TRC ಚುನಾವಣೆ; ರಾಮಕೃಷ್ಣ ಹೆಗಡೆ ಕಡವೆ ಬಳಗಕ್ಕೆ ಭರ್ಜರಿ ಜಯಭೇರಿ
Team Udayavani, Jun 24, 2023, 10:27 PM IST
ಶಿರಸಿ: ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ದಿ ತೋಟಗಾರ್ಸ್ ರೂರಲ್ ಕೋ-ಆಪರೇಟಿವ್ ಅಗ್ರಿಕಲ್ಚರಲ್ ಕ್ರೆಡಿಟ್ ಸೊಸೈಟಿ ಲಿ., (ಟಿಆರ್ಸಿ) ಶಿರಸಿ ಇದರ ಆಡಳಿತ ಮಂಡಳಿಗೆ ಶನಿವಾರ ನಡೆದ ಚುನಾವಣೆಯಲ್ಲಿ ಸಂಸ್ಥೆಯ ಹಾಲಿ ಅಧ್ಯಕ್ಷ ಹಿರಿಯ ಸಹಕಾರಿ ರಾಮಕೃಷ್ಣ ಹೆಗಡೆ ಕಡವೆ ಬಳಗಕ್ಕೆ ಮತದಾರರು ಪ್ರಚಂಡ ಬಹುಮತ ನೀಡಿ ಗೆಲುವನ್ನು ದಾಖಲಿಸಿದ್ದಾರೆ.
ಸಾಮಾನ್ಯ ಕ್ಷೇತ್ರದಿಂದ ಗರಿಷ್ಟ ಮತ ಪಡೆದು ಆಯ್ಕೆಯಾದವರ ಪಟ್ಟಿ ಹೀಗಿದೆ.
ರಾಮಕೃಷ್ಣ ಶ್ರೀಪಾದ ಹೆಗಡೆ ಕಡವೆ, ಗಣಪತಿ ಶೇಷಗಿರಿ ರಾಯ್ಸದ್, ರಮಾಕಾಂತ ವೆಂಕಟ್ರಮಣ ಹೆಗಡೆ ಚಿಪಗಿ, ವಿಘ್ನೇಶ್ವರ ರಾಮಚಂದ್ರ ಹೆಗಡೆ ಅಗಸಾಲ ಕಿಬ್ಬಳ್ಳಿ, ವಿಶ್ವನಾಥ ಗೋಪಾಲಕೃಷ್ಣ ಹೆಗಡೆ ಸೋಮ್ನಳ್ಳಿ, ವಿಶ್ವಾಸ ಪುಂಡಲೀಕ ಬಲ್ಸೆ ಚವತ್ತಿ, ಶಿವಾನಂದ ಗಣಪತಿ ಭಟ್ಟ ನಿಡಗೋಡ, ಸುಬ್ರಾಯ ನಾರಾಯಣ ಹೆಗಡೆ ಹಾವಳಿಮನೆ ವಿಜಯದ ನಗೆ ಬೀರಿದ್ದಾರೆ.
ಹಿಂದುಳಿದ ‘ಬ’ ವರ್ಗದಿಂದ ರಾಮಕೃಷ್ಣ ಹೆಗಡೆ ಕಡವೆ ಬಳಗದಿಂದ ಸ್ಪರ್ಧಿಸಿದ್ದ ಸಂತೋಷಕುಮಾರ ಚಾಮರಾಜ ಗೌಡರ ತೋಟದ ಕಸಗೆ ಗೆಲುವನ್ನು ಕಂಡಿದ್ದಾರೆ. ಒಟ್ಟೂ 2087 ಅರ್ಹ ಶೇರು ಮತದಾರರಲ್ಲಿ ಚಿತ್ರನಟ ನೀರ್ನಳ್ಳಿ ರಾಮಕೃಷ್ಣ, ಶಾಸಕ ಭೀಮಣ್ಣ ನಾಯ್ಕ ಸೇರಿದಂತೆ 1,702 ಶೇರುದಾರರು ಮತವನ್ನು ಚಲಾಯಿಸಿದ್ದರು.
ಇನ್ನುಳಿದಂತೆ ಹಿಂದುಳಿದ ‘ಅ’ 1 ಸ್ಥಾನಕ್ಕೆ ಈರಾ ನಾರಾಯಣ ಗೌಡ ಕಳವೆ, ಸಾಮಾನ್ಯ ಮಹಿಳಾ ಅಭ್ಯರ್ಥಿಗಳ 2 ಸ್ಥಾನಕ್ಕೆ ಹಾಲಿ ನಿರ್ದೇಶಕರುಗಳಾಗಿದ್ದ ಇಂದಿರಾ ಹೆಗಡೆ ಮತ್ತು ಕಲ್ಪನಾ ಕೊಪ್ಪಳ ಅವಿರೋಧವಾಗಿ ಆಯ್ಕೆಯಾಗಿದ್ದರು. ಸಾಮಾನ್ಯ ಕ್ಷೇತ್ರದಿಂದ 8 ಜನರಿಗೆ ಅವಕಾಶವಿದ್ದು, 11 ಜನ ಉಮೇದುವಾರಿಕೆ ತೋರಿದ್ದರು. ಹಿಂದುಳಿದ ವರ್ಗ ‘ಬ’ 1 ಸ್ಥಾನವಿದ್ದು, 2 ಜನರು ಮಾತ್ರ ಉಮೇದುವಾರಿಕೆ ತೋರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ