ವಿದ್ಯುಚ್ಛಕ್ತಿ ಮಸೂದೆ 2021ನ್ನು ವಿರೋಧಿಸಿ ವಿದ್ಯುತ್ ನಿಗಮದ ನೌಕರರ ಸಂಘದಿಂದ ಪ್ರತಿಭಟನೆ


Team Udayavani, Aug 8, 2021, 3:35 PM IST

Udayavani Dandeli News

ದಾಂಡೇಲಿ : ಸಂಸತ್ತಿನ ಅಧಿವೇಶನದಲ್ಲಿ ಮಂಡಿಸಲಿರುವ ವಿದ್ಯುಚ್ಛಕ್ತಿ (ತಿದ್ದುಪಡಿ) ಮಸೂದೆ 2021 ನ್ನು ವಿರೋಧಿಸುವ ಸಲುವಾಗಿ, ಅಖಿಲ ಭಾರತ ವಿದ್ಯುತ್ ನೌಕರರ ಒಕ್ಕೂಟದ ನಿರ್ದೇಶನದಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘ ಮತ್ತು ಸಂಘ ಸಂಸ್ಥೆಗಳ ಒಕ್ಕೂಟದ ಪದಾಧಿಕಾರಿಗಳನ್ನೊಳಗೊಡು ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ದಿನಾಂಕ:10.08.2021 ರಂದು ಪ್ರತಿಭಟನೆಯನ್ನು ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಶಾಖಾ ಕಛೇರಿ, ಉಪ ವಿಭಾಗ, ವಿಭಾಗ, ವಲಯ, ವೃತ್ತ ಮತ್ತು ಕಂಪನಿಗಳ ಮಟ್ಟದಲ್ಲಿ ಆ: 10 ರಂದು ಸಾಂಕೇತಿಕವಾಗಿ ಒಂದು ದಿನದ ಕೆಲಸ ಬಹಿಷ್ಕಾರಹೋರಾಟ ನಡೆಯಲಿದೆ. ಈ ಹೋರಾಟದಲ್ಲಿ ಕ.ವಿ.ಪ್ರ.ನಿಗಮದ ನೌಕರರ ಎಲ್ಲಾ ಸಂಘ ಸಂಸ್ಥೆಗಳ ಒಕ್ಕೂಟದವರೆಲ್ಲರೂ ಒಗ್ಗಟ್ಟಿನಿಂದ ಪಾಲ್ಗೊಳುತ್ತಿರುವುದಲ್ಲದೇ ಈ ಪ್ರತಿಭಟನೆಗೆ ರೈತ ಸಂಘಟನೆಗಳು, ವಿವಿಧ ಕಾರ್ಮಿಕ ಸಂಘಟನೆಗಳು, ಅಭಿವೃದ್ದಿಪರ ಸಂಘಟನೆಗಳು ಮತ್ತು ಸಾರ್ವಜನಿಕ ಸಂಘ ಸಂಸ್ಥೆಗಳು ಸಹ ಕೈಜೋಡಿಸಲಿವೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಾಣೇಶ.ಆರ್.ಮುಗಳಿಹಾಳ ತಿಳಿಸಿದ್ದಾರೆ.

ಇದನ್ನೂ ಓದಿ : ಗೋವಾ ವಾಸ್ಕೊ ವಿಮಾನ ನಿಲ್ದಾಣದಿಂದ ಯುಎಇ ವಿಮಾನ ಹಾರಾಟ ಆರಂಭ

ಅವರು ಭಾನುವಾರ ನಗರದ ಹೆಸ್ಕಾಂ ಕಚೇರಿ ಆವರಣದಲ್ಲಿ ಇರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ಸ್ಥಳೀಯ ಘಟಕದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಹೇಳಿದರು. ನಿಗಮದ ನೌಕರರು ಮತ್ತು ಸಾರ್ವಜನಿಕರ ವಿರೋಧದ ನಡುವೆಯೂ ಕೇಂದ್ರ ಸರಕಾರ ವಿದ್ಯುತ್ ಕಾಯಿದೆ-2003 ಕ್ಕೆ ತಿದ್ದುಪಡಿ ತಂದಿದ್ದೇ ಆದರೆ ರೈತರಿಗೆ ಹಾಗೂ ಬಡವರಿಗೆ ನೀಡುತ್ತಿರುವ ಭಾಗ್ಯಜ್ಯೋತಿ ಉಚಿತ ವಿದ್ಯುತ್ ಸ್ಥಗಿತಗೊಳ್ಳಲಿದೆ. ವಿದ್ಯುತ್ ದರ ಏರಿಕೆಯಿಂದ ಜನ ತತ್ತರಿಸಲಿದ್ದಾರೆ.

ಈ ಉದ್ಯಮವನ್ನೇ ನಂಬಿರುವ ವಿದ್ಯಾವಂತ ಯುವಕ, ಯುವತಿಯರು ಅಧಿಕ ಸಂಖ್ಯೆಯಲ್ಲಿ ನಿರುದ್ಯೋಗಿಗಳಾಗುವ ಆತಂಕ ಎದುರಾಗಲಿದೆ. ವಿದ್ಯುತ್ ಸೌಲಭ್ಯ ಬಂಡವಾಳ ಶಾಹಿಗಳ ಅಧೀನಕ್ಕೆ ಒಳಪಟ್ಟರೆ ಅವರು ನಿಗಧಿ ಪಡಿಸುವ ದರವನ್ನೇ ಒಪ್ಪಿಕೊಳ್ಳುವುದು ಆನಿವಾರ್ಯವಾಗಲಿದೆ. ಖಾಸಗೀಕರಣದಿಂದ ಎಲ್ಲಾ ಜಕಾತಿಯ ಸ್ಥಾವರಗಳಿಗೆ ಪ್ರಿಪೇಡ್ ಮೀಟರ್ ಗಳನ್ನು ಅಳವಡಿಸುವುದರಿಂದ ಗ್ರಾಹಕರಿಗೆ ಹೆಚ್ಚಿನ ಹೊರೆಯಾಗಲಿದೆ. ಕೇಂದ್ರ ಸರಕಾರ ಖಾಸಗೀಕರಣ ಕುರಿತು ಸಂಸತ್ ಆಧೀವೇಶನದಲ್ಲಿ ಮಂಡಿಸಲಿರುವ ವಿದ್ಯುಚ್ಛಕ್ತಿ (ತಿದ್ದುಪಡಿ) ಮಸೂದೆ 2021 ನ್ನು ಕೈಬಿಡಬೇಕು. ಈ ಮನವಿಗೆ ಮನ್ನಣೆ ದೊರಕದಿದ್ದ ಪಕ್ಷದಲ್ಲಿ ನಿಗಮದ ನೌಕರರು ಹಾಗೂ ರೈತರು ರಾಷ್ಟ್ರವ್ಯಾಪಿ ಹೋರಾಟ ಮುಂದುವರಿಸುವುದು ಅನಿವಾರ್ಯವಾಗಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರಕಾರ ಕೂಡಲೆ ಮನವಿಗೆ ಸ್ಪಂದಿಸಬೇಕೆಂದು ಪ್ರಾಣೇಶ.ಆರ್.ಮುಗಳಿಹಾಳ ಅವರು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ನಿಗಮದ ನಿವೃತ್ತ ಪಿಂಚಣಿದಾರರ ಸಂಘದ ಕೇಂದ್ರ ಸಮಿತಿ ಸದಸ್ಯರಾದ ಗುರುರಾಜ ಪುರೋಹಿತ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ಸ್ಥಳೀಯ ಸಮಿತಿ ಅಧ್ಯಕ್ಷ ಮಾರತಿ ಎಪ್ ನಾಯ್ಕ, ಸ್ಥಳೀಯ ಸಮಿತಿಯ ಪ್ರಮುಖರುಗಳಾದ ವಿಶ್ವನಾಥ ಗಾಂಜಿ, ಸುದೇಶ ಕುದಳೆ, ಕುಮಾರ ಕರಗಯ್ಯಾ, ಜೆ.ಐ.ರೋಣ, ಸುಭಾಷ ಗೌಡಾ, ಮಂಜುನಾಥ ನಾಯ್ಕ, ವೀರಭದ್ರ ಗೌಡಾ, ಉಮೇಶ ಚಕಡಿ, ಹೆಸ್ಕಾಂ ಸಹಾಯಕ ಅಭಿಯಂತರ ವೇಂಕಟೇಶ ತಳೇಕರ, ಶಾಖಾಧಿಕಾರಿ ಪರಶುರಾಮ ಉಪ್ಪಾರ, ಸಹಾಯಕ ಲೆಕ್ಕಾಧಿಕಾರಿ ಸಚಿನ್ ನಾಡಕರ್ಣಿ, ನಿವೃತ್ತ ನೌಕರ ಛಾಯಪ್ಪಾ ಹಾಗೂ ನಿಗಮದ ನೌಕರರ ಹಳಿಯಾಳ ಪ್ರಾಥಮಿಕ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಕಾಲು ಜಾರಿ ಬಿದ್ದ ಹಿರಿಯ ನಟಿ ಲೀಲಾವತಿ : ಸೊಂಟ ಹಾಗೂ ಕಾಲಿಗೆ ಪೆಟ್ಟು

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.