ಬಂದರಿನಿಂದ ಮೀನುಗಾರಿಕೆಗೆ ತೊಂದರೆ


Team Udayavani, Jan 28, 2020, 3:12 PM IST

uk-tdy-1

ಹೊನ್ನಾವರ: ಹೊನ್ನಾವರ ಪೋರ್ಟ್‌ ಕಂಪನಿ ಹೆಸರಿನಲ್ಲಿ ಆಂಧ್ರ ಗುತ್ತಿಗೆದಾರರೊಬ್ಬರು ಶರಾವತಿ ಸಂಗಮದ ಅಳವೆ ಸಹಿತ 100 ಎಕರೆ ಭೂಮಿ ಗುತ್ತಿಗೆ ಪಡೆದು ಬಂದರು ನಿರ್ಮಾಣ ಆರಂಭಿಸಿದ್ದಾರೆ.

ಮೀನುಗಾರರಿಗೆ ತೊಂದರೆ ಇಲ್ಲದಂತೆ ಅವರಿಗೆ ಉದ್ಯೋಗಕೊಟ್ಟು, ಬಂದರು ಮಾಡುವುದಾಗಿ ಕೊಟ್ಟ ಭರವಸೆಯನ್ನು ಕಂಪನಿ ಈಡೇರಿಸಿಲ್ಲ. ಅಲ್ಲದೇ ಮೀನುಗಾರಿಕೆಗೆ ತೀವ್ರ ತೊಂದರೆ ಉಂಟಾಗಿದೆ ಎಂದು ಆರೋಪಿಸಿ ತಾಲೂಕಿನ ಎಲ್ಲ ಮೀನುಗಾರರು ಬೃಹತ್‌ ಪ್ರತಿಭಟನೆ ನಡೆಸಿದರು.

ತಹಶೀಲ್ದಾರ್‌ ಕಚೇರಿಗೆ ಬಂದಾಗ ಶಾಸಕರಾದ ದಿನಕರ ಶೆಟ್ಟಿ, ಸುನೀಲ ನಾಯ್ಕ, ಮಾಜಿ ಶಾಸಕ ಮಂಕಾಳು ವೈದ್ಯ ಮೀನುಗಾರರ ಅಹವಾಲನ್ನು ಕೇಳಿ ತಕ್ಕ ಪರಿಹಾರ ಒದಗಿಸುತ್ತೇವೆ. ಮಾತ್ರವಲ್ಲ ಅಲ್ಲಿಯವರೆಗೆ ಕೆಲಸ ನಿಲ್ಲಿಸುತ್ತೇವೆ ಎಂದು ಭರವಸೆಕೊಟ್ಟರು. ಉಪವಿಭಾಗಾಧಿಕಾರಿ ಸಾಜಿದ್‌ ಮುಲ್ಲಾ, ತಹಶೀಲ್ದಾರ್‌ ವಿವೇಕ ಶೇಣಿÌ ಮೊದಲಾದವರು ಉಪಸ್ಥಿತರಿದ್ದರು.

ಮೀನುಗಾರರು ಕೊಟ್ಟ ಮನವಿಯಲ್ಲಿ ಹೀಗೆ ಹೇಳಲಾಗಿದೆ, ಅಳವೆ ಸರಿಪಡಿಸುತ್ತೇವೆ, ಮೀನುಗಾರರನ್ನು ಒಕ್ಕಲೆಬ್ಬಿಸುವುದಿಲ್ಲ, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಮತ್ತು ಮೀನುಗಾರಿಕೆಗೆ ಧಕ್ಕೆ ಉಂಟುಮಾಡುವ ಯಾವುದೇ ಚಟುವಟಿಕೆಯನ್ನು ಮಾಡುವುದಿಲ್ಲ, ಸ್ಥಳೀಯರಿಗೆ ಉದ್ಯೋಗ ಕೊಡುತ್ತೇವೆ. ಪ್ರತ್ಯೇಕ ರಸ್ತೆ ಮಾಡಿಕೊಳ್ಳುತ್ತೇವೆ ಎಂದೆಲ್ಲಾ ಭರವಸೆಕೊಟ್ಟು ಯಾವುದೇ ಭರವಸೆ ಈಡೇರಿಸದೆ ಬೃಹತ್‌ ಯಂತ್ರ ಬಳಸಿ ಇವರ ಬಂದರು ನಿರ್ಮಿಸಲು, ಹೂಳನ್ನು ಶರಾವತಿಗೆ ಸುರಿಯಲಾಗುತ್ತಿದೆ, ಮೀನುಗಾರಿಕಾ ರಸ್ತೆಯನ್ನೇ ಇವರು ಬಳಸುತ್ತಿದ್ದು ರಸ್ತೆ ಹಾಳಾಗಿ ಧೂಳು ತಿನ್ನುವಂತಾಗಿದೆ. ಆದ್ದರಿಂದ ಕಂಪನಿ ಒಪ್ಪಂದವನ್ನೇ ರದ್ದುಪಡಿಸಬೇಕು.

ಮತ್ಸ್ಯಧಾಮದಿಂದ ಮೀನುಗಾರರು ಕಂಗಾಲಾಗಿ ಕಷ್ಟದಲ್ಲಿರುವಾಗ ವಾಣಿಜ್ಯ ಬಂದರನ್ನು ಮೀನುಗಾರಿಕಾ ಬಂದರಿನ ಮುಖಬಾಯಿಯ ಮೇಲೆ ಹೇರಿ ಬಾಯಿ ಮುಚ್ಚಿಸಲಾಗುತ್ತಿದೆ. ಕೂಡಲೇ ಇದನ್ನು ತಡೆಯಬೇಕು. ಒಂದು ವಾರದಲ್ಲಿ ಕ್ರಮಕೈಗೊಳ್ಳದಿದ್ದರೆ ಜಿಲ್ಲಾಮಟ್ಟದ ಮೀನುಗಾರರೆಲ್ಲಾ ಸೇರಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.

ಕಾಸರಕೋಡ ಟೊಂಕದಿಂದ 5ಕಿಮೀ ಮೆರವಣಿಗೆಯಲ್ಲಿ ಬಂದ ಪರ್ಶಿಯನ್‌ ಬೋಟ್‌ ಸಂಘದ ಅಧ್ಯಕ್ಷ ಹಮ್ಜಾ ಪಟೇಲ್‌, ಮೀನುಗಾರ ಕಾರ್ಮಿಕ ಸಂಘದ ಅಧ್ಯಕ್ಷ ಅಶೋಕ ಕಾಸರಕೋಡ, ಟ್ರೋಲರ್‌ ಬೋಟ್‌ ಸಂಘದ ಅಧ್ಯಕ್ಷ ರಾಮಚಂದ್ರ ಹರಿಕಂತ್ರ, ಸಗಟು ಮೀನು ವ್ಯಾಪಾರಸ್ಥ ಸಂಘದ ಗಣಪತಿ ತಾಂಡೇಲ್‌, ಭಾಸ್ಕರ್‌ ತಾಂಡೇಲ್‌ ಸಹಿತ ಎಲ್ಲ ಮುಖಂಡರು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತಹಶೀಲ್ದಾರ್‌ ಕಚೇರಿಗೆ ಹಾಜರಾದರು.

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.