ಧರ್ಮಾ ಜಲಾಶಯ ಭರ್ತಿ : ರೈತರ ಮೊಗದಲ್ಲಿ ಹೆಚ್ಚಿದ ಸಂತಸ
Team Udayavani, Aug 2, 2021, 12:27 PM IST
ಮುಂಡಗೋಡ : ತಾಲೂಕಿನ ಮಳಗಿ ಪಂಚಾಯಿತಿ ವ್ಯಾಪ್ತಿಯ ಧರ್ಮಾ ಜಲಾಶಯ ಭರ್ತಿಯಾಗಿ ಕೋಡಿ ಹರಿಯುತ್ತಿದ್ದು ರೈತರಲ್ಲಿ ಸಂತಸ ಮೂಡಿದರೇ, ಪ್ರವಾಸಿಗರು ತಂಡೋಪತಂಡವಾಗಿ ಬಂದು ಜಲಾಶಯದ ಸೊಬಗನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
ಧರ್ಮಾ ಜಲಾಶಯ ಭರ್ತಿಯಾಗಿದೆ ಎಂಬ ಸುದ್ದಿಯಿಂದ ತಾಲೂಕಿನವರಿಗಿಂತ ಹಾನಗಲ್ ತಾಲೂಕಿನವರೇ ಹೆಚ್ಚು ಖುಷಿಯಲ್ಲಿದ್ದಾರೆ. ಏಕೆಂದರೆ ಈ ಧರ್ಮಾ ಜಲಾಶಯದ ನೀರು ಮುಂಡಗೋಡ ತಾಲೂಕಿನ ರೈತರಿಗಿಂತ ಹಾನಗಲ್ ತಾಲೂಕಿನ ರೈತರಿಗೇ ಹೆಚ್ಚು ಉಪಯೋಗ. ಧರ್ಮಾ ಜಲಾಶಯ ಭರ್ತಿಯಾಗಿರುವುದರಿಂದ ನೋಡುಗರ ಕಣ್ಣಿಗೆ ಹಬ್ಬವನ್ನುಂಟು ಮಾಡುತ್ತಿದೆ. ಸತತ ಮೂರು ವರ್ಷದಿಂದ ಜಲಾಶಯ ಭರ್ತಿಯಾಗಿ ಕೋಡಿ ಬೀಳುತ್ತಿದ್ದು ಪ್ರತಿ ವರ್ಷದಂತೆ ಈ ವರ್ಷವು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬಂದು ಕೋಡಿ ಬೀಳುವ ಸ್ಥಳದಲ್ಲಿ ನಿಂತು ಪೋಟೊ ಕ್ಲಿಕಿಸಿಕೊಂಡು ಕೆಲ ಸಮಯ ಕಳೆದು ಜಲಾಶಯದ ಮನೋಹರ ದೃಶ್ಯವನ್ನು ಕಣ್ತುಂಬಿಸಿಕೊಂಡು ಹೋಗುತ್ತಿದ್ದಾರೆ.
ಇದನ್ನೂ ಓದಿ : ಪಕ್ಷ ಸಂಘಟನೆಗೆ ಅಧಿಕಾರವೇ ಬೇಕು ಎಂದೇನಿಲ್ಲ: ಸುಳಿವು ನೀಡಿದ ಈಶ್ವರಪ್ಪ
ತಾಲೂಕಿನಲ್ಲಿ ಯಮಗಳ್ಳಿ ಹಳ್ಳಿ ಬಳಿ ಧರ್ಮಾ ನದಿಗೆ 1964 ರಲ್ಲಿ ಆಣೆಕಟ್ಟು ಕಟ್ಟಲಾಯಿತು. ಈ ಜಲಾಶಯದಿಂದ ರೈತರ ಹೊಲಗದ್ದೆಗಳಿಗೆ ತುಂಬಾ ಉಪಯೋಗವಾಗಿದೆ. ಧರ್ಮಾ ಜಲಾಶಯ ಮುಂಡಗೋಡ ತಾಲೂಕಿನಲ್ಲಿದ್ದರು ಇದರ ಪ್ರಯೋಜನ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ರೈತರಿಗಾಗುತ್ತಿದೆ. ಅಂದರೆ ಮುಂಡಗೋಡ ತಾಲೂಕಿನ ನೂರಾರು ಎಕರೆ ಜಮೀನುಗಳಿಗಷ್ಟೇ ಈ ಜಲಾಶಯದ ನೀರು ಪೂರೈಕೆಯಾಗುತ್ತಿದ್ದರೆ, ಹಾನಗಲ್ ತಾಲೂಕಿನ ಸಾವಿರಾರು ಎಕರೆ ಪ್ರದೇಶದ ಜಮೀನುಗಳಿಗೆ ನೀರು ಉಪಯೋಗವಾಗುತ್ತಿದೆ. ಈ ಜಲಾಶಯವು ಸದ್ಯ ಹಾನಗಲ್ ಚಿಕ್ಕ ನೀರಾವರಿ ಇಲಾಖೆಯ ಅಧೀನದಲ್ಲಿದೆ. ಒಟ್ಟಿನಲ್ಲಿ ಈ ಜಲಾಶಯದಿಂದ ನೂರಾರು ರೈತರಿಗೆ ಅನುಕೂಲವಾಗುತ್ತಿದೆ.
ತಾಲೂಕಿನಲ್ಲಿ ನಿರ್ಮಾಣಗೊಂಡ ಪ್ರಥಮ ಆಣೆಕಟ್ಟು ಎಂಬ ಹೆಗ್ಗಳಿಕೆಗೆ ಪಾತ್ರವಾದ ಈ ಧರ್ಮಾ ಜಲಾಶಯ ಇಂದು ತುಂಬಿ ಹರಿಯುತ್ತಿರುವ ಕಾರಣ ಈ ಜಲಾಶಯ ಪ್ರದೇಶದ ರೈತರಲ್ಲಿ ಸಂತೋಷವನ್ನುಂಟು ಮಾಡಿದೆ. ಜಲಾಶಯದ ಅಕ್ಕ-ಪಕ್ಕದ ರೈತರು, ಹಾಗೂ ಹಾನಗಲ್ದ ರೈತರು ಬಂದು ತುಂಬಿರುವ ಜಲಾಶಯಕ್ಕೆ ಪೂಜೆ ಸಲ್ಲಿಸಿ ಹೋಗುತ್ತಿದ್ದಾರೆ.
ವಡಕಪ್ಪ ನಿಗೂಣಿ, ಮಳಗಿ ಗ್ರಾಮದ ನಿವಾಸಿ: ಪ್ರಕೃತಿಯ ವಿಶಿಷ್ಟ ಕೊಡುಗೆಯಿಂದಾಗಿ ಕಂಗೊಳಿಸುತ್ತಿರುವ ಜಲಾಶಯಕ್ಕೆ ಪ್ರತಿ ವರ್ಷವು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಈ ಸ್ಥಳದಲ್ಲಿ ಉತ್ತಮ ಉದ್ಯಾನವನ, ವಿದ್ಯುತ್ ಅಲಂಕಾರಗಳೊAದಿಗೆ ಈ ಜಲಾಶಯದ ಸೊಬಗನ್ನು ಹೆಚ್ಚಿಸಬಹುದಾಗಿದೆ. ಈ ಜಲಾಶಯದತ್ತ ಪ್ರವಾಸಿಗರನ್ನು ಆಕರ್ಷಿಸಲು ಹಲವಾರು ಯೋಜನೆಗಳನ್ನು ಇಲಾಖೆ ಹಮ್ಮಿಕೊಂಡು ಇದನ್ನು ಪ್ರವಾಸಿ ತಾಣವಾಗಿ ರೂಪಿಸಿದರೇ ಇದೊಂದು ಪ್ರವಾಸ ಸ್ಥಳವಾಗಿ ಪ್ರಸಿದ್ಧಗೊಳ್ಳುತ್ತದೆ.
ಧರ್ಮಾ ಜಲಾಶಯದ ನಿರಾಶ್ರಿತರಿಗೆ ಹಂಚಿಕೆ ಮಾಡಿದ ಜಮೀನುಗಳ ಹಾಗೂ ಮನೆಯ ಜಾಗದ ಆರ್.ಟಿ.ಸಿ. ಮಾತ್ರ ತಯಾರಿಸಿ ಕೆ.ಜೆ.ಪಿ. ಮಾಡದೇ ಹಾಗೆಯೇ ಬಿಟ್ಟಿದ್ದ ಪರಿಣಾಮ ಸರಕಾರದ ಯೋಜನೆಗಳ ಸೌಲಭ್ಯ ಪಡೆಯುವಲ್ಲಿ ಫಲಾನುಭವಿಗಳಿಗೆ ಹಿನ್ನಡೆಯಾಗುತ್ತಿದೆ.
ಇದನ್ನೂ ಓದಿ : ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 333 ಅಂಕ ಜಿಗಿತ, 15,850ರ ಗಡಿ ತಲುಪಿದ ನಿಫ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್