ಕೊಂಕಣ ರೈಲಿನಲ್ಲಿ ಬಿಗಿ ಭದ್ರತೆಗೆ ಚಿಂತನೆ

ಮೊಬೈಲ್‌-ಪರ್ಸ್‌ ಕಳ್ಳತನ, ಹಳಿಗಳ ಮೇಲಿನ ಆತ್ಮಹತ್ಯೆ ತಡೆಯುವುದು ಮುಖ್ಯ ಉದ್ದೇಶ

Team Udayavani, Jun 11, 2021, 9:30 PM IST

10bhat02

ಭಟ್ಕಳ: ರೈಲ್ವೆ ದೃಷ್ಟಿಯಿಂದ ಭದ್ರತೆ ಬಹಳ ಮುಖ್ಯವಾಗಿದ್ದು ಈ ಭಾಗದಲ್ಲಿ ತೆಗೆದುಕೊಳ್ಳಬೇಕಾದ ಕ್ರಮದ ಕುರಿತು ಪರಿಶೀಲಿಸಲು ರೈಲಿನಲ್ಲಿಯೇ ಬಂದಿದ್ದೇನೆ ಎಂದು ಕರ್ನಾಟಕ ರೈಲ್ವೆ ಎಡಿಜಿಪಿ ಭಾಸ್ಕರ್‌ರಾವ್‌ ಹೇಳಿದರು.

ಅವರು ಭಟ್ಕಳದ ಪ್ರವಾಸಿ ಬಂಗಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಭಾಗದಲ್ಲಿ ಹಲವು ಸುರಂಗ ಮಾರ್ಗಗಳು ಹಾದು ಹೋಗಿವೆ. ಅಲ್ಲದೇ ನಕ್ಸ್‌ಲ್‌ ಪ್ರದೇಶದಲ್ಲಿ ಕೂಡಾ ರೈಲ್ವೆ ಹಾದು ಹೋಗಿದ್ದು, ಈ ಭಾಗದಲ್ಲಿ ಕೈಗೊಳ್ಳಬೇಕಾದ ಹೆಚ್ಚಿನ ಸೆಕ್ಯುರಿಟಿ ಹಾಗೂ ಬಂದೋಬಸ್ತ್ ಕುರಿತು ತಿಳಿದು ಕೊಳ್ಳಲು ಉಡುಪಿಯಿಂದ ರೈಲಿನಲ್ಲಿಯೇ ಪ್ರಯಾಣ ಮಾಡಿ ಬಂದಿದ್ದೇನೆ ಎಂದ ಅವರು ಕೆಲವೊಮ್ಮೆ ಏನೂ ಆಗಿಲ್ಲ ಎಂದರೆ ಯಾವುದೂ ಅವಶ್ಯಕತೆ ಇರುವುದಿಲ್ಲ. ಆದರೆ ಏನಾದರೊಂದು ಘಟನೆ ಸಂಭವಿಸಿದ ಮೇಲೆ ಏನೂ ಮಾಡಲಿಕ್ಕಾಗುವುದಿಲ್ಲ. ಅದಕ್ಕಾಗಿಯೇ ಮುಂಜಾಗ್ರತಾ ಕ್ರಮದ ಪರಿಶೀಲನೆ ನಡೆಸಿದ್ದೇನೆ ಎಂದರು.

ರೈಲ್ವೆಯಲ್ಲಿ ಮೊಬೈಲ್‌, ಪರ್ಸ್‌ ಕಳ್ಳತನ ಹಾಗೂ ಮಹಿಳೆಯರ ಸುರಕ್ಷತೆ ಮತ್ತ ರೈಲ್ವೇ ಹಳಿಗಳ ಮೇಲೆ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯುವುದು ನಮ್ಮ ಮುಖ್ಯ ಉದ್ದೇಶಗಳಾಗಿವೆ ಎಂದು ಅವರು ಹೇಳಿದರು. ಉಡುಪಿಯಿಂದ ರೈಲ್ವೆ ಸುರಕ್ಷತೆ ಕುರಿತು ಕೊಂಕಣ ರೈಲ್ವೇ ಮಾರ್ಗದಲ್ಲಿ ಬಂದ ಕೆಲ ಕಿಡಿಗೇಡಿಗಳು ಚಲುಸುತ್ತಿರುವ ರೈಲಿಗೆ ಕಲ್ಲೆಸೆಯುವ ಕೆಲಸ ಮಾಡುತ್ತಾರೆ. ಇದನ್ನೆಲ್ಲಾ ನಿಯಂತ್ರಿಸಲು ನಾವು ರೈಲ್ವೆಯಿಂದ ಸಾಮಾಜಿಕ ಚಳವಳಿಯೊಂದನ್ನು ಮಾಡಿದ್ದು ಗ್ರಾಮೀಣ ಭಾಗದಲ್ಲಿ ಜನರನ್ನು ಜಾಗೃತಗೊಳಿಸಿ ರೈಲ್ವೆ ಹಳಿಯ ಸುರಕ್ಷತೆ ನೋಡಿಕೊಳ್ಳುವಂತೆ ಕೋರುವುದು. ಅಲ್ಲದೇ ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವವರನ್ನು ತಡೆಯುವುದು ಇತ್ಯಾದಿ ಈ ನಮ್ಮ ಸಾಮಾಜಿಕ ಕಳಕಳಿ ತಂಡ ಮಾಡುತ್ತಿದ್ದು ಉತ್ತಮ ಪ್ರತಿಕ್ರಿಯೆ ಬಂದಿದೆ ಎಂದರು.

ರೈಲ್ವೆಯಲ್ಲಿ ಕೆಲವೊಂದು ಮಾರ್ಗಗಳು ಈಗಾಗಲೇ ನೋಟಿಫೈ ಆಗಿದ್ದು ಅವುಗಳ ಸೆಕ್ಯುರಿಟಿಯೊಂದಿಗೆ ಈ ಭಾಗದ ಪರಿಶೀಲನೆಯೂ ಮುಖ್ಯವಾಗಿದೆ. ನಾವು ಪ್ರಯಾಣಿಕರಿಗೆ ಭದ್ರತೆ ವದಗಿ ಸುವುದು ಬಹಳ ಮುಖ್ಯವಾಗಿದ್ದು ಈ ಭಾಗದಲ್ಲಿ ಯಾವ ರೀತಿ ಭದ್ರತೆಯನ್ನು ಪ್ರಯಾಣಿಕರಿಗೆ ಒದಗಿಸಬ ಹುದು ಎಂದು ಪರಿಶೀಲನೆ ನಡೆಸಿದ್ದೇನೆ ಎಂದ ಅವರು, ಜಿಆರ್‌ಪಿ ಮತ್ತು ಆರ್‌ಪಿಎಫ್‌ ಒಟ್ಟಿಗೇ ಸೇರಿ ಬಹಳಷ್ಟು ಕೆಲಸಗಳನ್ನು ಮಾಡಬಹದು ಎಂದರು.

ಈ ಬಗ್ಗೆ ಸಮಗ್ರ ವರದಿಯನ್ನು ಸರಕಾರಕ್ಕೆ ಕೊಟ್ಟು, ಕೊಂಕಣ ರೈಲ್ವೆಗೆ ಭಟ್ಕಳ: ಕರ್ನಾಟಕ ರೈಲ್ವೆ ಎಡಿಜಿಪಿ ಭಾಸ್ಕರ್‌ರಾವ್‌ ಅವರು ಭಟ್ಕಳ ರೈಲ್ವೆ ನಿಲ್ದಾಣಕ್ಕೆ ಬಂದಿಳಿದಿರುವುದು. ತಿಳಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.