ನಾಳೆ ಮೊಗೇರ ಸಮಾಜ ಬೃಹತ್ ಧರಣಿ
ಸೌಲಭ್ಯ ವಂಚಿಸಲು ಕೆಲವು ಸಂಘಟನೆಗಳು ಅಪಪ್ರಚಾರ ಆರಂಭಿಸಿ ಅಧಿಕಾರಿಗಳ ದಿಕ್ಕು ತಪ್ಪಿಸಿದ್ದಾರೆ.
Team Udayavani, Jan 11, 2022, 6:35 PM IST
ಭಟ್ಕಳ: 1976ರಲ್ಲಿ ಪ್ರಾಂತೀಯ ನಿರ್ಬಂಧವನ್ನು ತೆಗೆದು ಹಾಕಿದ ನಂತರ ನಿರಂತರವಾಗಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಬಂದಿದ್ದ ಉತ್ತರ ಕನ್ನಡ ಜಿಲ್ಲಾ ಮೊಗೇರ ಜನಾಂಗದವರಿಗೆ ಪ್ರಮಾಣ ಪತ್ರ ನೀಡುವಲ್ಲಿ ಅಧಿಕಾರಿಗಳು ಅಡ್ಡಗಾಲು ಹಾಕುತ್ತಿರುವುದನ್ನು ವಿರೋಧಿಸಿ ಸರಕಾರ ಹಾಗೂ ಅಧಿಕಾರಿಗಳ ವಿರುದ್ಧ ಜ. 12ರಿಂದ ಬೃಹತ್ ಸಂಖ್ಯೆಯಲ್ಲಿ ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದ್ದು, ಯಾವುದೇ ಕಾರಣಕ್ಕೂ
ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮೊಗೇರ ಸಮಾಜದ ಜಿಲ್ಲಾಧ್ಯಕ್ಷ ಕೆ.ಎಂ. ಕರ್ಕಿ ತಿಳಿಸಿದರು.
ಇಲ್ಲಿನ ವೆಂಕಟಾಪುರದ ಶ್ರೀನಿವಾಸ ಸಭಾಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮಾಜ 1970ರ ದಶಕದಲ್ಲಿ ಅತ್ಯಂತ ಕಡುಬಡತನದಲ್ಲಿ ಜೀವನ ಸಾಗಿಸುತ್ತಿದ್ದು, ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಲು ಆರಂಭಿಸಿದ ನಂತರ ಸಾಮಾಜಿಕ ಜೀವನದಲ್ಲಿ ಸುಧಾರಣೆ ಕಂಡಿತ್ತು. ಆದರೆ ಕಳೆದ ಕೆಲ ವರ್ಷಗಳಿಂದ ನಮ್ಮ ಸಮಾಜಕ್ಕೆ ದೊರೆತ ಸೌಲಭ್ಯ ವಂಚಿಸಲು ಕೆಲವು ಸಂಘಟನೆಗಳು ಅಪಪ್ರಚಾರ ಆರಂಭಿಸಿ ಅಧಿಕಾರಿಗಳ ದಿಕ್ಕು ತಪ್ಪಿಸಿದ್ದಾರೆ.
ನಾವು ಮೀನುಗಾರಿಕೆ ಮಾಡಿ ಬದುಕುತ್ತೇವೆ ಎನ್ನುವುದು ಇದರಲ್ಲಿ ಮುಖ್ಯವಾಗಿದ್ದು, ಅಂದು ನಮಗೆ ಜೀವನೋಪಾಯಕ್ಕಾಗಿ ದೊರೆತಿದ್ದೇ ಮೀನುಗಾರಿಕೆಯಾಗಿತ್ತು. ಇತರೇ ಪರಿಶಿಷ್ಟ ಜಾತಿ/ ಪಂಗಡದಲ್ಲಿಯೂ ಮೂಲ ಕಸುಬನ್ನು ಬಿಟ್ಟು ಬೇರೆ ಕಸುಬನ್ನು ಮಾಡುತ್ತಿರುವ ಉದಾಹರಣೆ
ಇದೆ ಎಂದ ಅವರು, ಅದೇ ಮಾನದಂಡವಲ್ಲ ಎಂದರು.
ಉ.ಕ. ಜಿಲ್ಲೆಯ ಮೊಗೇರ ಜಾತಿಯ ಬಗ್ಗೆ ಈಗಾಗಲೇ ಕರ್ನಾಟಕದ ಉಚ್ಚ ನ್ಯಾಯಾಲಯ, ಸರ್ವೋತ್ಛ ನ್ಯಾಯಾಯಲ, ರಾಷ್ಟ್ರೀಯ ಪರಿಶಿಷ್ಟ ಜಾತಿಯ ಆಯೋಗ ತೀರ್ಪು ನೀಡಿದ್ದರೂ ಅಧಿಕಾರಿಗಳು ಗೊಂದಲ ಸೃಷ್ಟಿಸುವ ದಿನಕ್ಕೊಂದು ಆದೇಶ ಮಾಡುತ್ತಿದ್ದಾರೆ. ಜಾಲಿ ಪಪಂನಲ್ಲಿ ಪರಿಶಿಷ್ಟ ಜಾತಿ ಮೀಸಲಾತಿಯಡಿಯಲ್ಲಿ ಚುನಾವಣೆಗೆ ನಿಂತವರ ಜಾತಿ ಪ್ರಮಾಣ ಪತ್ರವನ್ನೇ ರದ್ದು ಮಾಡಿದ ಜಿಲ್ಲಾಧಿಕಾರಿಗಳ ನಡೆ ಖಂಡನೀಯವಾಗಿದ್ದು, ಅಧಿಕಾರಿಗಳ ದರ್ಪ ಇದೇ ರೀತಿಯಾಗಿ ಮುಂದುವರಿದರೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದರು. ನಮ್ಮ ಸಮಾಜದವರ ಮೇಲೆ ಅನ್ಯಾಯವಾಗಿ ನಡೆಯುತ್ತಿರುವ ಅಕ್ರಮಗಳ ವಿರುದ್ಧ ಹಾಗೂ ಪರಿಶಿಷ್ಟ ಜಾತಿಯ ಸೌಲಭ್ಯವನ್ನು ನ್ಯಾಯಯುತವಾಗಿ ಪಡೆಯಲು ನಮ್ಮ ಧರಣಿ ಸತ್ಯಾಗ್ರಹ ಅನಿವಾರ್ಯವಾಗಿದೆ ಎಂದರು.
ನಮ್ಮ ಸಮಾಜ ಜ. 12ರಂದು ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದು, ನಮ್ಮ ಪ್ರತಿಭಟನೆ ಸಮಾಜದ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಕೋವಿಡ್ ನಿಯಮಾವಳಿಯ ನೆಪವೊಡ್ಡಿ ಅಧಿಕಾರಿಗಳು ನಮ್ಮನ್ನು ತಡೆಯಲು ಸಾಧ್ಯವಿಲ್ಲ.
ಕೆ.ಎಂ. ಕರ್ಕಿ,
ಮೊಗೇರ ಸಮಾಜ ಜಿಲ್ಲಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ