ಆಧಾರ ನೋಂದಣಿಗೆ ಹರಸಾಹಸ

•ಹೆಚ್ಚಿನ ಕೇಂದ್ರ ತೆರೆಯದ ಸರಕಾರ•ಪ್ರತಿಯೊಂದು ಕೆಲಸಕ್ಕೂ ಆಧಾರ್‌ ಕಾರ್ಡ್‌ ಅಗತ್ಯ

Team Udayavani, Jul 31, 2019, 12:59 PM IST

uk-tdy-3

ಭಟ್ಕಳ: ಆಧಾರ ಕಾರ್ಡ್‌ ನೋಂದಣಿಗಾಗಿ ಸರತಿ ಸಾಲಿನಲ್ಲಿ ನಿಂತ ಜನ.

ಭಟ್ಕಳ: ತಾಲೂಕಿನಲ್ಲಿ ಆಧಾರ ಕಾರ್ಡ್‌ ನೋಂದಣಿ, ತಿದ್ದುಪಡಿಗಾಗಿ ಹರಸಾಹಸ ಪಡಬೇಕಾಗಿ ಬಂದಿದೆ. ಒಂದೆಡೆ ಸರಕಾರ ಎಲ್ಲದಕ್ಕೂ ಆಧಾರ ಕಾರ್ಡ ಕೇಳಿದರೆ, ಇನ್ನೊಂದೆಡೆ ಆಧಾರ ಸೆಂಟರ್‌ಗಳನ್ನೆಲ್ಲ ಮುಚ್ಚಿ ಕೇವಲ ನೆಮ್ಮದಿ ಕೇಂದ್ರ ಮತ್ತು ಅಂಚೆ ಕಚೇರಿಗಳಲ್ಲಿ ಮಾತ್ರ ಆಧಾರ ಕಾರ್ಡ್‌ ನೀಡುವ ಹಾಗೂ ತಿದ್ದುಪಡಿ ಮಾಡಲಾಗುತ್ತಿದ್ದು, ಇದರಿಂದ ಜನ ಸಂಕಟ ಪಡುವಂತಾಗಿದೆ.

ಈ ಹಿಂದೆ ಗ್ರಾಪಂ ಮಟ್ಟದಲ್ಲಿ ಆಧಾರ ಕಾರ್ಡ್‌ ನೋಂದಣಿ ಮಾಡಲಾಗುತ್ತಿದ್ದರೆ ನಂತರದ ದಿನಗಳಲ್ಲಿ ಅವುಗಳನ್ನು ಕೂಡಾ ಬಂದ್‌ ಮಾಡಲಾಯಿತು. ಅಂದು ಆಧಾರ ಕಾರ್ಡ್‌ ಎಲ್ಲ ಕಡೆಗಳಲ್ಲಿಯೂ ಕಡ್ಡಾಯವಲ್ಲದ ಕಾರಣ ಜನತೆ ಹೆಚ್ಚು ಆಸಕ್ತಿ ತೋರಿಸಿಲ್ಲವಾಗಿತ್ತು. ಇಂದು ಆಧಾರ್‌ ಕಡ್ಡಾಯಗೊಳಿಸಿದ ಸರಕಾರ ಆಧಾರ್‌ ಕೇಂದ್ರಗಳನ್ನು ಹೆಚ್ಚುವರಿಯಾಗಿ ತೆರೆದಿಲ್ಲ. ಇದರಿಂದ ನಾಗರಿಕರು ಪರದಾಡುವಂತಾಗಿದೆ.

ಇಲ್ಲಿನ ನೆಮ್ಮದಿ ಕೇಂದ್ರದಲ್ಲಿ ಆಧಾರ ನೋಂದಣಿ, ತಿದ್ದುಪಡಿಗೆ ದಿನಕ್ಕೆ ಕೇವಲ 30 ಜನರಿಗೆ ಮಾತ್ರ ಅವಕಾಶವಿದ್ದು ಟೋಕನ್‌ ಪದ್ಧತಿಯಿಂದ ಜನತೆಗೆ ಅವಕಾಶ ಮಾಡಿಕೊಡುತ್ತಿದ್ದಾರೆ. ದಿನಾಲೂ ನೂರಾರು ಜನ ಟೋಕನ್‌ ಪಡೆಯಲು ಬರುತ್ತಿರುವುದರಿಂದ ಮೊದಲು ಬಂದವರಿಗೆ ಮೊದಲ ಆದ್ಯತೆ ಎನ್ನುವುದರಿಂದ ಬೆಳಗಿನಜಾವ 3 ಗಂಟೆಗೆ ಸರತಿ ಸಾಲು ಆರಂಭವಾಗುತ್ತದೆ. ಇದೇ ರೀತಿ ಅಂಚೆ ಕಚೇರಿ ಎದರು ಕೂಡಾ ಬೆಳಗಿನ ಜಾವ 3-4 ಗಂಟೆಗೆ ಸರತಿಯ ಸಾಲು ಆರಂಭವಾಗುತ್ತಿದೆ. ಮಳೆಯನ್ನೂ ಲೆಕ್ಕಿಸದೇ ಚಿಕ್ಕ ಮಕ್ಕಳೊಂದಿಗೆ ಕೂಡಾ ಅನೇಕರು ಬಂದು ಇಲ್ಲಿ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನಲ್ಲಿ ಕೇವಲ ನೆಮ್ಮದಿ ಕೇಂದ್ರ ಮತ್ತು ಅಂಚೆ ಕಚೇರಿಗಳು ಮಾತ್ರ ಆಧಾರ ಕಾರ್ಡ್‌ ನೋಂದಣಿಗೆ ಕೇಂದ್ರಗಳಾಗಿದ್ದರಿಂದ ಜನತೆಯ ನೆಮ್ಮದಿಯೇ ಹಾಳಾಗಿ ಹೋಗಿದೆ.

ಆಧಾರ್‌ ಕಾರ್ಡ ಪಡೆಯುವಲ್ಲಿ ಹಾಗೂ ತಿದ್ದುಪಡಿ ಮಾಡಿಸುವಲ್ಲಿ ಆಗುತ್ತಿರುವ ತೊಂದರೆ ಜಿಲ್ಲಾಡಳಿತದ ಗಮನದಲ್ಲಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಮಾತ್ರ ಜನತೆಯ ಕುರಿತು ಇವರಿಗಿರುವ ಕಾಳಜಿ ವ್ಯಕ್ತವಾಗುತ್ತದೆ. ತಾಲೂಕಾ ಆಡಳಿತವೂ ಸಹ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕೂಡಾ ಮಾಡದಿರುವುದು ಜನತೆಯನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿದಂತಾಗಿದೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.