೆಟ್ ಹಂಚಿಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ: ಸಚಿವ ಹೆಗಡೆ
Team Udayavani, Apr 17, 2018, 3:00 PM IST
ಕಾರವಾರ: ಟಿಕೆಟ್ ನೀಡಿಕೆಯಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ನಾನು ಇಂಥವರಿಗೆ ಟಿಕೆಟ್ ಕೊಡಿ ಎಂದು ಪತ್ರ ಬರೆದಿಲ್ಲ. ಇದೆಲ್ಲಾ ಮಾಧ್ಯಮಗಳ ಕಪೋಲಕಲ್ಪಿತ ವರದಿ ಎಂದು ಕೇಂದ್ರ ಕೌಶಾಲ್ಯಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗಡೆ ಹೇಳಿದರು.
ಕಾರವಾರದಲ್ಲಿ ಪಕ್ಷದ ಅಭ್ಯರ್ಥಿ ಹಾಗೂ ಪದಾ ಕಾರಿಗಳು, ಪಕ್ಷದ ಪ್ರಮುಖರೊಂದಿಗೆ ಕ್ಲೋಜ್ ಡೋರ್ ಸಭೆ ನಡೆಸಿದ ಅವರು, ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ಒಂದು ಕಾಲಕ್ಕೆ ಬಿಜೆಪಿಯಿಂದ ಸ್ಪರ್ಧಿಸಲು ಅಭ್ಯರ್ಥಿಗಳನ್ನು ಹುಡುಕಬೇಕಿದ್ದ ಕಾಲವಿತ್ತು. ಈಗ ರಾಜಕೀಯದಲ್ಲಿಸ್ಪರ್ಧಿಸಲು ದಂಡೇ ಬರುತ್ತಿದೆ. ಅಭ್ಯರ್ಥಿ ಕೊರತೆ ಕಾಂಗ್ರೆಸ್ ಪಕ್ಷಕ್ಕೆ ಎದುರಾಗಿದೆ ಎಂದರು. ಪಕ್ಷಕ್ಕೆ ಸೇರಿದವರಿಗೆಲ್ಲಾ ಟಿಕೆಟ್ ನೀಡುವ ಭರವಸೆ ನೀಡಿಲ್ಲ. ಸಹಜ ಆಸೆ ಇಟ್ಟುಕೊಂಡು ಬಂದಿರುತ್ತಾರೆ. ಟಿಕೆಟ್ ಸಿಗದಿದ್ದರೆ ಪಕ್ಷಕ್ಕೆ ಕೆಲಸ ಮಾಡಬೇಕು. ಅದೇ ಬಿಜೆಪಿ ಸಿದ್ಧಾಂತ. ಟಿಕೆಟ್ ನೀಡಲೇಬೇಕೆಂದು ಕರಾರು ಹಾಕಿ ಯಾರೂ ಪಕ್ಷಕ್ಕೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು. ಕುಮಟಾ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಹೆಚ್ಚಿದ್ದಾರೆ. ಪಕ್ಷದ ಹೈಕಮಾಂಡ್ ಈ ವಿಷಯದಲ್ಲಿ ನಿರ್ಣಯಕ್ಕೆ ಬರಲಿದೆ.
ಟಿಕೆಟ್ ಕೊಟ್ಟ ನಂತರ ಎಲ್ಲರೂ ಕೆಲಸ ಮಾಡುತ್ತಾರೆ. ಕಾರವಾರವನ್ನೇ ಉದಾಹರಣೆ ತೆಗೆದುಕೊಳ್ಳಿ. ಮಹಿಳಾ ಅಭ್ಯರ್ಥಿಗೆ ಟಿಕೆಟ್ ನೀಡಿದ್ದೇವೆ. ಎಲ್ಲರೂ ಕೆಲಸ ಮಾಡುತ್ತಿದ್ದಾರೆ. ಅವರೇ ಹೆಚ್ಚು ಮತಗಳಿಂದ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿ. ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದರು.
ರೂಪಾಲಿ ನಾಯ್ಕ ಹಾಗೂ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ. ಬಿಜೆಪಿ ಜಿಲ್ಲಾ ವಕ್ತಾರ ರಾಜೇಶ್ ನಾಯಕ್, ಜಗದೀಶ್ ನಾಯಕ್, ನಯನಾ ನೀಲಾವರ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್