ಕಾರವಾರ : ಡಿಎಆರ್ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ
Team Udayavani, Dec 8, 2021, 3:43 PM IST
ಕಾರವಾರ : ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಗರದ ಡಿಎಆರ್ ಕಚೇರಿಯಲ್ಲಿ ಇಂದು (ಬುಧವಾರ) ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಹಳದೀಪುರ ನಿವಾಸಿಯಾಗಿರುವ ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆ ಮಾಡಿಕೊಂಡ ಪೇದೆಯಾಗಿದ್ದು, ಬೆಳ್ಳಗ್ಗೆಯೇ ಕಚೇರಿ ಕೆಲಸಕ್ಕೆ ಬಂದಿದ್ದ ಗುರುಪ್ರಸಾದ್ ಅವರು ಕಚೇರಿಯಲ್ಲಿ ಯಾರೂ ಇಲ್ಲದ್ದನ್ನು ನೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗ್ಗೆ ಸುಮಾರು 10.30 ಗಂಟೆಗೆ ಕ್ಲರಿಕಲ್ ಸಿಬ್ಬಂದಿ ಕಚೇರಿಗೆ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಹಿಳಾ ಸಿಬ್ಬಂದಿ ಕಚೇರಿಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ತಲುಪಿಸಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಮಂಗಳೂರು: ಮತಾಂತರ ಯತ್ನ ನಾಲ್ವರ ಸಾವಿಗೆ ಕಾರಣವಾಯ್ತೇ?; ಮಹಿಳೆ ವಶಕ್ಕೆ
ಮೃತದೇಹ ಪೋಸ್ಟ್ ಮಾರ್ಟಂ ಮಾಡಲು ಕಳುಹಿಸಲಾಗಿದೆ. ಆತ್ಮಹತ್ಯೆ ಮಾಡುವ ಮುನ್ನ ಗೆಳೆಯರಿಗೆ ಬಾಕಿಯಿದ್ದ ಹಣ ಬೆಳಗ್ಗೆಯೇ ಮರು ಪಾವತಿಸಿರುವುದು ಗೊತ್ತಾಗಿದೆ.
ಮೊದಲೇ ಆತ್ಮಹತ್ಯೆ ನಿರ್ಧಾರ ಮಾಡಿಕೊಂಡು ಬಂದಿರಬೇಕೆಂದು ಸಹೋದ್ಯೋಗಿಗಳು ಹೇಳಿಕೆ ನೀಡಿದ್ದಾರೆ. ಮೃತರಿಗೆ ಪತ್ನಿ ಹಾಗೂ ಎರಡು ಪುಟ್ಟ ಮಕ್ಕಳಿದ್ದು, ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ.
ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?