Tragedy; ಅರಣ್ಯ ಇಲಾಖೆ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಸಾವು
Team Udayavani, Jan 8, 2024, 11:49 PM IST
ಕಾರವಾರ: ಕ್ರೀಡಾಕೂಟ ನಡೆಯುವ ವೇಳೆ ಕುಸಿದು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಲೂಕಿನ ಗೋಪಿಶಿಟ್ಟಾ ವಲಯದ ಉಪವಲಯ ಅರಣ್ಯಾಧಿಕಾರಿಯಾಗಿದ್ದ ಸಿಕಂದರ್ .ಐ. ಜಮಾಧಾರ್ ಸೋಮವಾರ ಸಾವನ್ನಪ್ಪಿದ್ದಾರೆ.
ಮೂಲತ ಜಿಲ್ಲೆಯ ಹಳಿಯಾಳ ತಾಲೂಕಿನವರಾಗಿದ್ದ ಸಿಕಂದರ್ ಹಲವು ವರ್ಷಗಳಿಂದ ಕಾರವಾರ ತಾಲೂಕಿನಲ್ಲಿ ಅರಣ್ಯ ಇಲಾಖೆಯಲ್ಲಿ ಸೇವೆಯನ್ನ ಸಲ್ಲಿಸುತ್ತಾ ಬಂದಿದ್ದರು. ಕಾರವಾರ ತಾಲೂಕಿನಲ್ಲಿ ಉತ್ತಮ ಹೆಸರನ್ನ ಸಹ ಗಳಿಸಿದ್ದು ಎಲ್ಲರೊಂದಿಗೂ ಸೌಮ್ಯ ಸ್ವಭಾವದಿಂದ ನಡೆದುಕೊಳ್ಳುವ ಮೂಲಕ ಎಲ್ಲರ ಮೆಚ್ಚುಗೆಗೆ ಕಾರಣರಾಗಿದ್ದರು.
ಕ್ರೀಡಾಪಟುವಾಗಿದ್ದ ಸಿಕಂದರ್ ಕೆನರಾ ಅರಣ್ಯ ವಲಯ ಮಟ್ಟದಲ್ಲಿ ನಡೆದ ಕ್ರೀಡಾಕೂಟದಲ್ಲಿ ಗೆದ್ದು ರಾಜ್ಯ ಮಟ್ಟದ ಅರಣ್ಯ ಇಲಾಖೆಯ ಸಿಬಂದಿಗಳ ಕ್ರೀಡಾಕೂಟ ಕಲಬುರ್ಗಿಯಲ್ಲಿ ಆಯೋಜನೆ ಮಾಡಿದ್ದು ಅದರಲ್ಲಿ ಪಾಲ್ಗೊಂಡಿದ್ದರು.
ಕ್ರೀಡಾಕೂಟದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವೇಳೆಯಲ್ಲಿ ಸಿಕಂದರ್ ಜನವರಿ 5 ರಂದು ಹಠಾತ್ ಕುಸಿದು ಬಿದ್ದಿದ್ದರು. ತತ್ ಕ್ಷಣ ಇತರೇ ಸಿಬಂದಿಗಳು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಿದ್ದು ವೈದ್ಯರು ಚಿಕಿತ್ಸೆ ನೀಡಿದ್ದು ಚೇತರಿಸಿಕೊಂಡಿದ್ದರು. ಅದರೇ ಕೆಲವೇ ಸಮಯದಲ್ಲಿ ಬ್ರೈನ್ ಸ್ಟ್ರೋಕ್ ಆಗಿದ್ದು ಇದರಿಂದ ಕೋಮಾಕ್ಕೆ ಸಿಕಂದರ್ ಹೋಗಿದ್ದರು.
ಸೋಮವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಸಿಕಂದರ್ ಮೃತಪಟ್ಟಿದ್ದಾರೆ. ಸಿಕಂದರ್ ಅವರ ಸಾವಿಗೆ ಕೆನರಾ ಅರಣ್ಯ ವಲಯದ ಹಿರಿಯ ಅಧಿಕಾರಿಗಳು, ಸಿಬಂದಿ ವರ್ಗದವರು, ಕಾರವಾರ ತಾಲೂಕಿನ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ