ತಳಗದ್ದೆ ಬೇಣದಲ್ಲಿ ಪತ್ತೆಯಾದ ಸುರಂಗ


Team Udayavani, May 20, 2019, 4:58 PM IST

nc-5

ಕುಮಟಾ: ತಾಲೂಕಿನ ಅಳಕೋಡ ಪಂಚಾಯತ ವ್ಯಾಪ್ತಿಯ ಬಂಡಿವಾಳದ ತಳಗದ್ದೆ ಒಳಬೇಣದಲ್ಲಿ ಆಕಸ್ಮಿಕವಾಗಿ ಸುರಂಗ ವೊಂದು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಹೆಬ್ಟಾರ ಮನೆತನಕ್ಕೆ ಸಂಬಂಧಪಟ್ಟ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಬೇಕಾದ ಕೆಂಪುಕಲ್ಲು ತೆಗೆಯುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕೆಂಪುಕಲ್ಲು ತೆಗೆಯುವ ಸ್ಥಳದಲ್ಲಿ ಜೆಸಿಬಿಯಿಂದ ಸ್ವಚ್ಛಗೊಳಿಸುವಾಗ ಭೂಮಿಯೊಳಗೆ ವಿಶಾಲವಾದ ಟೊಳ್ಳು ಇರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಯಂತ್ರದಲ್ಲಿ ಆ ಸ್ಥಳ ಕೊರೆಯುವಾಗ ಸುರಂಗದ ಮೇಲ್ಭಾಗ ಕುಸಿದು ಚಿಕ್ಕ ರಂಧ್ರವಾಗಿದೆ. ಸ್ಥಳೀಯರು ಕುತೂಹಲದಿಂದ ಆ ರಂಧ್ರವನ್ನು ದೊಡ್ಡದು ಮಾಡಿ ಒಳಗಿಳಿದು ಪರಿಶೀಲಿಸಿದ್ದಾರೆ.

ಇದು ಬೃಹತ್‌ ಸುರಂಗವಾಗಿದ್ದು, ಒಳಗೆ ಹೆಡ್‌ಲೈಟ್ನಿಂದ ಬೆಳಕು ಹಾಯಿಸಿದರೆ 250 ಮೀ.ಗೂ ಅಧಿಕ ದೂರ ಹೋಗುತ್ತದೆ. ಒಳಗಡೆ ಉಸಿರಾಡಲು ಕಷ್ಟವಾಗುವುದರಿಂದ ಅಪಾಯದ ಭಯವಿದೆ. ಇನ್ನು ಕೆಳಗಡೆ ಹೂಳು ತುಂಬಿರುವುದರಿಂದ ಕಾಲು ಹುಗಿಯುತ್ತದೆ. ಆದ್ದರಿಂದ ಸುರಂಗ ಎಷ್ಟು ಉದ್ದವಿದೆ ಎಂದು ನೋಡಲು ಸಾಧ್ಯವಾಗಿಲ್ಲ. ಸುರಂಗದ ಗೋಡೆಗಳು ಸಪಾಟಾಗಿದ್ದು ಮಳೆಗಾಲದಲ್ಲಿ ಬೃಹತ್‌ ನೀರಿನ ಹರಿವಿನ ಲಕ್ಷಣ ಹೊಂದಿರಬಹುದು ಎಂದು ಸ್ಥಳೀಯರು ಉಹಿಸಿದ್ದಾರೆ.

ಕೆಲ ವರ್ಷಗಳ ಹಿಂದೆ ಅಳಕೋಡ ಗ್ರಾಪಂ ವ್ಯಾಪ್ತಿಯ ಕಂದಳ್ಳಿ, ಮಾಸ್ತಿ ಹಳ್ಳದಂತಹ ಸ್ಥಳಗಳಲ್ಲಿ ಪುರಾತನ ದೇವಾಲಯಗಳ ಹಾಗೂ ರಾಜ ಮನೆತನದ ಕೆಲ ಕುರುಹುಗಳು ದೊರೆತಿವೆ. ಬಂಡಿವಾಳದಲ್ಲಿ ಕಂಡು ಬಂದ ಸುರಂಗ ಮಾನವ ನಿರ್ಮಿತವೇ ಇರಬಹುದು ಎಂಬ ಅನುಮಾನವನ್ನು ಹಿರಿಯರು ವ್ಯಕ್ತಪಡಿಸಿದ್ದಾರೆ. ಆದರೆ ಭೂಮಿಯೊಳಗಿನ ನೀರಿನ ಹರಿವಿನ ನೈಸರ್ಗಿಕ ಟೊಳ್ಳು ಎಂಬುದು ಮೇಲ್ನೋಟಕ್ಕೆ ಅರ್ಥವಾಗುವಂಥದ್ದು. ಒಟ್ಟಾರೆ ಬಂಡಿವಾಳದ ಸುರಂಗ ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದ್ದಲ್ಲದೇ, ಜನರ ಆಕರ್ಷಣೆಯ ಸ್ಥಳವೂ ಹೌದು.

ಆಕಸ್ಮಿಕವಾಗಿ ಇಲ್ಲಿ ಕಂಡುಬಂದ ಸುರಂಗ ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ. ಸುರಂಗ ಸಂಪೂರ್ಣ ಲ್ಯಾಟ್ರೈಟ್ ಕಲ್ಲಿನಿಂದ ಕೂಡಿದ್ದು, ಇದಕ್ಕೆ ಐತಿಹಾಸಿಕ ಹಿನ್ನೆಲೆ ಇದೆಯೋ ಅಥವಾ ನೀರಿನ ಹರಿವಿನಿಂದ ಸೃಷ್ಟಿಯಾಗಿದೆಯೋ ಎಂಬುದು ತಿಳಿದಿಲ್ಲ. ಸುರಂಗದ ವಿಸ್ತೀರ್ಣವನ್ನು ತಜ್ಞರೇ ಕಂಡುಹಿಡಿಯಬೇಕಿದೆ.
• ಜಿ.ಎಸ್‌.ಹೆಬ್ಟಾರ, ಸ್ಥಳೀಯ ನಿವಾಸಿ

ಕುಮಟಾ: ತಾಲೂಕಿನ ಅಳಕೋಡ ಪಂಚಾಯತ ವ್ಯಾಪ್ತಿಯ ಬಂಡಿವಾಳದ ತಳಗದ್ದೆ ಒಳಬೇಣದಲ್ಲಿ ಆಕಸ್ಮಿಕವಾಗಿ ಸುರಂಗ ವೊಂದು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಹೆಬ್ಟಾರ ಮನೆತನಕ್ಕೆ ಸಂಬಂಧಪಟ್ಟ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಬೇಕಾದ ಕೆಂಪುಕಲ್ಲು ತೆಗೆಯುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕೆಂಪುಕಲ್ಲು ತೆಗೆಯುವ ಸ್ಥಳದಲ್ಲಿ ಜೆಸಿಬಿಯಿಂದ ಸ್ವಚ್ಛಗೊಳಿಸುವಾಗ ಭೂಮಿಯೊಳಗೆ ವಿಶಾಲವಾದ ಟೊಳ್ಳು ಇರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಯಂತ್ರದಲ್ಲಿ ಆ ಸ್ಥಳ ಕೊರೆಯುವಾಗ ಸುರಂಗದ ಮೇಲ್ಭಾಗ ಕುಸಿದು ಚಿಕ್ಕ

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.