ಭಟ್ಕಳ: ಮನೆಯ ಹಿಂದುಗಡೆ ಆಟ ಆಡುತ್ತಾ ಆಕಸ್ಮಿಕವಾಗಿ ಮಳೆ ನೀರಿನ ಕಾಲುವೆಗೆ ಬಿದ್ದು ಬಾಲಕ ಸಾವು
Team Udayavani, May 21, 2022, 6:35 PM IST
ಭಟ್ಕಳ: ಅಂಗನವಾಡಿಗೆ ಹೋಗಿ ಬಂದಿದ್ದ ಬಾಲಕನೋರ್ವ ಮನೆಯ ಹಿಂದುಗಡೆ ಆಟವಾಡುತ್ತಾ ಇರುವಾಗ ಮಳೆ ನೀರಿನ ಕಾಲುವೆಯಲ್ಲಿ ಬಿದ್ದು ನೀರು ಕುಡಿದು ಮೃತಪಟ್ಟ ಘಟನೆ ತಾಲೂಕಿನ ಪಡುಶಿರಾಲಿಯಲ್ಲಿ ಸಂಭವಿಸಿದೆ.
ಮೃತ ಬಾಲಕನನ್ನು ವಿಜೇತ ಗಣಪತಿ ನಾಯ್ಕ (4) ಎಂದು ಗುರುತಿಸಲಾಗಿದೆ. ಈತನು ಅಂಗನವಾಡಿಗೆ ಹೋಗಿದ್ದು ಮೇ.20 (ಶುಕ್ರವಾರ) ರಂದು ಮಧ್ಯಾಹ್ನ ಮನೆಗೆ ಬಂದಿದ್ದು ತಾಯಿ ಮನೆಗೆಲಸದಲ್ಲಿರುವಾಗ ಮನೆಯ ಹಿಂದುಗಡೆ ಆಟವಾಡಿಕೊಂಡಿದ್ದ ಎನ್ನಲಾಗಿದೆ.
ಅಕಸ್ಮಿಕವಾಗಿ ಮಳೆ ನೀರು ಹರಿಯುವ ಕಾಲುವೆಗೆ ಬಿದ್ದ ಈತ ನೀರು ಕುಡಿದಿದ್ದು ತಕ್ಷಣ ಗಮನಿಸಿದ ತಾಯಿ ಆತನನ್ನು ಶಿರಾಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋದಾಗ ವೈದ್ಯರು ಮೃತ ಪಟ್ಟಿರುವ ಬಗ್ಗೆ ತಿಳಿಸಿದ್ದಾರೆನ್ನಲಾಗಿದೆ.
ಈ ಕುರಿತು ಮೃತ ಬಾಲಕನ ತಂದೆ ಗಣಪತಿ ಕೃಷ್ಣಾ ನಾಯ್ಕ ಮುರ್ಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದು ದೂರನ್ನು ದಾಖಲಿಸಿಕೊಂಡ ಸಬ್ ಇನ್ಸ್ಪೆಕ್ಟರ್ ಪರಮಾನಂದ ಕೊಣ್ಣೂರ ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು